ಮಂಗಳೂರಿನ ಸಮಗ್ರ ಅಭಿವೃದ್ಧಿಯ ಕನಸು


Team Udayavani, Feb 11, 2018, 8:15 AM IST

s-28.jpg

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಸಬಾ ಬೆಂಗ್ರೆ, ತೋಟ ಬೆಂಗ್ರೆ, ಕುದ್ರೋಳಿ ಬೆಂಗ್ರೆ ಮತ್ತು ಬೊಕ್ಕಪಟ್ಣ ಬೆಂಗ್ರೆಯ 1,138 ನಿವಾಸಿಗಳಿಗೆ ಹಕ್ಕುಪತ್ರಗಳನ್ನು ಶನಿವಾರ ನಗರದ ಬೆಂಗ್ರೆ ಫುಟ್ಬಾಲ್‌ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಜೆ.ಆರ್‌. ಲೋಬೋ  ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗ್ರೆ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂಬ ನಿರ್ಣಯವನ್ನು ಬಂಗಾರಪ್ಪ ಅವರು ಮುಖ್ಯಮಂತ್ರಿ
ಯಾಗಿದ್ದ ವೇಳೆ ಕೈಗೊಂಡಿದ್ದರು. ಆದರೆ ಈ ಜಾಗಗಳಿಗೆ ಸರ್ವೆ ನಂಬರ್‌ ಇರಲಿಲ್ಲ. ಹಾಗಿದ್ದರೂ ಮುಖ್ಯಮಂತ್ರಿಗಳ ಆದೇಶದ ಮೇರೆಗೆ 150 ಹಕ್ಕುಪತ್ರ ಗಳನ್ನು ವಿತರಿಸಿದ್ದೆವು. ಅಂದು ಮಾಡಿದ ತಪ್ಪನ್ನು ತಿದ್ದಿಕೊಳ್ಳಲು ಇಷ್ಟು ಸಮಯ ತಗುಲಿತು ಎಂದರು. ಜಾಗಕ್ಕೆ ಹಕ್ಕುಪತ್ರ ಮತ್ತು ಆರ್‌ಟಿಸಿ ನೀಡಬೇಕು ಎಂಬುದು ಬೆಂಗ್ರೆ ನಿವಾಸಿಗಳ ಬಹುದಿನದ ಬೇಡಿಕೆ. ಅದ ಕ್ಕೆಂದೇ ಈ ಪ್ರದೇಶದ ಮಂದಿಗೆ ಸರ್ವೆ ನಂಬರ್‌ ನೀಡಿ ಕಂದಾಯ ಗ್ರಾಮ ಎಂದು ಘೋಷಣೆ ಮಾಡಿದ್ದೇವೆ. ಇದು ಇಲ್ಲಿನ ಮಂದಿಗೆ ಸಿಕ್ಕ ಪ್ರಥಮ ಜಯ ಎಂದರು. 

ಬೆಂಗ್ರೆ ಹಳೆ ಬಂದರು ಮತ್ತು ಮೀನುಗಾರಿಕೆ ಬಂದರಿನ ಅಭಿವೃದ್ಧಿಯನ್ನು ನಡೆಸುವುದು ನನ್ನ ಮುಂದಿನ ಚಿಂತನೆ. ಬಂದರು ಅಭಿವೃದ್ಧಿಯಾಗಲು ಲಕ್ಷ
ದ್ವೀಪದ ಸಂಪರ್ಕ ಮತ್ತು ಸಂಬಂಧ ವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಉನ್ನತ ಮಟ್ಟದ ಸಮಿತಿಯೊಡನೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದೇನೆ. ಅವರು ಈ ಪ್ರದೇಶದಲ್ಲಿ ವ್ಯಾಪಾರ ವಹಿವಾಟು ನಡೆಸಲು ಒಲವು ನೀಡಿದ್ದಾರೆ. ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸುಮಾರು 250 ಕೋ. ರೂ. ಬಂಡವಾಳ ಹೂಡಲು ತಯಾರಾಗಿದ್ದಾರೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರಕಾರದೊಡನೆ ಚರ್ಚಿಸಿ ಹಳೆ ಬಂದರು ಮೂಲಭೂತ ಸೌಕರ್ಯ ಅಬಿವೃದ್ಧಿಗೆ ಮತ್ತು ಹೂಳೆತ್ತುವಿಕೆಗೆ 100 ಕೋ. ರೂ. ಅನುದಾನ ಮಂಜೂರು ಮಾಡಿಸಿದ್ದೇನೆ ಎಂದರು.

