ದಕ್ಷಿಣ ಕನ್ನಡ: ಕೆಲ ಅಪರಾಧ ಸುದ್ದಿಗಳು (ಫೆ 8)
Team Udayavani, Feb 9, 2018, 11:13 AM IST
ಮೊಬೈಲ್ ಕಳವು: ಇಬ್ಬರ ಬಂಧನ
ಉಳ್ಳಾಲ: ಮುಡಿಪು ಜಂಕ್ಷನ್ನ ಕೃಷ್ಣ ಕಮ್ಯುನಿಕೇಷನ್ನಿಂದ ಮೊಬೈಲ್ ಕದ್ದ ಆರೋಪಿಗಳಲ್ಲಿ ಇಬ್ಬರನ್ನು ಕೊಣಾಜೆ ಪೊಲೀಸರು ಬಂಧಿಸಿ, ಮೊಬೈಲ್ ಸಹಿತ ಕಳವಿಗೆ ಬಳಸಿದ ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ಮಂಜೇಶ್ವರ ವರ್ಕಾಡಿ ಗ್ರಾಮದ ತಲೆಕ್ಕಿ ಬೊಳಾ¾ರ್ನ ನಿವಾಸಿಗಳಾದ ಝಿಯಾದ್(19) ಹಾಗೂ ಮಹಮ್ಮದ್ ಅಶ್ರಫ್ ಯಾನೆ ಇರ್ಫಾನ್ (19) ಅವರನ್ನು ಬಾಳೆಪುಣಿ ಗ್ರಾಮದ ಗರಡಿಪಳ್ಳ ಬಳಿ ಬಂಧಿಸಲಾಗಿದೆ. ಉಳಿದ ಆರೋಪಿಗಳಿಗೆ ಶೋಧ ಮುಂದುವರಿದಿದೆ.
ಕಾರು – ಬೈಕ್ ಢಿಕ್ಕಿ:ಇಬ್ಬರಿಗೆ ಗಾಯ
ಮೂಲ್ಕಿ: ಇಲ್ಲಿನ ಕಾರ್ನಾಡು ಗೇರುಕಟ್ಟೆ ಬಳಿ ಕಾರೊಂದು ಬೆೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚ್ಚೇರಿಪೇಟೆ ಜಾರಿಗೆಕಟ್ಟೆ ನಿವಾಸಿಗಳಾದ ನವೀನ (28) ಮತ್ತು ರಾಘವೇಂದ್ರ (29) ಬೆೈಕ್ನಲ್ಲಿ ಬರುತ್ತಿದ್ದಾಗ ಬಜಪೆ ಕಡೆಗೆ ಹೋಗುತ್ತಿದ್ದ ಕಾರಿನ ಚಾಲಕನ ನಿರ್ಲಕ್ಷ್ಯದಿಂದ ಅಫಘಾತ ಸಂಭವಿಸಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಬೆೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ರಿಕ್ಷಾ – ಕಾರು ಢಿಕ್ಕಿ: ಮಹಿಳೆಗೆ ಗಾಯ
ಮೂಲ್ಕಿ: ಇಲ್ಲಿಯ ಲಿಂಗಪಯ್ಯ ಕಾಡು ವನಭೋಜನ ಬಳಿ ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪ್ರಯಾಣಿಕರೋರ್ವರು ಗಾಯಗೊಂಡಿದ್ದಾರೆ. ಢಿಕ್ಕಿ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿದ್ದ ಮಹಿಳೆ ಬಿಂದೂ ಅವರು ಗಾಯಗೊಂಡಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಕೆಲವು ಸಮಯದಿಂದ ವನಭೋಜನ ಬಳಿಯ ಏರು ಪ್ರದೇಶದಲ್ಲಿ ನಿರಂತರ ಅಪಘಾತಗಳು ನಡೆಯುತ್ತಿದೆ.
ಆತ್ಮಹತ್ಯೆ
ಬೆಳ್ತಂಗಡಿ: ನಗರದ ಹುಣ್ಸೆಕಟ್ಟೆ ಗುಂಡಿಕಾಡು ನಿವಾಸಿ ಲಕೀÒ$¾ (58) ಗುರುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷದ ಹಿಂದೆ ಅಪಘಾತವಾಗಿ ಅನಾರೋಗ್ಯದಿಂದಿದ್ದರು. ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.