![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 9, 2018, 11:54 AM IST
ಉಡುಪಿ: ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಯಡಿ 2017-18ನೇ ಸಾಲಿಗೆ ಪಂಚಾಯತ್ರಾಜ್ ಸಂಸ್ಥೆಗಳಿಗೆ ಸರಕಾರದಿಂದ ಜಿಲ್ಲಾ ವಲಯ ಯೋಜನೆಯಡಿ 434.21 ಕೋ.ರೂ. ಅನುದಾನ ನಿಗದಿಯಾಗಿದೆ.
ಜಿ.ಪಂ.ಗೆ 148.60 ಕೋಟಿ ರೂ., ತಾ.ಪಂ.ಗೆ 267.84 ಕೋಟಿ ರೂ., ಗ್ರಾ.ಪಂ.ಗೆ 17.76 ಕೋಟಿ ರೂ. ಅನುದಾನಕ್ಕೆ ಸಂಬಂಧಿಸಿ ಕ್ರಿಯಾಯೋಜನೆ ತಯಾರಿಸಿ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗಿದೆ ಎಂದು ಜಿ.ಪಂ. ಮುಖ್ಯ ಯೋಜನಾಧಿಕಾರಿ ವಿವರಿಸಿದರು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಯೋಜನಾ ಸಮಿತಿ ಸಭೆ ಬುಧವಾರ ಜಿ. ಪಂ. ಸಭಾಂಗಣದಲ್ಲಿ ನಡೆಯಿತು.
ತಾ.ಪಂ. ಅನುದಾನಕ್ಕೆ ಸಂಬಂಧಿಸಿ ಕ್ರಿಯಾ ಯೋಜನೆ ಯಡಿ ಉಡುಪಿಗೆ 111.83 ಕೋಟಿ ರೂ., ಕುಂದಾಪುರ 98.56 ಕೋಟಿ ರೂ., ಕಾರ್ಕಳದಲ್ಲಿ 57.45 ಕೋಟಿ ರೂ. ಒಟ್ಟು 267.84 ಕೋಟಿ ರೂ. ಯೋಜನೆಗೆ ಅನುಮೋದನೆ ಪಡೆಯಲಾಯಿತು.
ಗ್ರಾ.ಪಂ. ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಉಡುಪಿ ಶಾಸನಬದ್ಧ ಅನುದಾನ 648 ಲಕ್ಷ ರೂ., 14ನೇ ಹಣಕಾಸಿನಡಿ 685.55 ಲಕ್ಷ ರೂ., ಕುಂದಾಪುರ 685, 659.76, ಕಾರ್ಕಳ 356, 1,695.86 ಲಕ್ಷ ರೂ.ಗಳಿಗೆ ಅನುಮೋದನೆ ಪಡೆಯಲಾಗಿದೆ.
ಈ ಸಭೆ ಜಿಲ್ಲಾ ಯೋಜನಾ ಸಮಿತಿಯ ಎರಡನೇ ಸಭೆಯಾಗಿದ್ದು, ಕ್ರಿಯಾ ಯೋಜನೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾದ ಎಸ್. ಜನಾರ್ದನ್, ಎನ್. ಎಸ್. ಶೆಟ್ಟಿ ಮಾಹಿತಿ ನೀಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವ್ಯವಸ್ಥೆಯ ಧ್ಯೇಯ, ತ್ರಿಸ್ತರ ಆಡಳಿತ ವ್ಯವಸ್ಥೆಯ ಪಾತ್ರದ ಬಗ್ಗೆ ವಿವರಿಸಿದ ಅವರು, ಯೋಜನಾ ಸಮಿತಿ ಹೆಚ್ಚು ಕ್ರಿಯಾಶೀಲವಾಗಿರಬೇಕು. ಇಲ್ಲಿ ರೂಪಿಸಿದ ಯೋಜನೆಗಳು ರಾಜ್ಯ ಬಜೆಟ್ನಲ್ಲಿ ಪ್ರತಿಬಿಂಬಿತವಾಗಬೇಕೆಂದರು.
