ಲಕ್ಸುರಿ ರೈಡ್‌ಗೆ ಗೋಲ್ಡ್‌ ವಿಂಗ್‌


Team Udayavani, Feb 26, 2018, 11:45 AM IST

bike.jpg

ಹಲವರಿಗೆ ಕಾರು, ಬೈಕ್‌ ಸವಾರಿ ಅನ್ನೋದು ಒಂದು ಹುಚ್ಚುತನ. ಹೀಗೂ ಇರುತ್ತಾ? ಎಂದು ಹುಬ್ಬೇರಿಸುವ ಮಟ್ಟಕ್ಕೆ ಕಾರು, ಬೈಕ್‌ಗಳ ಮೇಲೆ ಪ್ರೀತಿ ಬೆಳೆಸಿಕೊಂಡಿರುತ್ತಾರೆ. ಕೆಲವೊಮ್ಮೆ ನಂಬಲಿಕ್ಕೂ ಸಾಧ್ಯವಾಗದ ರೀತಿಯ ದುಬಾರಿ ಕಾರು, ಬೈಕ್‌ಗಳು ಮಾರುಕಟ್ಟೆ ಪ್ರವೇಶಿಸಿದ ಬೆನ್ನಲ್ಲೇ ಖರೀದಿಸಿ ತಮ್ಮ ಮನೆಯಂಗಳದಲ್ಲಿ ತಂದು ನಿಲ್ಲಿಸಿಕೊಳ್ಳುವವರಿದ್ದಾರೆ.

ಅಷ್ಟಕ್ಕೂ ಇವೆಲ್ಲವೂ ಹಣ ಇರುವಲ್ಲೇ ಸಾಧ್ಯ ಅನ್ನೋದು ಕಟು ಸತ್ಯ. ಹಾಗಂತ ಮತ್ಯಾರಿಂದಲೂ ಸಾಧ್ಯವೇ ಇಲ್ಲ ಎಂದು ವಾದಿಸಲೂ ಸಾಧ್ಯವಾಗದು. ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಧನೆಯ ಬೆನ್ನೇರಿದ ಅನೇಕ ಬಡವರೂ ಬೆವರಿಳಿಸಿ, ಕೈತುಂಬ ಗಳಿಸಿಯೇ ದುಬಾರಿ ಕಾರು, ಬೈಕ್‌ಗಳ ಒಡೆಯರಾಗಿರುವುದಕ್ಕೆ ನೂರಾರು ಉದಾಹರಣೆಗಳು ಸಿಗುತ್ತವೆ. ಒಂದಂತೂ ಖರೆ, “ಲಕ್ಸುರಿ’ ಲೈಫ್ಗೆ ಆಕರ್ಷಿತರಾಗದಿರುವವರು ಕಡಿಮೆ. ಹೆಚ್ಚಿನವರು ಜೀವನದಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಲಕ್ಸುರಿತನದ ಅನುಭವ ಬಯಸುತ್ತಾರೆ.

ಇಂಥ ಕ್ರೇಜ್‌ ಹೆಚ್ಚಿನದಾಗಿ ಇರುವುದೇ ಯುವಕ-ಯುವತಿಯರಲ್ಲಿ. ಅಂಥವರ ನಾಡಿಮಿಡಿತ ಅರಿತಿರುವ ಆಟೋಮೊಬೈಲ್‌ ಕಂಪನಿಗಳು, ಈಗ ವರ್ಷದ 365 ದಿನಗಳೂ ಹೊಸ ಹೊಸ ವಿನ್ಯಾಸ, ತಂತ್ರಜ್ಞಾನಗಳ ಅಳವಡಿಕೆಯ ಅನ್ವೇಷಣೆಯಲ್ಲಿ ತೊಡಗಿರುತ್ತವೆ. ಇದಕ್ಕೆಂದೇ ತಜ್ಞರನ್ನು, ನೂರಾರು ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿರುತ್ತವೆ. ಇಂಥ ಅನ್ವೇಷಣೆಯ ಫ‌ಲವಾಗಿ ಮಾರುಕಟ್ಟೆಗೆ ಪರಿಚಯಗೊಂಡಿರುವ ದುಬಾರಿ ಬೈಕ್‌ಗಳಲ್ಲಿ “ಹೋಂಡಾ ಗೋಲ್ಡ್‌ ವಿಂಗ್‌’ ಕೂಡ ಒಂದು.
1974ರಲ್ಲೇ ಹೋಂಡಾ ಲಕ್ಸುರಿ ವಿನ್ಯಾಸದಲ್ಲಿ ಈ ಹೆಸರಿನ ಬೈಕ್‌ ತಯಾರಿಸಿತ್ತು. ಆನಂತರದ ದಿನಗಳಲ್ಲಿ ಅಮೆರಿಕ, ಯುರೋಪ್‌, ಆಸ್ಟ್ರೇಲಿಯಾಗಳ ಜನಪ್ರಿಯ ಬೈಕ್‌ಗಳಲ್ಲಿ ಇದೂ ಒಂದಾಗಿತ್ತು. ಜಪಾನ್‌ನಲ್ಲೂ ಈ ಬೈಕ್‌ನ ಬಗ್ಗೆ ಭಾರೀ ಕ್ರೇಜ್‌ ಸೃಷ್ಟಿಯಾಗಿತ್ತು. ಈಗ ಭಾರತ ಕೂಡ ಇದರಿಂದ ಹೊರತಾಗಿಲ್ಲ.

