ಆಂಧ್ರ ಪ್ರದೇಶ ಬಂದ್: ಸಾರಿಗೆ ಸೇವೆ ಅಮಾನತು,ಶಾಲೆ ಕಾಲೇಜು ಇಲ್ಲ
Team Udayavani, Feb 8, 2018, 11:59 AM IST
ಅಮರಾವತಿ : ಆಂಧ್ರ ಪ್ರದೇಶ ಪುನರ್ ಸಂಘಟನೆ ಕಾಯಿದೆಯನ್ನುಅನುಷ್ಠಾನಿಸುವಲ್ಲಿನ ಕೇಂದ್ರ ಸರಕಾರದ ವೈಫಲ್ಯವನ್ನು ಪ್ರತಿಭಟಿಸಿ ವಿರೋಧ ಪಕ್ಷಗಳು ಕರೆ ನೀಡಿರುವ ಒಂದು ದಿನದ ಬಂದ್ ಆಂಧ್ರ ಪ್ರದೇಶದದಲ್ಲಿ ಇಂದು ಗುರುವಾರ ಬೆಳಗ್ಗೆ ಆರಂಭವಾಗಿದೆ.
ರಾಜ್ಯ ಸರಕಾರಿ ಬಸ್ಸುಗಳು ಬಂದ್ನಿಂದಾಗಿ ಇಂದು ರಸ್ತೆಗಿಳಿದಿಲ್ಲ; ರಾಜ್ಯಾದ್ಯಂತದ ಶಾಲೆ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಇಂದು ಮುಚ್ಚಲಾಗಿದೆ. ಬಂದ್ ಶಾಂತಿಯುತವಾಗಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.
ಇದೇ ವೇಳೆ ಆಳುವ ತೆಲುಗು ದೇಶಂ ಪಕ್ಷ ಇಂದು, ರಾಜ್ಯದ ಹಕ್ಕುಗಳಿಗಾಗಿ ಸಂಸತ್ತಿನಲ್ಲಿ ಹೋರಾಡುತ್ತಿರುವ ರಾಜ್ಯಾದ್ಯಂತ ತನ್ನ ಸಂಸದರಿಗೆ ಬೆಂಬಲ ಸೂಚಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುವ ರಾಲಿಗಳನ್ನು ನಡೆಸುತ್ತಿದೆ.
ಈ ಹೋರಾಟಕ್ಕಾಗಿ ರಾಜ್ಯದ ಜನರು ಒಗ್ಗಟ್ಟಿನಿಂದ ಬೆಂಬಲಿಸಬೇಕು ಎಂದು ಟಿಡಿಪಿ ಅಧ್ಯಕ್ಷ ಹಾಗೂ ಇಂಧನ ಸಚಿವ ಕಿಮಿಡಿ ಕಲಾ ವೆಂಕಟ ರಾವ್ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.