ಗೋವಾ ಮೂಲದ ಗಾಯಕ ಆತ್ಮಹತ್ಯೆ
Team Udayavani, Feb 19, 2018, 12:28 PM IST
ಬೆಂಗಳೂರು: ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಗೋವಾ ಮೂಲದ ಗಾಯಕ ಸೃಜನ್ (26) ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಲ ತಿಂಗಳುಗಳಿಂದ ಕೃಷ್ಣಾರೆಡ್ಡಿ ಲೇಔಟ್ನಲ್ಲಿ ಬಾಡಿಗೆ ರೂಂನಲ್ಲಿ ಸೃಜನ್ ಒಬ್ಬರೇ ವಾಸಿಸುತ್ತಿದ್ದರು.
ಕಳೆದ ಮೂರು ದಿನಗಳಿಂದ ರೂಂ ಬಳಿ ಸೃಜನ್ ಕಾಣಿಸಿಕೊಂಡಿರಲಿಲ್ಲ. ಶನಿವಾರ ಸಂಜೆ ಆತ ಉಳಿದುಕೊಂಡಿದ್ದ ಕೊಠಡಿಯಿಂದ ಕೆಟ್ಟ ವಾಸನೆ ಬರುತ್ತಿತ್ತು. ಇದರಿಂದ ಅನುಮಾನಗೊಂಡ ಪಕ್ಕದ ಮನೆಯವರು ಕೋಣೆಯ ಬಾಗಿಲು ಒಡೆದು ಒಳಹೋದಾಗ ಸೃಜನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದರು.
ಗಾಯಕರಾಗಿದ್ದ ಸೃಜನ್, ಗೋವಾದಲ್ಲಿ ಸ್ಟೇಜ್ ಪ್ರೋಗ್ರಾಂ ನೀಡುತ್ತಿದ್ದರು. ಕನ್ನಡ ಗೊತ್ತಿದ್ದರಿಂದ ಇಲ್ಲಿಯೂ ಅವಕಾಶಗಳಿಗಾಗಿ ಪ್ರಯತ್ನಿಸುತ್ತಿದ್ದರು. ಇತ್ತೀಚೆಗೆ ಮಾನಸಿಕ ಒತ್ತಡಕ್ಕೆ ಒಳಗಾದಂತೆ ಕಂಡು ಬರುತ್ತಿದ್ದ ಆತ, ತಮ್ಮೊಂದಿಗೆ ಯಾವುದೇ ವಿಚಾರ ಹಂಚಿಕೊಂಡಿರಲಿಲ್ಲ ಎಂದು ಆತನ ಪೋಷಕರು ತಿಳಿಸಿದ್ದಾರೆ. ಅವಕಾಶಗಳ ಕೊರತೆಯಿಂದ ಖನ್ನತೆಗೆ ಒಳಗಾಗಿ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಮೃತ ಸೃಜನ್ ಸಹೋದರ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಅರಕೆರೆಯಲ್ಲಿ ವಾಸವಿದ್ದಾರೆ. ಅವರು ನೀಡಿದ ದೂರಿನ ಅನ್ವಯ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.