ಉಗ್ರರ ಅಟ್ಟಹಾಸಕ್ಕೆ 5 ಯೋಧರು ಹುತಾತ್ಮ


Team Udayavani, Feb 12, 2018, 6:00 AM IST

Ban12022018.jpg

ಸಂಜ್ವಾನ್‌: ಜಮ್ಮುವಿನ ಸಂಜ್ವಾನ್‌ನಲ್ಲಿನ ಸೇನಾ ಶಿಬಿರದ ವಸತಿ ಕಟ್ಟಡದ ಮೇಲೆ ಜೈಶ್‌ ಉಗ್ರರು ನಡೆಸಿದ ದಾಳಿಯಿಂದ ಹುತಾತ್ಮರಾದ ಯೋಧರ ಸಂಖ್ಯೆ ಭಾನುವಾರ 5ಕ್ಕೇರಿದೆ. ದಾಳಿಯಲ್ಲಿ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಇದೇ ವೇಳೆ, ಗುಂಡು ತಗಲಿ ತೀವ್ರ ಗಾಯಗೊಂಡಿದ್ದ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ.

ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ ಮೂಲದ ಜೈಶ್‌ ಉಗ್ರರ ವಿರುದ್ಧದ ಕಾರ್ಯಾಚರಣೆ ಭಾನುವಾರ ಸಂಜೆಯವರೆಗೂ ಮುಂದುವರಿದಿದೆ. ವಸತಿ ಸಂಕೀರ್ಣದಲ್ಲಿ ಅಡಗಿದ್ದ ಮೂವರು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ. ಜತೆಗೆ, ಮೃತ ಉಗ್ರರಿಂದ ಎಕೆ 56 ರೈಫ‌ಲ್‌ಗ‌ಳು, ಅಂಡರ್‌ ಬ್ಯಾರೆಲ್‌ ಗ್ರೆನೇಡ್‌ ಲಾಂಚರ್‌ಗಳು, ಗ್ರೆನೇಡ್‌ಗಳು ಸೇರಿದಂತೆ ಭಾರೀ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು 2016ರ ಉರಿ ಸೇನಾ ನೆಲೆ ದಾಳಿಯ ನಂತರ ನಡೆದ ಅತಿದೊಡ್ಡ ಉಗ್ರರ ದಾಳಿಯಾಗಿದೆ.

ಶನಿವಾರದ ದಾಳಿ ವೇಳೆ ಇಬ್ಬರು ಜೂನಿಯರ್‌ ಕಮಿಷನ್‌ ಆಫೀಸರ್‌ಗಳು ಹುತಾತ್ಮರಾಗಿದ್ದರು. ಇಬ್ಬರು ಉಗ್ರರನ್ನೂ ಸೇನಾಪಡೆ ಹತ್ಯೆಗೈದಿತ್ತು. ಆದರೆ, ಸೇನಾ ಸಮವಸ್ತ್ರ ಧರಿಸಿಕೊಂಡಿದ್ದ ಒಬ್ಬ ಉಗ್ರ ಒಳಗೇ ಅವಿತಿದ್ದ. ಭಾನುವಾರ ಕಾರ್ಯಾಚರಣೆ ನಡೆಸಿ ಆತನನ್ನೂ ಹತ್ಯೆಗೈಯ್ಯಲಾಯಿತು ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಇದೇ ವೇಳೆ, ವಸತಿ ಕಟ್ಟಡದಲ್ಲಿ ಶೋಧ ಕಾರ್ಯ ನಡೆಸುವಾಗ ಮತ್ತೂಬ್ಬ ಜೂನಿಯರ್‌ ಕಮಿಷನ್ ಅಧಿಕಾರಿ, ಇಬ್ಬರು ಯೋಧರು ಹಾಗೂ ಯೋಧರೊಬ್ಬರ ಅಪ್ಪನ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಮೃತರ ಸಂಖ್ಯೆ 6ಕ್ಕೇರಿತು ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ.

