ಮಾಜಿ ಸಂಪುಟ ಕಾರ್ಯದರ್ಶಿ TSR ಸುಬ್ರಮಣಿಯನ್ ಇನ್ನಿಲ್ಲ
Team Udayavani, Feb 26, 2018, 11:20 AM IST
ಹೊಸದಿಲ್ಲಿ : ಮಾಜಿ ಸಂಪುಟ ಕಾರ್ಯದರ್ಶಿ ಟಿಎಸ್ಆರ್ ಸುಬ್ರಮಣಿಯನ್ ಇಂದು ಸೋಮವಾರ ನಿಧನ ಹೊಂದಿದರು.
ಮಧ್ಯಮ ವರ್ಗದ ತಮಿಳು ಕುಟುಂಬವೊಂದರಲ್ಲಿ ಜನಿಸಿದ್ದ ಸುಬ್ರಮಣಿಯನ್ ತಮ್ಮ ಶಾಲಾ ಶಿಕ್ಷಣವನ್ನು ತಂಜಾವೂರ್ನಲ್ಲಿ ನಡೆಸಿದ್ದರು.
ಕಲ್ಕತ್ತಾ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಆ ಬಳಿಕ ಲಂಡನಿನ ಇಂಪೀರಿಯಲ್ ಕಾಲೇಜ್ ಆಫ್ ಸಯನ್ಸ್ ಮತ್ತು ಟೆಕ್ನಾಲಜಿಯಲ್ಲಿ ಅಧ್ಯಯನ ನಡೆಸಿದ್ದರು. ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆಡಳಿತೆಯಲ್ಲಿ ಸ್ನಾತಕೋತ್ತರ ಪದವಿಯನ್ನೂ ಅವರು ಪಡೆದಿದ್ದರು.
ಸುಬ್ರಮಣಿಯನ್ ನಿಧನಕ್ಕೆ ಶೋಕ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಐಎಎಸ್ ಅಸೋಸಿಯೇಶನ್, “ಸುಬ್ರಮಣಿಯನ್ ನಿಧನದಿಂದಾಗಿ ಇಡಿಯ ಐಎಎಸ್ ಸಮುದಾಯಕ್ಕೆ ಮತ್ತು ದೇಶಕ್ಕೆ ಭಾರೀ ದೊಡ್ಡ ನಷ್ಟವಾಗಿದೆ; ಇಡಿಯ ಐಎಎಸ್ ಸಮುದಾಯದಲ್ಲಿ ಅವರದ್ದು ಭಾರೀ ದೊಡ್ಡ ವ್ಯಕ್ತಿತ್ವ’ ಎಂದು ಹೇಳಿದೆ.
ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಅವರು ಸುಬ್ರಮಣಿಯನ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.