ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಧರಣಿ 


Team Udayavani, Feb 9, 2018, 11:51 AM IST

m6-guttige.jpg

ಹುಣಸೂರು: ನಗರಸಭೆಯ ಗುತ್ತಿಗೆ ಪೌರಕಾರ್ಮಿಕರಿಗೆ ಕಳೆದ 5 ತಿಂಗಳಿಂದ ವೇತನ ನೀಡದಿರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರು ಹಾಗೂ ಗುತ್ತಿಗೆ ನೌಕರರು ಗುರುವಾರ ಹುಣಸೂರು ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಮುನೇಶ್ವರಕಾವಲ್‌ ಮೈದಾನದಲ್ಲಿ ಪ್ರತಿಭಟನಾ ಧರಣಿ ನಡೆಸಿದ ಪೌರಕಾರ್ಮಿಕರು ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಧರಣಿಯಲ್ಲಿ ಮಾತನಾಡಿದ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮುರುಗೇಶ್‌, ನಗರದ ಸ್ವತ್ಛತೆಗೆ ಹಗಲಿರುಳು ದುಡಿಯುವ ನಮಗೆ ಕಳೆದ 5 ತಿಂಗಳಿನಿಂದ ವೇತನ ನೀಡದೇ ನಗರಸಭೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ.

ನಮ್ಮ ಕುಟುಂಬ ಸಾಗಿಸುವುದು ಕಷ್ಟವಾಗಿದೆ. ಈ ಕುರಿತಂತೆ ಹಲವಾರು ಬಾರಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ನಗರಸಭೆಯಲ್ಲಿ ನಿವೃತ್ತರಾದ ಪೌರಕಾರ್ಮಿಕರನ್ನು ಗೌರವಯುತವಾಗಿ ಸನ್ಮಾನಿಸಿಯೂ ಕಳಹಿಸದೇ ನಗರಸಭೆ ನಮ್ಮನ್ನು ಅಪಮಾನಿಸಿದೆ. ನಗರಸಭೆಯ ಅಧಿಕಾರಿಗಳು ಅನುಸರಿಸುತ್ತಿರುವ ಈ ತಾರತಮ್ಯ ನಿಲ್ಲಬೇಕು ಹಾಗೂ ಕೂಡಲೇ ನಮಗೆ ಬಾಕಿಯಿರುವ ವೇತನವನ್ನು ನೀಡಬೇಕೆಂದು ಆಗ್ರಹಿಸಿದರು.

ಸೂಕ್ತ ಕ್ರಮದ ಭರವಸೆ: ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿದ ನಗರಸಭಾಧ್ಯಕ್ಷ ಎಂ.ಶಿವಕುಮಾರ್‌ ಮಾತನಾಡಿ, ರಾಜಾÂದ್ಯಂತ ಈ ಸಮಸ್ಯೆ ಎದುರಾಗಿದ್ದು, ಪ್ರತಿಭಟನಾಕಾರರು ಸಲ್ಲಿಸಿರುವ ಮನವಿಯನ್ನು ಕೂಡಲೇ ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ನಂತರ ಅವರ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದೆಂದರು. ಪೌರಾಯುಕ್ತ ಶಿವಪ್ಪನಾಯ್ಕ ಇದ್ದರು. ಪ್ರತಿಭಟನೆಯಲ್ಲಿ ಸಂಘದ ಗೌರವಾಧ್ಯಕ್ಷ ರಾಮ, ಉಪಾಧ್ಯಕ್ಷ ರಮೇಶ್‌, ಮುಖಂಡರಾದ ನಾಗರಾಜ್‌, ಮುತ್ತಯ್ಯ, ಮಾಗಳಿ ದಿನೇಶ್‌, ಸುನಿಲ್‌ ಕುಮಾರ್‌, ಕೆ.ರವಿ, ಎಚ್‌.ಎಂ.ಕೃಷ್ಣ ಸೇರಿದಂತೆ ವಾಹನ ಚಾಲಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.