ಅಮಿತ್‌ ಶಾ ಭೇಟಿ ಹಿನ್ನೆಲೆ : ಎಲ್ಲರ ಚಿತ್ತ ಪುಣ್ಯ ಕ್ಷೇತ್ರದೆಡೆಗೆ


Team Udayavani, Feb 14, 2018, 10:36 AM IST

14-Feb-3.jpg

ಸುಬ್ರಹ್ಮಣ್ಯ: ನಾಗಾರಾಧನೆಗೆ ಪ್ರಸಿದ್ಧಿ ಪಡೆದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ರಾಜಕೀಯ ಕ್ಷೇತ್ರದವರಿಗೂ ಶಕ್ತಿ ಕೇಂದ್ರವಾಗಿ ಪರಿಣಮಿಸುತ್ತಿದೆ.

ಕುಕ್ಕೆಗೂ ಗಣ್ಯರಿಗೂ ಹಿಂದಿನಿಂದಲೂ ನಂಟು. ಕ್ರೀಡೆ, ಸಿನಿಮಾ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ತಮ್ಮ ಕುಟುಂಬದ ಉತ್ತರೋತ್ತರ ಅಭಿವೃದ್ಧಿಯನ್ನು ಆಶಿಸಿ ಇಲ್ಲಿಗೆ ಬಂದು ಸರ್ಪ ಸಂಸ್ಕಾರ ಇತ್ಯಾದಿ ಸೇವೆ ಸಲ್ಲಿಸಿದ್ದು ಉಂಟು.

ರಾಜಕೀಯ ಮುತ್ಸದ್ಧಿಗಳು ಚುನಾವಣೆಗೆ ಮುನ್ನ ದೇವಿ ಕ್ಷೇತ್ರಗಳಿಗೆ ಹೋಗುವುದು ವಾಡಿಕೆ. ಆದರೀಗ ಕುಕ್ಕೆಯತ್ತಲೂ ಪಾದ ಬೆಳೆಸುತ್ತಿದ್ದಾರೆ. ಈಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸರ್ಪ ದೋಷ ನಿವಾರಣೆಗಾಗಿ ಧಾರ್ಮಿಖ ಉದ್ದೇಶದಿಂದ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದರೂ, ಇದರ ಹಿಂದೆ ಬೇರೆಯದೆ ಲೆಕ್ಕಾಚಾರವಿದೆ ಎನ್ನಲಾಗುತ್ತಿದೆ.

ದೇವಸ್ಥಾನಗಳಿಂದ ಆರಂಭ
ಉತ್ತರ ಭಾರತ ಚುನಾವಣೆ ಆರಂಭದಲ್ಲಿ ಪ್ರಖ್ಯಾತ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿ ಅಮಿತ್‌ ಶಾ ತಮ್ಮ ಚುನಾವಣ ಕಾರ್ಯವನ್ನು ಆರಂಭಿಸಿದ್ದರು. ಅದರಂತೆ ಕರ್ನಾಟಕ ವಿಧಾನಸಭಾ ಚುನಾವಣೆ ಕಾರ್ಯಕ್ಕೆ ಕುಕ್ಕೆಯಿಂದಲೇ ಚಾಲನೆ ನೀಡುವ ಸಂಭವವಿದೆ. ಆ ಮೂಲಕ ಕರಾವಳಿಯಿಂದ ತಮ್ಮ ರಾಜಕೀಯ ಜೈತ್ರ ಯಾತ್ರೆಯನ್ನು ಆರಂಭಿಸಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಉದ್ದೇಶ ಅವರದ್ದು ಎಂದು ವಿಶ್ಲೇಷಿಸಲಾಗುತ್ತಿದೆ.

ಸಹೋದರಿಯಿಂದ ಸೇವೆ
ಶಾ ಅವರ ಕುಟುಂಬಕ್ಕೂ ಕುಕ್ಕೆಗೂ ಹಿಂದಿನಿಂದ ನಂಟಿದೆ. ಇಲ್ಲಿಯ ಭಕ್ತರಲ್ಲಿ ಅಮಿತ್‌ ಶಾ ಅವರೂ ಒಬ್ಬರು. ಎರಡು ವರ್ಷದ ಹಿಂದೆ ಶಾ ಅವರ ಸಹೋದರಿ ಹಾಗೂ ಭಾವ ಇಲ್ಲಿಗೆ ಆಗಮಿಸಿ ಸೇವೆಗಳನ್ನು ಪೂರೈಸಿದ್ದರು. ಈ ಹಿಂದೆಯೇ ಅಮಿತ್‌ ಶಾ ಆಗಮಿಸುವ ನಿರೀಕ್ಷೆ ಈಡೇರಿರಲಿಲ್ಲ.

