27ರಂದು ಗುಲಬರ್ಗಾ ವಿವಿ ಘಟಿಕೋತ್ಸವ


Team Udayavani, Feb 25, 2018, 10:53 AM IST

gul-5.jpg

ಕಲಬುರಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ 36ನೇ ವಾರ್ಷಿಕ ಘಟಿಕೋತ್ಸವ ಫೆ. 27ರಂದು ಬೆಳಗ್ಗೆ 11:30ಕ್ಕೆ
ವಿವಿಯ ಡಾ| ಅಂಬೇಡ್ಕರ ಭವನದಲ್ಲಿ ನಡೆಯಲಿದೆ.

ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ವಜುಭಾಯ್‌ ರೂಡಾಭಾಯ್‌ ವಾಲಾ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ವಿಶ್ವವಿದ್ಯಾಲಯದ ಸಮ-ಕುಲಾಧಿ ಪತಿ ಬಸವರಾಜ ರಾಯರಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಮಾಜಿ ನಿರ್ದೇಶಕ ಹಾಗೂ ಇಂಡಿಯನ್‌ ನ್ಯಾಷನಲ್‌ ಸೈನ್ಸ್‌ ಅಕಾಡೆಮಿ ಹಿರಿಯ ವಿಜ್ಞಾನಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಪ್ರೊ| ಜಿ.ಪದ್ಮನಾಬನ್‌ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
 
ಈ ಬಾರಿ ದಾನಿಗಳ ಪ್ರಾಯೋಜಕತ್ವ ದಿಂದ 13 ಚಿನ್ನದ ಪದಕಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದ್ದು, ಒಟ್ಟಾರೆ 165 ಚಿನ್ನದ ಪದಕಗಳಲ್ಲಿ 158 ಚಿನ್ನದ ಪದಕಗಳನ್ನು 67 ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ನೀಡಲಾಗುವುದು. 46 ಮಹಿಳಾ ವಿದ್ಯಾರ್ಥಿ ಹಾಗೂ 21 ಪುರುಷ ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದುಕೊಳ್ಳಲಿದ್ದಾರೆ. ಉಳಿದ 7 ಚಿನ್ನದ ಪದಕಗಳನ್ನು ನಗದು ಬಹುಮಾನ ರೂಪದಲ್ಲಿ ತಲಾ 6 ಜನ ಮಹಿಳಾ ಹಾಗೂ ಪುರುಷರಂತೆ ಒಟ್ಟು 12 ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. 

ಮ್ಯಾನೇಜ್‌ಮೆಂಟ್‌ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ರಸಿಕಾ.ಪಿ.ಮೆಹತಾ ಅತಿ ಹೆಚ್ಚು (8) ಚಿನ್ನದ ಪದಕ ಪಡೆದಿದ್ದಾರೆ. ಸೂಕ್ಷ್ಮಜೀವಶಾಸ್ತ್ರ ವಿಭಾಗದಲ್ಲಿ ಕಾಶಿರಾಯ ಜಿರೊಳಿ, ಕನ್ನಡ ವಿಭಾಗದಲ್ಲಿ ರೇಖಾ ಬಸವರಾಜ ತಲಾ (7), ರಾಜ್ಯಶಾಸ್ತ್ರ ವಿಭಾಗದಲ್ಲಿ ಪಾರ್ವತಿ ಯಂಕಣಗೌಡ, ಎಂಸಿಎ ವಿಭಾಗದಲ್ಲಿ ಪೂಜಾ ಮಡೆಪ್ಪ ಹಾಗೂ ಗಣಿತ ವಿಭಾಗದಲ್ಲಿ ರೇಖಾ ಶಂಕರೇಗೌಡ ಜಿ. ತಲಾ (6) ಚಿನ್ನದ ಪದಕ ಹಾಗೂ ಜೀವರಸಾಯನಶಾಸ್ತ್ರ ವಿಭಾಗದಲ್ಲಿ ಪ್ರಿಯಂ ಸೂರಿ ಹಾಗೂ ರಸಾಯನಶಾಸ್ತ್ರ ವಿಭಾಗದಲ್ಲಿ ಸರಸ್ವತಿ ಯು. ತಲಾ (5) ಚಿನ್ನದ ಪದಕ ಪಡೆದಿದ್ದಾರೆ ಎಂದು ವಿವರಿಸಿದರು. 

