ವೈರಾಗ್ಯಮೂರ್ತಿಯ 88ನೇ ಮಹಾಮಸ್ತಕಾಭಿಷೇಕ ಸಂಪನ್ನ


Team Udayavani, Feb 26, 2018, 6:15 AM IST

25BNP-(26).jpg

ಹಾಸನ: ಶ್ರವಣಬೆಳಗೊಳದ ಬಾಹುಬಲಿಮೂರ್ತಿಗೆ ಈ ಶತಮಾನದ 2ನೇ ಮಹಾಮಸ್ತಕಾಭಿಷೇಕಕ್ಕೆ ಭಾನುವಾರ ವಿಧ್ಯುಕ್ತವಾಗಿ ತೆರೆಬಿದ್ದಿತು. 9 ದಿನಗಳು ನಡೆದ ವೈರಾಗ್ಯಮೂರ್ತಿಯ 88ನೇ ಮಹಾ ಮಸ್ತಕಾಭಿಷೇಕಕ್ಕೆ ಕೊನೆಯ ದಿನ ಲಕ್ಷಾಂತರ ಜನರು ಸಾಕ್ಷಿಯಾದರು.

ಭಾನುವಾರ ಕೊನೆಯ ದಿನವೂ ಆಗಿದ್ದರಿಂದ ಪ್ರವೇಶದ ಪಾಸುಗಳನ್ನು ಹೊಂದಿದ್ದವರು ಮುಂಜಾನೆ 6.30 ರಿಂದಲೇ ವಿಂಧ್ಯಗಿರಿಯನ್ನೇರಿ ಆಟ್ಟಣಿಗೆಯಲ್ಲಿ ಕುಳಿತು ಮಹಾಮಜ್ಜನ ಕಣ್ತಂಬಿಕೊಂಡರು. ಎಂದಿನಂತೆ 1,008 ಕಳಶಗಳ ಜಲಾಭಿಷೇಕದ ನಂತರ ಎಳನೀರು, ಕಬ್ಬಿನ ಹಾಲು, ಕ್ಷೀರ, ಕಲಕಚೂರ್ಣ, ಅರಿಶಿಣ, ಅಷ್ಟಗಂಧ, ಚಂದನದ ಅಭಿಷೇಕ ನಡೆಯುವ ವೇಳೆ ಜೈ ಗೊಮ್ಮಟೇಶ ಎಂದು ಭಕ್ತರು ಜಯಘೋಷ ಕೂಗುತ್ತಾ ಭಕ್ತಿಯ ಪರಾಕಾಷ್ಠೆ ಮೆರೆದರು.

ಗರಿಷ್ಠ 5,500 ಜನರು ಸೇರಬಹುದಾದ ಅಟ್ಟಣಿಗೆ ಭರ್ತಿಯಾಗಿದ್ದರಿಂದ ಅಟ್ಟಣಿಗೆ ಏರುವ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಮೊದಲು ದರ್ಶನಕ್ಕೆ ಬಂದ ಭಕ್ತರನ್ನು ಕಳುಹಿಸಿ ಅಟ್ಟಣಿಗೆಯ ಕೆಳಗೆ ಕಾಯುತ್ತಿದ್ದವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು. ಕೊನೆಯ ದಿನವಾದ್ದರಿಂದ ಪಂಚಾಮೃತ ಅಭಿಷೇಕ ನೆರವೇರುವುದೂ ಸುಮಾರು ಒಂದು ಗಂಟೆ ವಿಳಂಬವಾಯಿತು. ನವದಿನಗಳಿಂದ ಬಣ್ಣದ ಓಕುಳಿಯಲ್ಲಿ ಮಿಂದಿದ್ದ ಮಂದಸ್ಮಿತ ಮಂಗಳಾರತಿ ವೇಳೆಗೆ ಸಹಜ ಸ್ಥಿತಿಗೆ ಮರಳಿದ್ದ. ಮಧ್ಯಾಹ್ನ 3.30ರ ವೇಳೆಗೆ ಮಹಾಮಂಗಳಾರತಿ ನೆರವೇರುವುದರೊಂದಿಗೆ ಬಾಹುಬಲಿಮೂರ್ತಿಯ 88ನೇ ಮಹಾಮಸ್ತಕಾಭಿಷೇಕಕ್ಕೆ ತೆರೆ ಬಿದ್ದಿತು.

ಮಧ್ಯಾಹ್ನ 2 ಗಂಟೆಯಿಂದ ಅರಂಭವಾಗಬೇಕಿದ್ದ ಧರ್ಮದರ್ಶನಕ್ಕೆ ಬೆಳಗ್ಗೆ 10 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದ ಸಾವಿರಾರು ಭಕ್ತರು ಉರಿ ಬಿಸಿಲಿನ ತಾಪದಿಂದ ಬಳಲಿದ್ದರು. ಪಂಚಾಮೃತ ಅಭಿಷೇಕ ವಿಳಂಬವಾಗಿದ್ದರಿಂದ ಧರ್ಮ ದರ್ಶನವೂ ವಿಳಂಬವಾಯಿತು. 

ಪೊಲೀಸರು 2.15 ರ ವೇಳೆಗೆ ಸಾರ್ವಜನಿಕರನ್ನು ಧರ್ಮದರ್ಶನಕ್ಕೆ ಬಿಟ್ಟರು. ವಿದ್ಯುದ್ದೀಪಗಳಿಂದ ಅಲಂಕಾರಗೊಂಡ ವಿಂಧ್ಯಗಿರಿಯತ್ತ ರಾತ್ರಿ 10 ಗಂಟೆವರೆಗೂ ಭಕ್ತರ ದಂಡು ಸಾಗಿತ್ತು. ಭಾನುವಾರ ರಾತ್ರಿ 11 ಗಂಟೆವರೆಗೂ ಶ್ರೀ ಬಾಹುಬಲಿ ಮೂರ್ತಿಯ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ಅಂತಿಮ ದಿನದ ಮಹಾಮಸ್ತಕಾಭಿಷೇಕದಲ್ಲಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ವಿವಿಧ ಜೈನ ಮಠಗಳ ಸ್ವಾಮೀಜಿಯವರು ಪಾಲ್ಗೊಂಡು ಧನ್ಯತಾ ಭಾವ ಮೆರೆದರು. ಶ್ರೀ ಬಾಹುಬಲಿಮೂರ್ತಿಗೆ ತಮ್ಮ ನೇತೃತ್ವದಲ್ಲಿ 4ನೇ ಮಹಾಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನೆರವೇರಿಸಿದ ಸಂತೃಪ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೊಗದಲ್ಲಿ ಹೊರಸೂಸುತ್ತಿತ್ತು.

– ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.