ಸಮಾನತೆ ಮೂಡಿಸಲು ಮಾಚಿದೇವರ ಶ್ರಮ
Team Udayavani, Feb 19, 2018, 12:27 PM IST
ಕೆ.ಆರ್.ಪುರ: ಸಾಮಾಜಿಕ ಅಸಮಾನತೆ ನಡುವೆ ತುಳಿತಕ್ಕೊಳಗಾದವರನ್ನು ಸಬಲರನ್ನಾಗಿಸಲು ಶ್ರಮಿಸಿದ ಶ್ರೇಷ್ಠ ಶರಣ ಮಡಿವಾಳ ಮಾಚಿದೇವರು ಎಂದು ಶಾಸಕ ಬಿ.ಎ.ಬಸವರಾಜ ಅಭಿಪ್ರಾಯಪಟ್ಟರು.
ಇಲ್ಲಿನ ಸ್ವತಂತ್ರನಗರದಲ್ಲಿ ಶ್ರೀ ಮಾಚಿ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಮಡಿವಾಳರ ಹಬ್ಬ ಮತ್ತು ದೋಭಿಘಾಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ಒಂದು ವರ್ಗ ಎದುರಿಸುತ್ತಿದ್ದ ಕೀಳರಿಮೆ, ಸಂಕಷ್ಟಗಳನ್ನು ತೊಲಗಿಸುವ ಧ್ಯೇಯ ಹೊಂದಿದ್ದ ಮಾಚಿದೇವರು, ಸಾಮಾಜಿಕ ಕ್ರಾಂತಿ ಕೈಗೊಂಡು ಸಮಾಜವನ್ನು ಅಸಮಾನತೆಯಿಂದ ಮುಕ್ತಗೊಳಿಸಲು ಶ್ರಮಿಸಿದ್ದರು, ಅನುಭವಮಂಟಪ ಕಟ್ಟುವಲ್ಲೂ ಅವರ ಪಾತ್ರ ಪ್ರಮುಖವಾಗಿತ್ತು ಎಂದರು.
ಬಸವನಪುರ ಗ್ರಾಮದ ಒಂದು ಎಕರೆ 20 ಗುಂಟೆ ಪ್ರದೇದಲ್ಲಿ 3 ಕೋಟಿ ವೆಚ್ಚದಲ್ಲಿ, ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ ದೋಭಿಘಾಟ್ ಉದ್ಘಾಟಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ 3 ಕೋಟಿ ಅನುದಾನ ಪಡೆದು, ಮಡಿವಾಳ ಸಮಾಜದವರು ಮದುವೆ ಮತ್ತಿತರ ಶುಭ ಕಾರ್ಯ ನಡೆಸಲು ಅನುಕೂಲವಾಗುವಂತೆ ಸಮುದಾಯ ಭವನ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಇದೇ ವೇಳೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮಡಿವಾಳ ಮಾಚಿ ದೇವರ ಭಾವಚಿತ್ರದ ಮೆರವಣಿಗೆ ನಡೆಯಿತು. ಹಾಗೇ ಮಡಿವಾಳ ಸಾಮುದಾಯದವರಿಗೆ ವಿದ್ಯುತ್ ಚಾಲಿತ ಇಸಿŒಪೆಟ್ಟಿಗೆಗಳನ್ನು ವಿತರಿಸಲಾಯಿತು. ಮಾಚಿ ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್.ಕೃಷ್ಣಪ್ಪ, ಪಾಲಿಕೆ ಸದಸ್ಯ ಜಯಪ್ರಕಾಶ್, ಆಂತೋಣಿಸ್ವಾಮಿ, ಕಲ್ಕೆರೆ ಕೃಷ್ಣಮೂರ್ತಿ, ಬಿ.ವಿ.ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.