ಮಠಗಳ ಸ್ವಾಧೀನಕ್ಕೆ ಮುಂದಾದರೆ ಸಾತ್ವಿಕ ಹೋರಾಟ


Team Udayavani, Feb 12, 2018, 1:13 PM IST

mathagala.jpg

ಬೆಂಗಳೂರು: ರಾಜ್ಯ ಸರ್ಕಾರ ಕಾನೂನಿನ ಭಯವಿಲ್ಲದೇ ಮಠಗಳನ್ನು ಸೂಪರ್‌ಸೀಡಿ ಮಾಡಿ ತಮ್ಮ ವಶಕ್ಕೆ ಪಡೆಯಲು ಮುಂದಾಗಿರುವ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹೇಳಿದರು.

ರಾಜ್ಯ ಸರ್ಕಾರ ಮಠಗಳ ಸ್ವಾಧೀನಕ್ಕೆ ಮುಂದಾಗಿರುವುದರಿಂದ ನಾಡಿನ ಯತಿಗಳು ಅಸ್ಥಿತ್ವಕ್ಕಾಗಿ ಹೋರಾಟ ಮಾಡುವ ಸ್ಥಿತಿ ಬಂದಿದೆ. ಸರ್ಕಾರಕ್ಕೆ ಕಾನೂನಿನ ಭಯವಿಲ್ಲ. ಬದಲಾಗಿ ಕೆಲವರ ಒತ್ತಡಕ್ಕೆ ಮಣಿದು ಹೀಗೆಲ್ಲ ವರ್ತಿಸುತ್ತಿದೆ. ಮಠಗಳನ್ನು ಸರ್ಕಾರ ತನ್ನ ಸ್ವಾಧೀನಕ್ಕೆ ಪಡೆದರೇ ರಾಜ್ಯಾದ್ಯಂತ ಸಾತ್ವಿಕ ಹೋರಾಟ ಮಾಡಲಿದ್ದೇವೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ರಾಮಚಂದ್ರಪುರ ಮಠದ ಶ್ರೀಗಳ ವಿರುದ್ಧ ದೂರು ಬಂದಾಗ ಮತ್ತು ಶ್ರೀಮಠಕ್ಕೆ ಬ್ಲ್ಯಾಕ್‌ವೆುàಲ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನಡೆದುಕೊಂಡಿರುವ ರೀತಿ ಪಕ್ಷಪಾತದಿಂದ ಕೂಡಿತ್ತು ಎಂಬುದು ರಾಜ್ಯದ ಜನತೆಯ ಅರಿವಿಗೆ ಬಂದಿದೆ.

ಕೆಲವೊಂದು ಮಠ ಹಾಗೂ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿದ್ದಾರೆ. ಆದರೆ, ಆ ಆಡಳಿತಾಧಿಕಾರಿಗಳು ಎಷ್ಟು ನಿಷ್ಠೆ, ಪ್ರಾಮಾಣಿಕತೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂಬುದನ್ನು ಗಮನಿಸಬೇಕು. ಯಾವುದೇ ಪ್ರಕರಣವನ್ನು ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ, ನಿಷ್ಪಕ್ಷಪಾತವಾಗಿ ಕ್ರಮ ತೆಗೆದುಕೊಳ್ಳಬೇಕು ಎಂಬ ಸಲಹೆ ನೀಡಿದರು.