291 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗುತ್ತಿದ್ದು, ಇದರಲ್ಲಿ 180 ಪುರುಷ ಅಭ್ಯರ್ಥಿಗಳು ಮತ್ತು 111 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. ಸ್ನಾತಕ, ಸ್ನಾತಕೋತ್ತರ ಹಾಗೂ ಸ್ನಾತಕೋತ್ತರ ಡಿಪ್ಲೋಮಾ ಪದವಿಗೆ ಒಟ್ಟು 4,183 ವಿದ್ಯಾರ್ಥಿಗಳು ಭಾಜನರಾಗಿದ್ದು, ಈ ಪೈಕಿ 2203 ಪುರುಷ, 1980 ಮಹಿಳಾ ವಿದ್ಯಾರ್ಥಿನಿಯರು ಸೇರಿದ್ದಾರೆ. ಅದೇ ರೀತಿ 23,102 ವಿದ್ಯಾರ್ಥಿಗಳು ಸ್ನಾತಕ ಪದವಿ ಪಡೆಯಲಿದ್ದು, ಇದರಲ್ಲಿ 12809 ಪುರುಷ ಮತ್ತು 10293 ಮಹಿಳಾ ಅಭ್ಯರ್ಥಿಗಳಿದ್ದಾರೆ ಎಂದು ತಿಳಿಸಿದರು.

ಘಟಿಕೋತ್ಸವಕ್ಕೆ ಬರುವಂತೆ ರಾಜ್ಯಪಾಲರನ್ನು ಕೇಳಿಕೊಳ್ಳಲಾಗಿದೆ. ಬರುವ ವಿಶ್ವಾಸವಿದೆ ಎಂದು ತಿಳಿಸಿದರು. ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ದಯಾನಂದ ಅಗಸರ, ಮೌಲ್ಯಮಾಪನ ಕುಲಸಚಿವ ಪ್ರೊ| ಡಿ.ಎಂ. ಮದರಿ ಮತ್ತು ಹಣಕಾಸು ಅಧಿಕಾರಿ ಲಕ್ಷ್ಮಣ
ರಾಜನಾಳಕರ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಎಂ.ಎಸ್‌. ಪಾಸೋಡಿ ಸುದ್ದಿಗೋಷ್ಠಿಯಲ್ಲಿದ್ದರು.

