ಹಳಿ ಏರಿದ 8 ಉಪನಗರ ರೈಲು


Team Udayavani, Mar 13, 2018, 12:00 PM IST

hali-arida.jpg

ಬೆಂಗಳೂರು: ನಾಲ್ಕು ದಿನಗಳ ಹಿಂದಷ್ಟೇ ರೈಲ್ವೆ ಸಚಿವರು ಘೋಷಿಸಿದ್ದ ಎಂಟು ಹೊಸ ಉಪನಗರ ರೈಲುಗಳ ಸೇವೆ ಸೋಮವಾರದಿಂದ ಆರಂಭಗೊಂಡಿದೆ. ವಾರದಲ್ಲಿ ಆರು ದಿನ (ಭಾನುವಾರ ಹೊರತುಪಡಿಸಿ) ಸಂಚರಿಸಲಿರುವ ಈ ಹೊಸ ರೈಲುಗಳ ಪೈಕಿ ತಲಾ ನಾಲ್ಕು ಮೆಮು ಮತ್ತು ಡೆಮು ಸೇವೆಗಳಾಗಿವೆ. ಈ ಸಂಬಂಧದ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ.

ನಿತ್ಯ ಪ್ರತಿ ರೈಲಿನಲ್ಲಿ 2 ಸಾವಿರ ಪ್ರಯಾಣಿಕರಂತೆ ಅಂದಾಜು 16 ಸಾವಿರ ಮಂದಿ ಸಂಚರಿಸಬಹುದು ಎಂದು ನಿರೀಕ್ಷಿಸಲಾಗಿದೆ. ಮೊದಲ ದಿನವೇ 12 ಸಾವಿರ ಮಂದಿ ಪ್ರಯಾಣಿಸಿದ್ದಾರೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣ-ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್‌ ಮಾರ್ಗದಲ್ಲಿ ಮೆಮು ಮತ್ತು ಬಾಣಸವಾಡಿ-ಬೈಯಪ್ಪನಹಳ್ಳಿ-ಹೊಸೂರು ಮಾರ್ಗವಾಗಿ ಡೆಮು ರೈಲುಗಳು ಸಂಚರಿಸುತ್ತಿವೆ. ಪ್ರತಿ ರೈಲು ಆರು ಬೋಗಿಗಳನ್ನು ಒಳಗೊಂಡಿದ್ದು, 600 ಆಸನಗಳು ಮತ್ತು 1,800 ನಿಲುಗಡೆ (ಸ್ಟಾಂಡಿಂಗ್‌) ಸೇರಿದಂತೆ 2,400 ಜನರನ್ನು ಕೊಂಡೊಯ್ಯುವ ಸಾಮರ್ಥ್ಯ ಹೊಂದಿವೆ.

ಸೋಮವಾರ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್‌ ನಡುವೆ ಅತಿ ಕಡಿಮೆ 1,200 ಹಾಗೂ ಸಿಟಿ ರೈಲು ನಿಲ್ದಾಣ-ಬೈಯಪ್ಪನಹಳ್ಳಿ ನಡುವೆ ಅತಿ ಹೆಚ್ಚು 2 ಸಾವಿರಕ್ಕೂ ಅಧಿಕ ಜನ ಪ್ರಯಾಣಿಸಿದ್ದಾರೆ ಎಂದೂ ಅವರು ಹೇಳಿದರು. 

ಬೈಯಪ್ಪನಹಳ್ಳಿಯಲ್ಲಿ ರೈಲು ನಿಲ್ದಾಣ ಹಾಗೂ ಮೆಟ್ರೋ ನಿಲ್ದಾಣಗಳು ಅಕ್ಕಪಕ್ಕದಲ್ಲಿವೆ. ಮೆಟ್ರೊ ಹಾಗೂ ಸಬ್‌ಅರ್ಬನ್‌ ರೈಲುಗಳನ್ನು ಬಳಸಿಕೊಂಡು ಪ್ರಯಾಣವನ್ನು ಯೋಜಿಸಲು ಈ ಹೊಸ ಸೇವೆಯಿಂದ ಅನುಕೂಲವಾಗಲಿದೆ. ಪ್ರಸ್ತುತ 108 ಉಪನಗರ ರೈಲುಗಳು ಸೇವೆಯಲ್ಲಿದ್ದು, ಹೊಸ ಎಂಟು ರೈಲುಗಳ ಸೇರ್ಪಡೆಯಿಂದ ಈ ಸಂಖ್ಯೆ 116ಕ್ಕೆ ಏರಿದೆ.

ರೈಲುಗಳ ವೇಳಾಪಟ್ಟಿ
ಮೆಮು ರೈಲುಗಳು
ಎಲ್ಲಿಂದ    ಎಲ್ಲಿಗೆ    ನಿರ್ಗಮನ    ಆಗಮನ 
ಬೈಯಪ್ಪನಹಳ್ಳಿ    ವೈಟ್‌ಫೀಲ್ಡ್‌ (06568) ಸಂಜೆ 4.45    ಸಂಜೆ 17.05
ವೈಟ್‌ಫೀಲ್ಡ್‌    ಬೈಯಪ್ಪನಹಳ್ಳಿ (06567)    09.00    09.20
ಬೈಯಪ್ಪನಹಳ್ಳಿ    ಕೆಎಸ್‌ಆರ್‌ (06569)    6.45    7.15
ಕೆಎಸ್‌ಆರ್‌    ಬೈಯಪ್ಪನಹಳ್ಳಿ (06570) 07.50    08.15

ಡೆಮು ರೈಲುಗಳು
ಎಲ್ಲಿಂದ    ಎಲ್ಲಿಗೆ    ನಿರ್ಗಮನ    ಆಗಮನ 
ಬಾಣಸವಾಡಿ    ಹೊಸೂರು (06571)    09.50    11.00
ಹೊಸೂರು    ಬಾಣಸವಾಡಿ (06572)    11.15    12.25
ಬಾಣಸವಾಡಿ    ಹೊಸೂರು (06573)    12.40    1.45
ಹೊಸೂರು    ಬಾಣಸವಾಡಿ (06574)    3.20    4.40

2006ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಮೆಮು ರೈಲುಗಳ ಸಂಚಾರ ಆರಂಭಿಸಿತ್ತು. ರಾಜ್ಯ ಸರ್ಕಾರ ಹಾಗೂ ರೈಲ್ವೆ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ಉಪನಗರ ರೈಲು ಯೊಜನೆ ಜಾರಿಯಾಗುತ್ತಿದೆ.

ಟಾಪ್ ನ್ಯೂಸ್

kejriwal 2

PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

kejriwal 2

PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

1–a-sruti

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.