ಗುಣಮಟ್ಟದ ಎಂಜಿನ್‌ ಬಳಕೆ
“ಕಾಸಿಗೆ ತಕ್ಕ ಕಜ್ಜಾಯ’ ಎನ್ನುವಂತೆ 2018ರ ಸಾಲಿನಲ್ಲಿ ಪರಿಚಯಿಸಲಾಗಿರುವ ಗೋಲ್ಡ್‌ ವಿಂಗ್‌ನಲ್ಲಿ ಎಂಜಿನ್‌ನ ಗುಣಮಟ್ಟವನ್ನು ಇನ್ನಷ್ಟು ಉತ್ತಮಗೊಳಿಸಲಾಗಿದೆ. 1833 ಸಿಸಿ, 125 ಬಿಎಚ್‌ಪಿ ಮತ್ತು 170ಎನ್‌ಎಂ ಟಾರ್ಕ್‌ ಸಾಮರ್ಥ್ಯದ 6 ಸಿಲಿಂಡರ್‌ ಎಂಜಿನ್‌ ಬಳಸಿಕೊಳ್ಳಲಾಗಿದ್ದು, ಯಾವುದೇ ಪ್ರಕಾರದ ರಸ್ತೆಯಲ್ಲೂ ಸಲೀಸಾಗಿ ಮುನ್ನುಗ್ಗುವ ಶಕ್ತಿ ಹೊಂದಿದೆ. ಹೈಡ್ರೋಲಿಕ್‌ ಕ್ಲಚ್‌ ವ್ಯವಸ್ಥೆಯೊಂದಿಗೆ 7ಸ್ಪೀಡ್‌ ಗೇರ್‌ಬಾಕ್ಸ್‌ ನೀಡಲಾಗಿದೆ.

ಸುರಕ್ಷತೆಯೂ ಅತ್ಯುತ್ತಮ
ಅಂದಹಾಗೆ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಮಾದರಿಯ ಅತ್ಯಾಧುನಿಕ ತಂತ್ರಜ್ಞಾನಗಳನ್ನೂ ಬಳಸಿಕೊಳ್ಳಲಾಗಿದೆ. ಎಬಿಎಸ್‌ ವ್ಯವಸ್ಥೆಯ 3ಪಿಸ್ಟನ್‌ ಕ್ಯಾಲಿಪರ್‌ ಹೈಡ್ರೋಲಿಕ್‌ ಡಿಸ್ಕ್ ಬ್ರೇಕ್‌ ಅನ್ನು ಮುಂಭಾಗದಲ್ಲಿಯೂ, ಎಬಿಎಸ್‌ ವ್ಯವಸ್ಥೆಯ 3ಪಿಸ್ಟನ್‌ ಕ್ಯಾಲಿಪರ್‌ ವೆಂಟಿಲೇಟೆಡ್‌ ಡಿಸ್ಕ್ ಬ್ರೇಕ್‌ ಅನ್ನು ಹಿಂಭಾಗದಲ್ಲಿ ಬಳಸಿಕೊಳ್ಳಲಾಗಿದೆ.

ವೇರಿಯಂಟ್‌
ಎಸ್‌ಟಿಡಿ ಮತ್ತು ಟೂರ್‌ ಹೆಸರಿನ ಎರಡು ವೇರಿಯಂಟ್‌ಗಳಲ್ಲಿ ಲಭ್ಯವಿದ್ದು, ಟೂರ್‌ ಹೆಸರಿನ ವೇರಿಯಂಟ್‌ನ ಎಕ್ಸ್‌ ಶೋ ರೂಂ ಬೆಲೆ 30 ಲಕ್ಷ ರೂ. ಆಗಲಿದೆ.

ಎಕ್ಸ್‌ ಶೋರೂಂ ಬೆಲೆ 28.45 ಲಕ್ಷ ರೂ. ನಿಂದ

– ಕರ್ಬ್ ಭಾರ 364 ಕಿಲೋಗ್ರಾಂ
– ಉದ್ದ 2475 ಮಿ.ಮೀ/905ಮಿ.ಮೀ ಅಗಲ/1340ಮಿ.ಮೀ ಎತ್ತರ
– 130ಮಿ.ಮೀ. ಗ್ರೌಂಡ್‌ ಕ್ಲಿಯರೆನ್ಸ್‌
– ವೀಲ್‌ ಅಳತೆ 18 ಇಂಚು
– ಇಂಧನ ಶೇಖರಣಾ ಸಾಮರ್ಥ್ಯ 21.1 ಲೀಟರ್‌

– ಗಣಪತಿ ಅಗ್ನಿಹೋತ್ರಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.