ಗ್ರಾಮ ಮಟ್ಟದಲ್ಲಿ ಯೋಜನೆಗಳು ಯಶಸ್ವಿಯಾಗ ಬೇಕಾದರೆ ಮೂರು ಮುಖ್ಯ ಘಟಕಗಳಿಗೆ ಹೆಚ್ಚಿನ ಅಧಿಕಾರ ಹಾಗೂ ಅನುಷ್ಠಾನ ಶಕ್ತಿ ದೊರೆಯಬೇಕೆಂದರು.
ಕಳೆದ ಸಾಲಿಗಿಂತ 46.47 ಕೋಟಿ ರೂ. ಅನುದಾನ ಹೆಚ್ಚು ವರಿಯಾಗಿ ಕೋರಲಾಗಿದ್ದು, ನಮ್ಮ ಜಿಲ್ಲೆಯ ನಮ್ಮ ಗ್ರಾಮ ನಮ್ಮ ಯೋಜನೆ ಉತ್ತಮ ಮಾದರಿಯಾಗಿದೆ ಎಂದರು.
ಯೋಜನ ಸಮಿತಿ ಸಭೆಯಲ್ಲೂ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಬಗ್ಗೆ ಸವಿವರ ಚರ್ಚೆ ನಡೆಯಿತಲ್ಲದೆ, ತ್ಯಾಜ್ಯ ಸಂಪನ್ಮೂಲವಾಗಿ ಪರಿವರ್ತನೆಯಾದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಯೋಜನೆ ಕೋಟೇಶ್ವರ, ಸಾಲಿಗ್ರಾಮ, ಗಂಗೊಳ್ಳಿ ಯಂತಹ ಪಂಚಾಯತ್ಗಳಲ್ಲಿ ಅನುಷ್ಠಾನಗೊಳ್ಳಲು ಮುಖ್ಯ ಯೋಜನಾಧಿಕಾರಿಗಳು ಖುದ್ದು ಭೇಟಿ ನೀಡಿ ಪಿಡಿಒ ಗಳನ್ನು ಬೆಂಬಲಿಸುವ ಕೆಲಸವಾಗಬೇಕೆಂದು ಶಾಸಕ ರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ನದಿಗೆ ಕೋಳಿತ್ಯಾಜ್ಯ
ಸೀತಾನದಿಯನ್ನು ಕೋಳಿತ್ಯಾಜ್ಯದಿಂದ ಕಲುಷಿತ ಗೊಳಿಸುತ್ತಿರುವ ಬಗ್ಗೆ ತಾ.ಪಂ. ಸದಸ್ಯರು ಗಮನ ಸೆಳೆದಾಗ ವಾರಂಬಳ್ಳಿ ಮಾದರಿಯನ್ನು ಅಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ವಿವರಿಸಿದರು. ಕ್ರಿಯಾ ಯೋಜನೆಯಲ್ಲಿ ಕೃಷಿಗೆ ನೀರು ಪೂರೈಕೆ ಬಗ್ಗೆ ಏನು ಕ್ರಮಕೈಗೊಳ್ಳಲಾಗಿದೆ ಎಂದು ತಾ.ಪಂ. ಸದಸ್ಯ ಭುಜಂಗ ಶೆಟ್ಟಿ ಪ್ರಶ್ನಿಸಿದರು.
ಜಿ.ಪಂ. ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸಿಇಒ ಹಾಗೂ ಸಮಿತಿ ಸದಸ್ಯ ಕಾರ್ಯದರ್ಶಿ ಶಿವಾನಂದ ಕಾಪಶಿ, ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್ ಸಭೆಯಲ್ಲಿದ್ದರು. ಜಿ.ಪಂ., ತಾ.ಪಂ., ನಗರ ಸ್ಥಳೀಯ ಸಂಸ್ಥೆಯ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.