ಸುಳ್ಯ: ಕುಕ್ಕುಜಡ್ಕ ಮನೆಯಲ್ಲಿ  ಮಳೆಕೊಯಿಲಿಗೆ ಸಿದ್ಧತೆ 


Team Udayavani, Feb 14, 2018, 11:15 AM IST

14-Feb-5.jpg

ಸುಳ್ಯ : ಅಂತರ್ಜಲ ಸಂರಕ್ಷಣೆಯನ್ನು ಇನ್ನಾದರೂ ಮಾಡದಿದ್ದರೆ ಮುಂದಿನ ದಿನಗಳಲ್ಲಿ ದಾಹ ತೀರುವುದು ಕಷ್ಟವಾಗಲಿದೆ. ಭವಿಷ್ಯದಲ್ಲಿ ನೀರು ಸಿಗುವುದೋ ಎಂಬ ಆತಂಕದಿಂದ ಎಚ್ಚೆತ್ತಿರುವ ರೈತರೊಬ್ಬರು ಬೇಸಗೆಯ ಈ ದಿನಗಳಲ್ಲೇ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.

ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್‌ ಆಗಿರುವ ಸುಳ್ಯ ತಾ| ಕುಕ್ಕುಜಡ್ಕದ ಕೃಷಿಕ ಮಾಯಿಲಪ್ಪ ಸಂಕೇಶ ಅವರು ಇತ್ತೀಚೆಗೆ ಕಟ್ಟಿಸಿದ ಹೊಸ ಮನೆಯಲ್ಲಿ ಮಳೆ ಜಲಮರುಪೂರಣ ವ್ಯವಸ್ಥೆಯನ್ನು ಅಳವಡಿಸಿದ್ದಾರೆ. ಬೇಸಗೆಯ ಆರಂಭದಲ್ಲೇ ಈ ಕ್ರಮ ಕೈಗೊಂಡಿದ್ದು ಅಂತರ್ಜಲ ಸಂರಕ್ಷಣೆಗೆ ಅವರು ಪಣ ತೊಟ್ಟಿರುವುದನ್ನು ಪ್ರತಿನಿಧಿಸುತ್ತದೆ. ಮನೆಯ ಛಾವಣಿ ಸುತ್ತಲೂ ಪಿವಿಸಿ ಪೈಪ್‌ ಅಳವಡಿಸಿ ನೀರು ಕೆಳಗೆ ಹರಿಯದಂತೆ ತಡೆದಿದ್ದಾರೆ. ಮಳೆಗಾಲದಲ್ಲಿ ಛಾವಣಿ ಮೇಲೆ ಬೀಳುವ ನೀರೆಲ್ಲ ಪಿವಿಸಿ ಪೈಪ್‌ನ ಮೂಲಕ ಹರಿದು ಒಂದೇ ಕಡೆ ಬೀಳುವಂತೆ, ಒಂದು ಹನಿಯೂ ವ್ಯರ್ಥವಾಗದಂತೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಸರಳ, ಮಿತವ್ಯಯಕಾರಿ
ಮನೆಯಲ್ಲಿ ಜಲ ಮರುಪೂರಣ ವ್ಯವಸ್ಥೆ ಅಳವಡಿಸುವುದು ಸರಳ ಎನ್ನುವ ಮಾಯಿಲಪ್ಪ ಅವರು, ಇದನ್ನು ಪ್ರಯೋಗ
ಮಾಡಿ ಯಶಸ್ವಿಯಾಗಿದ್ದಾರೆ. ಇದರ ಕೆಲಸಗಳನ್ನು ಬಹುತೇಕ ತಾವೇ ಮಾಡಿ, ಖರ್ಚನ್ನೂ ಉಳಿಸಿದ್ದಾರೆ. ಜಲ ಮರುಪೂರಣ ವ್ಯವಸ್ಥೆಗಾಗಿ ಅವರು 25 ಸಾವಿರ ರೂ. ಖರ್ಚು ಮಾಡಿದ್ದಾರಂತೆ. ಸ್ಥಳೀಯಾಡಳಿತ ಉದ್ಯೋಗ ಖಾತರಿ ಯೋಜನೆಯಲ್ಲಿ 15 ಸಾವಿರ ರೂ. ಸಹಾಯ ಧನ ನೀಡುತ್ತದೆ. ಅದನ್ನು ಬಳಸಿಕೊಂಡಿದ್ದೇನೆ. ಎಲ್ಲರೂ ತಮ್ಮ ಮನೆಗಳಲ್ಲಿ ಇಂಥ ವ್ಯವಸ್ಥೆ ಮಾಡಿಕೊಂಡರೆ ಬೇಸಗೆಯಲ್ಲಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬಹುದು ಎಂದು ಹೇಳುತ್ತಾರೆ.