ರಾಜಕಾರಣಿಗಳೂ ಹಿಂದೆ ಬಿದ್ದಿಲ್ಲ 
ಇಲ್ಲಿಗೆ ಈ ಹಿಂದೆ ಆಗಮಿಸಿದ ರಾಜಕೀಯ ನಾಯಕರ ಪಟ್ಟಿ ದೊಡ್ಡದಿದೆ. ಮಾಜಿ ಪ್ರಧಾನಿ ಹೆಚ್‌ ಡಿ ದೇವೆಗೌಡ, ಮನೇಕಾ ಗಾಂಧಿ, ವರುಣ್‌ ಗಾಂಧಿ, ಬಿ.ಎಸ್‌ ಯಡಿಯೂರಪ್ಪ, ಅನಂತಕುಮಾರ್‌ ಸೇರಿದಂತೆ ಹಲವರು ಭೇಟಿ ನೀಡಿದ್ದರು. ಇದಲ್ಲದೇ ಸಚಿನ್‌ ತೆಂಡುಲ್ಕರ್‌ ಸಹಿತ ಕ್ರಿಕೆಟ್‌ ದಿಗ್ಗಜರು, ವಿಜಯ ಮಲ್ಯ ಸೇರಿದಂತೆ ಹಲವು ಉದ್ಯಮಿಗಳೂ ಆಗಮಿಸಿದ್ದಾರೆ. 

ಆಶ್ಲೇಷ ಬಲಿ ಸೇವೆ
ಫೆ.19ರಂದು ಕ್ಷೇತ್ರಕ್ಕೆ ಆಗಮಿಸುವ ಅಮಿತ್‌ ಶಾ ರಾತ್ರಿ ಇಲ್ಲಿ ತಂಗುವರು. ಫೆ.20ರ ಬೆಳಗ್ಗೆ ದೇಗುಲಕ್ಕೆ ಭೇಟಿ ನೀಡಿ
ದೇವರ ದರ್ಶನ ಪಡೆಯುವರು. ಬಳಿಕ ಸರ್ಪದೋಷಗಳ ನಿವಾರಣೆಯ ಸೇವೆಗಳಲ್ಲಿ ಒಂದಾದ ಆಶ್ಲೇಷ ಬಲಿ
ಸೇವೆ ಪೂರೈಸುವರು. ಬಳಿಕ ನಗರದ ಬೂತ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು. ರೂಪು
ರೇಷೆ ಹಾಗೂ ಇನ್ನಿತರ ಕುರಿತು ಪಕ್ಷದ ಮುಖಂಡರು ಸಿದ್ಧತೆ ನಡೆಸುತ್ತಿದ್ದಾರೆ . 

ಸಹಜ ಭೇಟಿ
‘ಹಿಂದೂ ದೇಗುಲಕ್ಕೆ ಧಾರ್ಮಿಕ ನಂಬಿಕೆಯ ಅಮಿತ್‌ ಶಾ ಭೇಟಿ ನೀಡುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರ ಭೇಟಿ ಅವಧಿ ಚುನಾವಣೆ ಸಮಯವಾಗಿರುವುದರಿಂದ ಕಾರ್ಯಕರ್ತರ ಸಭೆ ಹಾಗೂ ಪಕ್ಷದ ಶಕ್ತಿ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಅದೇನೂ ಹೊಸತಲ್ಲ ಹಾಗೂ ಬೇರೆ ಬಣ್ಣ ಹಚ್ಚುವ ಅವಶ್ಯಕತೆ ಇಲ್ಲ.
ಸಂಜೀವ ಮಠಂದೂರು,
  ಜಿಲ್ಲಾ ಬಿಜೆಪಿ ಅಧ್ಯಕ್ಷ

ವಿಶೇಷ ವರದಿ

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.