ಹಾಜರಿ ಪುಸ್ತಕವನ್ನೇ ಮನೆಗೊಯ್ದ ಗ್ರಂಥಪಾಲಕ!


Team Udayavani, Feb 10, 2018, 11:50 AM IST

10-Feb-8.jpg

ಬಡಗನ್ನೂರು: ನಾಲ್ಕು ತಿಂಗಳಿನಿಂದ ಕರ್ತವ್ಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿರುವ ಗ್ರಂಥಪಾಲಕ
ಕೊನೆಗೆ ಹಾಜರಿ ಪುಸ್ತಕವನ್ನೇ ಮನೆಗೆ ಹೊತ್ತೂಯ್ದಿರುವ ವಿಶೇಷ ಘಟನೆ ಬಡಗನ್ನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ.

ಬಡಗನ್ನೂರು ಗ್ರಾ.ಪಂ. ಪಕ್ಕದಲ್ಲಿ ಸಾರ್ವಜನಿಕ ಗ್ರಂಥಾಲಯ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಆದರೆ 4 ತಿಂಗಳುಗಳಿಂದ ಗ್ರಂಥಾಲಯ ಸವಲತ್ತು ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ. ಗ್ರಂಥಪಾಲಕ ನವೀನ್‌ ಕುಮಾರ್‌ ಕರ್ತವ್ಯಕ್ಕೆ ಗೈರು ಹಾಜರಾಗುತ್ತಿರುವ ಕಾರಣ ಹಲವು ದಿನಗಳಿಂದ ಗ್ರಂಥಾಲಯ ಬಾಗಿಲು ತೆರೆಯುತ್ತಿಲ್ಲ.

ಹಾಜರಿ ಪುಸ್ತಕ ಮನೆಗೆ
ಎರಡು ತಿಂಗಳಿಂದ ಗ್ರಂಥಾಲಯದ ಕಡೆಗೆ ತಲೆ ಹಾಕದ ಗ್ರಂಥಪಾಲಕ ಅನಾರೋಗ್ಯದ ಕಾರಣ ತೋರಿ ಜ. 1ರಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಾಲ್ಕು ದಿನಗಳ ವರೆಗೆ ಮಾತ್ರ ಕರ್ತವ್ಯ ನಿರ್ವಹಿಸಿ ಈಗ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದಾರೆ. ಜತೆಗೆ ಹಾಜರಿ ಪುಸ್ತಕವನ್ನೂ ಹೊತ್ತೂಯ್ದಿದ್ದಾರೆ.

ಗ್ರಂಥಪಾಲಕ ಗ್ರಂಥಾಲಯಕ್ಕೆ ಬಾರದೇ ಸಾರ್ವಜನಿಕ ವ್ಯವಸ್ಥೆ ನಿರುಪಯುಕ್ತವಾಗುತ್ತಿದೆ. ಗ್ರಂಥಾಲಯದಲ್ಲಿನ ಪುಸ್ತಕಗಳೂ ನಿರ್ವಹಣೆಯ ಕೊರತೆಯಿಂದ ಹಾಳಾಗುತ್ತಿವೆ. ಜ್ಞಾನದ ದೃಷ್ಟಿಯಿಂದ ಗ್ರಂಥಾಲಯಕ್ಕೆ ಆಗಮಿಸುವ ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ. ಗ್ರಂಥ ಪಾಲಕರಿಗೆ ವೇತನವನ್ನು ಇಲಾಖೆಯಿಂದಲೇ ಪಾವತಿಸಲಾಗುತ್ತದೆ. ಹಾಜರಾತಿ ಪುಸ್ತಕ ಗ್ರಾ.ಪಂ.ನಲ್ಲಿದ್ದು, ಅಲ್ಲಿಗೆ ಬಂದು ಹಾಜರಾತಿ ಹಾಕುವುದು ಮತ್ತು ಈ ಕುರಿತು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದೃಢೀಕರಿಸುವುದು ಅಗತ್ಯ. ಆದರೆ ಇಲ್ಲಿನ ಗ್ರಂಥಪಾಲಕ ಹಾಜರಾತಿ ಪುಸ್ತಕವನ್ನೇ ಮನೆಗೆ ಒಯ್ದಿರುವ ಕಾರಣ ಈ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ

ವೇತನಕ್ಕೆ ತಡೆ
ಗ್ರಂಥಪಾಲಕ ಸರಿಯಾಗಿ ಕರ್ತವ್ಯ ನಿರ್ವಹಿಸದ ಕುರಿತು ಗ್ರಾ.ಪಂ.ನ ನಿರ್ಣಯ ಹಾಗೂ ದೂರು ಬಂದಿದೆ. ಈ ಕಾರಣದಿಂದ ಸಿಬಂದಿಗೆ ವೇತನವನ್ನೂ ಸದ್ಯಕ್ಕೆ ತಡೆ ಹಿಡಿಯಲಾಗಿದೆ. ಮುಂದಿನ ವಾರದ ಗ್ರಂಥಾಲಯಕ್ಕೆ ಭೇಟಿ ನೀಡಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದೇವೆ.
– ಸವಿತಾ
ಮುಖ್ಯ ಗ್ರಂಥಪಾಲಕರು, ಮಂಗಳೂರು

ನಿರ್ಣಯಿಸಿ ಕಳುಹಿಸಿದ್ದೇವೆ
ಗ್ರಂಥಪಾಲಕ ಸತತವಾಗಿ ಗೈರು ಹಾಜರಾಗುತ್ತಿರುವುದು ಮತ್ತು ಇದರಿಂದ ವ್ಯವಸ್ಥೆಗೆ ತೊಂದರೆಯಾಗುತ್ತಿರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿ ಜಿ.ಪಂ.ಗೆ ಕಳುಹಿಸಲಾಗಿದೆ. ಆದರೆ ಈವರೆಗೆ ಯಾವುದೇ ಕ್ರಮವನ್ನು ಗ್ರಂಥಾಲಯ ಇಲಾಖೆ ಕಡೆಯಿಂದ ಕೈಗೊಂಡಿಲ್ಲ.
ಕೇಶವ ಗೌಡ ಕನ್ನಾಯ
ಅಧ್ಯಕ್ಷರು, ಗ್ರಾ.ಪಂ. ಬಡಗನ್ನೂರು

ದಿನೇಶ್‌ ಬಡಗನ್ನೂರು

ಟಾಪ್ ನ್ಯೂಸ್

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.