ಹಳೆ ಬಂದರು ಮತ್ತು ಹೊಸ ಬಂದರು ನಡುವೆ ರಸ್ತೆ ನಿರ್ಮಾಣ ಮಾಡಿ ಬೆಂಗ್ರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಬೇಕು ಎಂಬ ಉದ್ದೇಶ
ವಿದೆ. ಇದಕ್ಕಾಗಿ ಖಾಯಂ ಸೇತುವೆ ನಿರ್ಮಾಣ ಮಾಡುವ ಯೋಜನೆಯನ್ನು ಕೈಗೊಂಡು ಮಂಗಳೂರನ್ನು ಆರ್ಥಿಕವಾಗಿ ಬಲಗೊಳಿಸುತ್ತೇವೆ ಎಂದವರು ವಿವರಿಸಿದರು.

ಫೆ. 17ಕ್ಕೆ ಕಂದಾಯ ಅದಾಲತ್‌
ತಹಶೀಲ್ದಾರ್‌ ಟಿ. ಗುರುಪ್ರಸಾದ್‌ ಮಾತನಾಡಿ, ಬೆಂಗ್ರೆ ವಲಯದಲ್ಲಿ ಕಳೆದ 65 ವರ್ಷಗಳಿಂದಲೂ ಸರ್ವೆ ನಂಬರ್‌ ಆಗಿರಲಿಲ್ಲ. ಈಗಾಗಲೇ 1,138 ಹಕ್ಕುಪತ್ರಗಳನ್ನು ವಿತರಿಸಿದ್ದೇವೆ. ಹಕ್ಕುಪತ್ರಗಳನ್ನು ಪಡೆದ ಮಂದಿಗೆ ಮುಂದಿನ 45 ದಿನಗಳ ಒಳಗೆ ಆರ್‌ಟಿಸಿಯನ್ನು ಕೂಡ ಮಾಡಲಾಗುವುದು. 2003ರಲ್ಲಿ ನೀಡಿದ 650 ಹಕ್ಕುಪತ್ರಗಳಿಗೆ ಆರ್‌ಟಿಸಿ ನೀಡಲು ಫೆ. 17ರಂದು ಬೆಂಗ್ರೆಯಲ್ಲಿ ಕಂದಾಯ ಅದಾಲತ್‌ ನಡೆಸಲಾಗುವುದು. ಅನಂತರ ಪಾಲಿಕೆಯಲ್ಲಿ ಖಾತೆಯನ್ನು ನೋಂದಣಿ ಮಾಡಬೇಕು. ಬಳಿಕ ತೆರಿಗೆಯನ್ನು ಪಾವತಿ ಮಾಡಬೇಕಾಗುತ್ತದೆ ಎಂದು ಹೇಳಿದರು.

ಬೆಂಗ್ರೆ ಮಹಾಸಭಾದ ಅಧ್ಯಕ್ಷ ಮೋಹನ ಬೆಂಗ್ರೆ ಪ್ರಸ್ತಾವನೆಗೈದರು. ಮನಪಾ ಸದಸ್ಯರಾದ ವಿನಯರಾಜ್‌, ಪ್ರವೀಣ್‌ ಆಳ್ವ, ವಿಶ್ವಾಸ್‌ ಕುಮಾರ್‌ ದಾಸ್‌, ಮೀರಾ, ಶೇಖರ್‌ ಸುವರ್ಣ, ಅಬ್ದುಲ್‌ ಸಲೀಮ್‌, ಸಿ.ಪಿ. ಮುಸ್ತಫಾ, ಗುರುಪ್ರಸಾದ್‌, ಶ್ರೀಕರ ಸುವರ್ಣ, ರಮಾನಂದ ಪೂಜಾರಿ, ಮೋಹನ್‌ ಮೆಂಡನ್‌, ಚೇತನ್‌ ಬೇಂಗ್ರೆ, ಟಿ.ಕೆ. ಸುಧೀರ್‌, ಮೆರಿಲ್‌ ರೇಗೊ, ಡೆನ್ನಿಸ್‌ ಡಿ’ಸಿಲ್ವಾ, ನವೀನ್‌ ಕರ್ಕೇರ, ಆಸಿಫ್‌ ಉಪಸ್ಥಿತರಿದ್ದರು.

ಚುನಾವಣೆಯಲ್ಲಿ ಸ್ಪರ್ಧೆ
ಶಾಸಕ ಜೆ.ಆರ್‌. ಲೋಬೋ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ. ಉದ್ಯಮ ಸೃಷ್ಟಿಯ ಸಹಿತ ಮಂಗಳೂರಿನ ಅಭಿವೃದ್ಧಿಗೆ ಅನೇಕ ಕನಸುಗಳನ್ನು ಕಂಡಿದ್ದೇನೆ ಎಂದರು. 

ಟಾಪ್ ನ್ಯೂಸ್

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.