ಅನುಷ್ಠಾನ ಏಕಿಲ್ಲ?: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ವಕ್ಫ್ ಆಸ್ತಿಯ ದುರ್ಬಳಕೆ ಸಂಬಂಧಿಸಿದಂತೆ ನೀಡಿದ ವರದಿಯನ್ನು ಏಕೆ ಇನ್ನೂ ಅನುಷ್ಠಾನ ಮಾಡಿಲ್ಲ? ಸರ್ಕಾರ ಆರೋಪಿಗಳನ್ನು ಶಿಕ್ಷಿಸುತ್ತಿಲ್ಲ. ಸುಳ್ಳು ಆರೋಪ ನೀಡಿದವರನ್ನು ರಕ್ಷಿಸುವ ಪ್ರಯತ್ನದಲ್ಲಿದೆ. ನಾಡಿನ ಧಾರ್ಮಿಕ ಸಂಸ್ಥೆ, ಮಠ ಹಾಗೂ ಪ್ರಾಮಾಣಿಕ ಯತಿಗಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಇಂತಹ ಪ್ರಕರಣ ಭಕ್ತರಿಗೆ ಸಾತ್ವಿಕ ನೋವು ನೀಡಿದರೂ ನ್ಯಾಯಾಲಯವೇ ಸೂಕ್ತವಾಗಿ ಉತ್ತರಿಸಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಮಠಗಳ ಮೇಲೆ ವಕ್ರ ದೃಷ್ಟಿ: ಸಿದ್ಧಾರೂಢ ಮಿಷನ್‌ನಿನ ಆರೂಢ ಭಾರತೀ ಮಹಾಸ್ವಾಮೀಜಿ ಮಾತನಾಡಿ, ರಾಜ್ಯ ಸರ್ಕಾರದ ವಕ್ರ ದೃಷ್ಟಿ ಮಠಮಾನ್ಯಗಳ ಮೇಲೆ ಬಿದ್ದಿದೆ. ಶ್ರೀ ರಾಮಚಂದ್ರಪುರ ಮಠದ ವಿರುದ್ಧದ ಬ್ಲ್ಯಾಕ್‌ವೆುàಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಅಧೀನ ಸಂಸ್ಥೆಯಾದ ಸಿಐಡಿ ತನಿಖೆ ನಡೆಸಿ ಬಿ ರಿಪೋರ್ಟ್‌ ಸಲ್ಲಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್‌ ಅನ್ನು ತಿರಿಸ್ಕರಿಸಿತ್ತು. ಈ ಘಟನೆ ಸರ್ಕಾರದ ನಿಲುವನ್ನು ಸ್ಪಷ್ಟವಾಗಿ ವಿವರಿಸುತ್ತದೆ ಎಂದರು.

ಸಿಕ್ಕಿಹಾಕಿಸುವ ಪ್ರಯತ್ನ: ಸ್ವಾಮೀಜಿಯವರನ್ನು ಸಿಕ್ಕಿಹಾಕಿಸಲು ಸರ್ಕಾರ ಪ್ರಬಲ ಅವಕಾಶಕ್ಕಾಗಿ ಕಾಯುತ್ತಿದೆ. ಆದರೆ ಅದು ಸಾಧ್ಯವಾಗುವುದಿಲ್ಲ. ರಾಘವೇಶ್ವರ ಶ್ರೀಗಳ ಮೇಲೆ ಬಂದಿರುವ ಇನ್ನೊಂದು ಆರೋಪವೂ ಅರ್ಥಹೀನವಾಗಿದ್ದು, ಉದ್ದೇಶ ಪೂರ್ವಕವಾಗಿ ದೂರು ನೀಡಿದ್ದಾರೆ. ದೂರು ನೀಡಿದ ಮಹಿಳೆ ಪತಿಗೆ ವಿಚ್ಛೇದನೆ ನೀಡಿದ್ದರು. ಅಲ್ಲದೇ 9 ವರ್ಷದ ಹಿಂದಿನ ಪ್ರಕರಣ ಉಲ್ಲೇಖೀಸಿ ಶ್ರೀಗಳ ವಿರುದ್ಧ ದೂರು ನೀಡಿದ್ದಾರೆ. ಇದು ಸುಳ್ಳಿನ ಕಂತೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಬಳ್ಳಾರಿಯ ಹಾಲೇಶ್ವರ ಮಹಾಸಂಸ್ಥಾನದ ಹಾಲವೀರಪ್ಪಜ್ಜ ಮಹಾಸ್ವಾಮೀಜಿ ಮಾತನಾಡಿ, ಮಠಗಳ ಮೇಲೆ ಸ್ವಾಧೀನ ಸಾಧಿಸಲು ಮುಂದಾಗಿರುವ ಸರ್ಕಾರಕ್ಕೆ ರಾಜ್ಯದ ಮಸೀದಿ, ಚರ್ಚ್‌ಗಳ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯವಿಲ್ಲವೇ? ಹಿಂದೂ ಸಮಾಜವನ್ನೇ ನಿರಂತರವಾಗಿ ಗುರಿಯಾಗಿಸಿಕೊಳ್ಳುವುದು ಏಕೆ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.