ಪಶ್ಚಿಮ ಘಟ್ಟ ಸಂರಕ್ಷಣೆಗೆ ಹಸಿರು ಸೇನೆ ತಯಾರಿ


Team Udayavani, Feb 14, 2018, 10:17 AM IST

14-Feb-1.jpg3_.jpg

ಮಹಾನಗರ: ನಮ್ಮ ಪಶ್ಚಿಮ ಘಟ್ಟವನ್ನು ಉಳಿಸಿಕೊಳ್ಳಲು ನಾವೆಲ್ಲರೂ ಹಸಿರು ಸೈನಿಕರಾದರೆ ಹೇಗೆ? ಒಳ್ಳೆಯದೆ ತಾನೇ. ಇದೇ ಕೆಲಸವನ್ನು ಮಾಡುತ್ತಿದೆ ಸಹ್ಯಾದ್ರಿ ಸಂಚಯ ಬಳಗ. ಬಳಗದ ಸದಸ್ಯರು ‘ಪಶ್ಚಿಮ ಘಟ್ಟ ಸುರಕ್ಷತಾ ಅಭಿಯಾನ’ ಹೆಸರಿನಡಿ ವಿದ್ಯಾರ್ಥಿಗಳಿಗೆ ಪಶ್ಚಿಮ ಘಟ್ಟ ಕುರಿತು ಪಾಠ ಮಾಡುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳನ್ನು ಕಾಡಿನೊಳಗೆ ಕರೆದೊಯ್ದು ವಸ್ತು ಸ್ಥಿತಿ ವಿವರಿಸುವ ನೈಜ ಪಾಠವಿದು.

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು
2016ರಿಂದ ಆರಂಭವಾದ ಈ ಪಶ್ಚಿಮ ಘಟ್ಟ ಸುರಕ್ಷತಾ ಅಭಿಯಾನದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ಕಾಲೇಜು ಮಕ್ಕಳು ಭಾಗವಹಿಸುತ್ತಿದ್ದಾರೆ. 2016ರಲ್ಲಿ 6 ಕಾಲೇಜು, 2017ರಲ್ಲಿ 14 ಕಾಲೇಜುಗಳು, 2018 ಈವರೆಗೆ 7 ಕಾಲೇಜಿನ ನೂರಾರು ಮಕ್ಕಳು ಇದರ ಅನುಭವ ಪಡೆದಿದ್ದಾರೆ.

ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ನಡೆದ ಅನೇಕ ಹೋರಾಟಗಳಲ್ಲಿ ಜಿಲ್ಲೆಯ ಜನರು ಸ್ತಬ್ಧವಾಗಿದ್ದರು.
ವಿದ್ಯಾರ್ಥಿಗಳೂ ತಣ್ಣಗಿದ್ದರು. ಈ ಹಿನ್ನೆಲೆಯಲ್ಲಿ ಬಳಗವು ಮಕ್ಕಳಲ್ಲಿ ಪರಿಸರ ಪ್ರೇಮ ಬಿತ್ತಲು ಹೊರಟಿತು. ಪ್ರತಿ ಶಾಲಾ ಕಾಲೇಜಿಗೆ ಹೋಗಿ ವಿದ್ಯಾರ್ಥಿಗಳಿಗೆ ಪರಿಸರ ಕುರಿತು ಮಾಹಿತಿ ನೀಡಲಾಯಿತು. ಬಳಿಕ ಚಾರಣ- ಅಧ್ಯಯನದಂಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ನಾವು ಹೀಗೆ ಹೋಗುವಾಗ ಸ್ಥಳೀಯ ಅಧಿಕಾರಿಗಳ ಅನುಮತಿ ಪಡೆಯಲು ಮರೆಯುವುದಿಲ್ಲ ಎನ್ನುತ್ತಾರೆ ದಿನೇಶ್‌ ಹೊಳ್ಳ.