ಪರೀಕ್ಷಾ ಸುಧಾರಣೆಗೆ ದಿಟ್ಟ ಹೆಜ್ಜೆ
ಕಲಬುರಗಿ: ಪ್ರಶ್ನೆ ಪತ್ರಿಕೆ ಪದೇ-ಪದೇ ಬಹಿರಂಗದಿಂದ ಮುಜುಗರಕ್ಕೊಳಪಡುವುದನ್ನು ತಪ್ಪಿಸಿಕೊಳ್ಳಲು ಗುಲಬರ್ಗಾ
ವಿಶ್ವವಿದ್ಯಾಲಯ ಕ್ಲಸ್ಟರ್‌ ಪದ್ಧತಿಯಲ್ಲಿ ಪರೀಕ್ಷೆ ನಡೆಸಲು ಹಾಗೂ ಆನ್‌ಲೈನ್‌ ಮುಖಾಂತರ ಪ್ರಶ್ನೆ ಪತ್ರಿಕೆ ಪರೀಕ್ಷೆ ಸಮಯದ ಅರ್ಧ ಗಂಟೆ ಮುಂಚೆ ನೀಡಲು ಯೋಜಿಸಲಾಗಿದೆ ಕುಲಪತಿ ಪ್ರೊ| ಎಸ್‌. ಆರ್‌. ನಿರಂಜನ್‌ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, 500 ವಿದ್ಯಾರ್ಥಿಗಳಿರುವ ಕಾಲೇಜ್‌ ಗೆ ಅದರಲ್ಲೂ ಎಲ್ಲ ಸೌಲಭ್ಯಗಳುಳ್ಳ ವಿದ್ಯಾ ಕೇಂದ್ರಕ್ಕೆ ಪರೀಕ್ಷಾ ಕೇಂದ್ರ ನೀಡುವುದು, ಕ್ಲಸ್ಟರ್‌ ಪದ್ಧತಿಯಲ್ಲಿ ಪರೀಕ್ಷೆ ನಡೆಸಲು ಹಾಗೂಆನ್‌ಲೈನ್‌ ಮುಖಾಂತರವೇ ಪ್ರಶ್ನೆ ಪತ್ರಿಕೆ ಸರಬರಾಜು ಮಾಡಲು ನಿರ್ಧರಿಸಲಾಗಿದೆ. ಕಳೆದ ನವೆಂಬರ್‌ದಲ್ಲಿ ಸತತ ಎರಡು ಪ್ರಶ್ನೆ ಪತ್ರಿಕೆಗಳು ಬಹಿರಂಗವಾಗಿರುವುದು ವಿವಿಗೆ ಹಲವಾರು ಪಾಠ ಕಲಿಸಿದೆ. ಹೀಗಾಗಿ ದಿಟ್ಟ ಹೆಜ್ಜೆ ಇಡಲಾಗಿದೆ. ಪ್ರಶ್ನೆ ಪತ್ರಿಕೆ ಬಹಿರಂಗಗೊಳಿಸಿದ ಶಿಕ್ಷಣ ಸಂಸ್ಥೆ ಮಾನ್ಯತೆ ಹಿಂತೆಗೆದುಕೊಳ್ಳಲಾಗಿದೆ. 2 ಲಕ್ಷ ರೂ ದಂಡ ವಿಧಿಸಲಾಗುತ್ತಿದೆ ಎಂದು ವಿವರಿಸಿದರು

ಬಲಬೀರ್‌ಸಿಂಗ್‌ ಗೌರವ ಡಾಕ್ಟರೆಟ್‌
ಕಲಬುರಗಿ: ಫೆ. 27ರಂದು ನಡೆಯುತ್ತಿರುವ ಗುಲಬರ್ಗಾ ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವದಲ್ಲಿ ಒಬ್ಬರಿಗೆ ಮಾತ್ರ ಗೌರವ ಡಾಕ್ಟರೆಟ್‌ ನೀಡಲಾಗುತ್ತಿದೆ. ಬೀದರ ಗುರುನಾನಕ್‌ ಶಿಕ್ಷಣ ಸಂಸ್ಥೆ ಹಾಗೂ ಗುರುದ್ವಾರದ ಸರ್ದಾರ ಬಲಬೀರ್‌ಸಿಂಗ್‌ ಅವರಿಗೆ ಗೌರವ ಡಾಕ್ಟರೆಟ್‌ ನೀಡಲು ನಿರ್ಧರಿಸಲಾಗಿದೆ. ಗೌರವ ಡಾಕ್ಟರೆಟ್‌ಗೆ ಒಟ್ಟು 24 ಅರ್ಜಿಗಳು ಬಂದಿದ್ದವು. ಅವುಗಳನ್ನೆಲ್ಲ ಪರಿಶೀಲಿಸಿ ಕಳುಹಿಸಲಾದ ಹೆಸರುಗಳಲ್ಲಿ ರಾಜ್ಯಪಾಲರು ನೇಮಿಸಿದ ಸಮಿತಿ ಮೂರು ಹೆಸರು ಕಳುಹಿಸಿದ ಪಟ್ಟಿಯಲ್ಲಿ ರಾಜ್ಯಪಾಲರು ಓರ್ವರ ಹೆಸರನ್ನು ಅಂತಿಮಗೊಳಿಸಿದ್ದಾರೆ. 

ಟಾಪ್ ನ್ಯೂಸ್

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.