ಕಳೆದ ವರ್ಷ ಬಾವಿಗಳಲ್ಲಿ ಬೇಗನೆ ನೀರು ಆರಿದ್ದರಿಂದ ಜನ ಸಹಜವಾಗಿಯೇ ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ, ಮಾಯಿಲಪ್ಪ ಅವರ ಮನೆಗೆ ಭೇಟಿ ನೀಡಿರುವ ಹಲವರು, ಜಲ ಮರುಪೂರಣ ವ್ಯವಸ್ಥೆಯನ್ನು ಗಮನಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸಕ್ತಿ ಇದ್ದವರು ಅವರ ಸಲಹೆಗಳನ್ನು ಪಡೆದು ಅನುಷ್ಠಾನಕ್ಕೆ ಮುಂದಾಗಿದ್ದಾರೆ.

ಛಾವಣಿಯಿಂದ ಗುಂಡಿಗೆ 
ಛಾವಣಿಯಿಂದ ಪೈಪ್‌ ಮೂಲಕ ಇಳಿಯುವ ನೀರು ಹರಿಯುವುದು ಮನೆ ಅಂಗಳದ ಮುಂದಿರುವ ಇಂಗುಗುಂಡಿಗೆ! ಬಾವಿ ಮತ್ತು ಕೊಳವೆ ಬಾವಿಗಳ ಮಧ್ಯೆ ಅವರು ಈ ಇಂಗುಗುಂಡಿ ತೆಗೆದಿದ್ದಾರೆ. 10 ಸಿಮೆಂಟ್‌ ರಿಂಗ್‌ಗಳನ್ನು ಬಳಸಿ, 4.5 ಅಡಿಯಲ್ಲಿ ರಿಂಗ್‌ ಅಳವಡಿಸಿದ್ದಾರೆ. ರಿಂಗ್‌ನ ಹೊರಗೆ ಮೇಲ್ಪದರದಲ್ಲಿ ದೊಡ್ಡ ಗಾತ್ರದ ಜಲ್ಲಿ ಕಲ್ಲುಗಳನ್ನು
(ಬೋಲ್ಡರ್ಸ್‌), ಅದರ ಮೇಲೆ ಮರಳನ್ನು ಹರಡಿದ್ದಾರೆ. ರಿಂಗ್‌ನ ಒಳಭಾಗ ತೆರೆದುಕೊಂಡಿದ್ದು, ಅದಕ್ಕೆ ನೀರು ಹರಿಯಲು ವ್ಯವಸ್ಥೆ ಕಲ್ಪಿಸಿದ್ದಾರೆ. ಅಂಗಳದಲ್ಲಿ ಬೀಳುವ ಮಳೆ ನೀರು ಕೂಡ ಇಂಗು ಗುಂಡಿಗೇ ಸೇರುತ್ತದೆ.

ಎಲ್ಲರೂ ಜೋಡಿಸಿಕೊಳ್ಳಿ
ಕಳೆದ ವರ್ಷ ನೀರಿನ ಸಮಸ್ಯೆ ಎದುರಾದಾಗ ಆತಂಕಗೊಂಡೆ. ಸಮಸ್ಯೆ ಆಗಿತ್ತು. ಅದಕ್ಕೆ ಈ ಬಾರಿ ಮುಂಜಾಗ್ರತೆ ವಹಿಸಿ ಮನೆಯಲ್ಲಿ ಜಲಮರುಪೂರಣ ವ್ಯವಸ್ಥೆ ಮಾಡಿಕೊಂಡಿದ್ದೇನೆ. ಗ್ರಾ.ಪಂ.ನ ಉದ್ಯೋಗ ಖಾತರಿಯಲ್ಲಿ 15 ಸಾವಿರ ರೂ. ಅನುದಾನ ನೀಡುತ್ತಿದೆ. ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಂಡಲ್ಲಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಮನೆಗಳಲ್ಲಿ ಮಾತ್ರವಲ್ಲ, ಸರಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಖಾಸಗಿ ಸಂಸ್ಥೆಗಳೂ ಈ ವ್ಯವಸ್ಥೆಯನ್ನು ಅಳವಡಿಸಿಕೊಂಡರೆ ಉತ್ತಮ.
– ಮಾಯಿಲಪ್ಪ ಸಂಕೇಶ,
ಕುಕ್ಕುಜಡ್ಕ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.