ಎಲ್ಲೆಲ್ಲಿ ಮಾಹಿತಿ?
ಮೊದಲಿಗೆ ಕಾಲೇಜಿಗೆ ತೆರಳಿ ತರಗತಿಯಲ್ಲಿ ಜೀವ ಜಲ, ಪಶ್ಚಿಮ ಘಟ್ಟ , ಪರಿಸರ ಜಾಗೃತಿಯ ಕುರಿತಾಗಿ ತರಗತಿ ನಡೆಸಲಿದೆ. ಬಳಿಕ ಪಶ್ಚಿಮ ಘಟ್ಟಕ್ಕೆ ಕರೆದೊಯ್ದು ವಿವರಿಸಲಾಗುತ್ತದೆ. ಚಾರ್ಮಾಡಿಯ ಜೇನುಕಲ್ಲುಗುಡ್ಡ,
ಕೊಡೆಕಲ್ಲು, ಬಿದಿರುತಳ ಟ್ರೈಬಲ್‌ ವಿಲೇಜ್‌, ಎತ್ತಿನ ಭುಜ, ಸೊಪ್ಪಿನಗುಡ್ಡ, ಶಿರಾಡಿಯ ವೆಂಕಟಗಿರಿ, ಮುಗಿಲಗಿರಿ, ಕಳಸ ಸಮೀಪದ ಹೊರನಾಡುವಿನ ಗಾಳಿಗುಡ್ಡ, ಅಬ್ಬಿನೆತ್ತಿ, ಹಣತೆಬೆಟ್ಟ,ಬಲಿಗೆಖಾನ, ಎಳನೀರು ಘಾಟಿ, ಹಿರಿಮರಿಗುಪ್ಪೆ, ಕೃಷ್ಣಗಿರಿ, ಬಿಸಿಲೆಘಾಟ್‌ ಮೊದಲಾದೆಡೆ ಭೇಟಿ ನೀಡಲಾಗುತ್ತದೆ.

ಹಸಿರು ಸೈನಿಕರು ಬೇಕಾಗಿದ್ದಾರೆ
ದೇಶವನ್ನು ಕಾಯಲು ಗಡಿಯಲ್ಲಿ ಸೈನಿಕರಿರುವಂತೆ ಪಶ್ಚಿಮ ಘಟ್ಟವನ್ನು ಸಂರಕ್ಷಿಸಲು ಹಸಿರು ಸೈನಿಕರ ಆವಶ್ಯಕತೆ ಇದೆ. ಈ ನಿಟ್ಟಿನಲ್ಲಿ ನಾವು ಯುವ ಜನತೆಯನ್ನು ಪರಿಸರ ಸಂರಕ್ಷಣಾ ಯೋಧರನ್ನಾಗಿ ಪರಿವರ್ತಿಸಬೇಕಿದೆ.
-ದಿನೇಶ್‌ ಹೊಳ್ಳ

ಅರಣ್ಯಾಧಿಕಾರಿಯಾಗುವ ಗುರಿ
ಪಶ್ಚಿಮ ಘಟ್ಟದ ಬಗ್ಗೆ ಸರಕಾರದ ನಿರ್ಲಕ್ಷ್ಯತನ ಮತ್ತು ಮಾಫಿಯಾಗಳ ಒಡೆತನದ ಬಗ್ಗೆ ಕೇಳಿದ್ದೆ. ಈ ತರಗತಿಯಿಂದ ಸ್ಪಷ್ಟ ಮಾಹಿತಿ ದೊರಕಿತು. ನಮ್ಮ ಬದುಕಿಗೆ ಚೇತನವಾಗಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಲು ಅರಣ್ಯ
ಅಧಿಕಾರಿ ಆಗಬೇಕೆಂದಿರುವೆ.
– ಅಕ್ಷತಾ, ವಿವಿ ಕಾಲೇಜು ಮಂಗಳೂರು 

ಪಶ್ಚಿಮಘಟ್ಟದ ರೋದನಕ್ಕೆ ಕಿವಿಯಾಗಬೇಕು
ಪ್ರಕೃತಿಯ ಕುರಿತು ನನ್ನ ಪ್ರೀತಿ ಮತ್ತು ಗೌರವ ಇಂಥ ಕಾರ್ಯಕ್ರಮ ಪ್ರೇರಣೆ ನೀಡಬಲ್ಲದು. ಪಶ್ಚಿಮಘಟ್ಟದ ರೋದನಕ್ಕೆ ಕಿವಿಯಾಗಿ ನನ್ನಿಂದಾದಷ್ಟು ಒಳಿತು ಮಾಡಬೇಕೆಂಬ ಜಾಗೃತಿ ನನ್ನಲ್ಲಿ ಮೂಡಿದೆ.
ಮಹಾಲಕ್ಷ್ಮೀ, ಭಂಡಾರ್‌ಕಾರ್
   ಕಾಲೇಜು ಕುಂದಾಪುರ

 ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.