ಹುತಾತ್ಮ ಯೋಧರನ್ನು ಮದನ್‌ ಲಾಲ್‌ ಚೌಧರಿ, ಮೊಹಮ್ಮದ್‌ ಅಶ್ರಫ್ ನಿರ್‌, ಹವಿಲ್ದಾರ್‌ ಹಬೀಬುಲ್ಲಾ ಖುರೇಷಿ, ಮಂಜೂರ್‌ ಅಹ್ಮದ್‌ ಮತ್ತು ಲ್ಯಾನ್ಸ್‌ ನಾಯ್ಕ ಮೊಹಮ್ಮದ್‌ ಇಕ್ಬಾಲ್‌ ಎಂದು ಗುರುತಿಸಲಾಗಿದೆ. ದಾಳಿಯಲ್ಲಿ 6 ಮಂದಿ ಮಹಿಳೆಯರು, ಮಕ್ಕಳು ಸೇರಿದಂತೆ 10 ಮಂದಿ ಗಾಯಗೊಂಡಿದ್ದಾರೆ. 14 ವರ್ಷದ ಬಾಲಕನ ತಲೆಗೂ ಗುಂಡು ಹೊಕ್ಕಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಭಾನುವಾರ ಸಂಜೆ 4 ಫೈರ್‌ ಬ್ರಿಗೇಡ್‌ಗಳ ಜತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವೂ ಸಂಜ್ವಾನ್‌ಗೆ ಆಗಮಿಸಿದೆ.

ಈ ನಡುವೆ, ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದು, ಜಮ್ಮುವಿನ ಸೇನಾ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ಗಾಯಾಳು ಗರ್ಭಿಣಿ
ಶನಿವಾರದ ದಾಳಿ ವೇಳೆ ಸೇನಾ ವಸತಿ ಸಂಕೀರ್ಣದಲ್ಲಿದ್ದ ಗರ್ಭಿಣಿಯೊಬ್ಬರು ಬೆನ್ನಿಗೆ ಗುಂಡು ತಗುಲು ತೀವ್ರ ಗಾಯಗೊಂಡಿದ್ದರು. ತಮ್ಮ ಪತಿ ರೈಫ‌ಲ್‌ಮಾÂನ್‌ ನಜೀರ್‌ ಅಹ್ಮದ್‌ ಜತೆಗಿದ್ದಾಗಲೇ ಮಹಿಳೆಗೆ ಗುಂಡು ತಾಕಿತ್ತು. ಕೂಡಲೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಮತ್ತು ಹೊಟ್ಟೆಯಲ್ಲಿದ್ದ ಶಿಶುವನ್ನು ರಕ್ಷಿಸಲು ರಾತ್ರಿಯಿಡೀ ವೈದ್ಯರು ಹರಸಾಹಸ ಪಟ್ಟರು. ಭಾನುವಾರ ಬೆಳಗ್ಗೆ ಸಿಸೇರಿಯನ್‌ ಮೂಲಕ ಮಗುವನ್ನು ಹೊರೆತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಈಗ ಹೆಣ್ಣು ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಲೆ. ಕ. ದೇವೇಂದರ್‌ ಆನಂದ್‌ ತಿಳಿಸಿದ್ದಾರೆ.

ಯೋಧರಿಗೆ ಊಟ-ತಿಂಡಿ ಒದಗಿಸಿದ ಸ್ಥಳೀಯರು
ಜೈಶ್‌ ಉಗ್ರರ ಅಟ್ಟಹಾಸದ ಮಧ್ಯೆಯೂ ಅವರ ವಿರುದ್ಧ ಹೋರಾಡುತ್ತಾ, ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ ಯೋಧರಿಗೆ ಸ್ಥಳೀಯರೇ ಊಟ, ತಿಂಡಿ ಪೂರೈಸಿದ್ದಾರೆ. ಸ್ಥಳೀಯ ನಿವಾಸಿಗಳ ಈ ನಡೆ ಮೆಚ್ಚುಗೆಗೆ ಕಾರಣವಾಗಿದೆ. ಸೇನಾಶಿಬಿರದ ಸುತ್ತಲೂ ನೆರೆದಿದ್ದ ಪೊಲೀಸರು, ಅರೆಸೇನಾ ಪಡೆ ಯೋಧರು ಹಾಗೂ ಪತ್ರಕರ್ತರಿಗೆ ಆಹಾರ, ಟೀ, ನೀರನ್ನು ಪೂರೈಸುತ್ತಿದ್ದೇವೆ. ಕಣಿವೆ ರಾಜ್ಯದಲ್ಲಿ ದಾರಿತಪ್ಪಿದ ಯುವಕರು ಭದ್ರತಾ ಪಡೆಗಳ ಮೇಲೆ ಸತತ ಕಲ್ಲುತೂರಾಟ ನಡೆಸುತ್ತಾರೆ. ಅಂಥವರಿಗೆ ಈ ಮೂಲಕ ನಾವು ಸಂದೇಶ ಕಳುಹಿಸುತ್ತಿದ್ದೇವೆ ಎಂದಿದ್ದಾರೆ ಸ್ಥಳೀಯರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.