ಬೆಳಗಾವಿ ಪಾಲಿಕೆಗೆ ಕನ್ನಡಿಗ ಮೇಯರ್
Team Udayavani, Mar 2, 2018, 6:00 AM IST
ಬೆಳಗಾವಿ: ಮರಾಠಿ ಭಾಷಿಕ ಸದಸ್ಯರ ಬಹುಮತವಿದ್ದರೂ ಮೀಸಲು ಭಾಗ್ಯ ಒಲಿದು ಬಂದಿದ್ದರಿಂದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡಿಗರಾದ ಬಸಪ್ಪ ಸಿದ್ದಪ್ಪ ಚಿಕ್ಕಲದಿನ್ನಿ ಮೇಯರ್ ಆಗಿ ಅವಿರೋಧ ಆಯ್ಕೆಯಾಗಿದ್ದಾರೆ. ಮರಾಠಿ ಭಾಷಿಕ ಸದಸ್ಯೆಯಾಗಿದ್ದರೂ ಮೂಲತಃ ಕನ್ನಡದವರಾದ ಮಧುಶ್ರೀ ಅಪ್ಪಾಸಾಹೇಬ ಪೂಜಾರಿ 8 ಮತಗಳ ಅಂತರದಿಂದ ಉಪಮೇಯರ್
ಆಗಿ ಆಯ್ಕೆಯಾದರು. ಪಾಲಿಕೆ ಸಭಾಂಗಣದಲ್ಲಿ ಗುರುವಾರ ನಡೆದ 20ನೇ ಅವಧಿಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಪ್ರಾದೇಶಿಕ ಆಯುಕ್ತ ಪಿ.ಎ. ಮೇಘನ್ನವರ ಈ ಇಬ್ಬರ ಹೆಸರನ್ನು ಘೋಷಿಸಿದರು. ಮೇಯರ್ ಸ್ಥಾನ ಎಸ್ಟಿ ಮೀಸಲು ಹಾಗೂ ಉಪಮೇಯರ್ ಸ್ಥಾನಕ್ಕೆ ಪ್ರವರ್ಗ ಆ ಮಹಿಳೆಗೆ ನಿಗದಿ ಪಡಿಸಲಾಗಿತ್ತು. ಎಸ್ಟಿ ಮೀಸಲು ಕನ್ನಡ ಸದಸ್ಯರಲ್ಲಿ ಬಸಪ್ಪ ಚಿಕ್ಕಲದಿನ್ನಿ ಹಾಗೂ ಸುಚೇತಾ ಗಂಡಗುದರಿ ಇದ್ದರು.
ಚಿಕ್ಕಲದಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಯಿತು. ಉಪಮೇಯರ್ ಸ್ಥಾನಕ್ಕೆ ಐವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಇಬ್ಬರು ಮರಾಠಿ ಭಾಷಿಕ ಸದಸ್ಯರು ಹಿಂಪಡೆದರು. ನಂತರ ಕನ್ನಡದ ಶಾಂತಾ ಉಪ್ಪಾರ ಹಾಗೂ ಮರಾಠಿಯ ಮಧುಶ್ರೀ ಪೂಜಾರಿ ಮಾತ್ರ ಕಣದಲ್ಲಿ ಉಳಿದರು. ಹೀಗಾಗಿ ಮತದಾನ ನಡೆದು ಶಾಂತಾ 23 ಮತ ಪಡೆದರೆ, ಮಧುಶ್ರೀ 31 ಮತ ಪಡೆಯುವ ಮೂಲಕ ಗೆಲುವು ಸಾಧಿಸಿದರು. ಮತ ಚಲಾಯಿಸಬೇಕಾದ ಸಂಸದರಾದ ಸುರೇಶ ಅಂಗಡಿ, ಪ್ರಕಾಶ ಹುಕ್ಕೇರಿ, ಶಾಸಕರಾದ ಸತೀಶ ಜಾರಕಿಹೊಳಿ, ಫಿರೋಜ ಸೇಠ ಹಾಗೂ ಸಂಜಯ ಪಾಟೀಲ ಗೈರು ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.