ಅವ್ಯವಹಾರ ತನಿಖೆಗೆ ಸಮಿತಿ ರಚಿಸಲು ನಿರ್ಧಾರ


Team Udayavani, Mar 13, 2018, 6:03 PM IST

12.jpg

ಚಿಕ್ಕಮಗಳೂರು: ಉದ್ಯೋಗ ಖಾತ್ರಿ ಯೋಜನೆಯ ಜಾಬ್‌ ಕಾರ್ಡ್‌ಗಳ ಮುದ್ರಣ ಟೆಂಡರ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆಗೆ ಸಮಿತಿಯೊಂದನ್ನು ರಚಿಸಲು ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ವಿಚಾರ ಪ್ರಸ್ತಾಪಿಸಿದ ಸದಸ್ಯ ಶರತ್‌ ಕೃಷ್ಣಮೂರ್ತಿ, ಉದ್ಯೋಗ ಖಾತ್ರಿ ಯೋಜನೆಯ ಜಾಬ್‌ ಕಾರ್ಡ್‌ಗಳನ್ನು ಮುದ್ರಿಸಲು ಫೆ.17 ರಂದು ಟೆಂಡರ್‌ ಕರೆಯಲಾಗಿದೆ. ಟೆಂಡರ್‌ ತೆರೆಯಲು ಮಾ.3 ಕೊನೆಯ ದಿನವಾಗಿತ್ತು. ಈ ಅವಧಿ ಮುಗಿಯುವ ಮೊದಲೆ ಚಿಕ್ಕಮಗಳೂರು ಹಾಗೂ ಕಡೂರು ತಾಲೂಕು ಪಂಚಾಯತ್‌ ಗಳಿಗೆ ಜಾಬ್‌ ಕಾರ್ಡ್‌ಗಳು ಬಂದಿವೆ. ಟೆಂಡರ್‌ ಅವಧಿ ಪೂರ್ಣಗೊಳ್ಳುವ ಮೊದಲೆ ಈ ಎರಡೂ ಕಚೇರಿಗಳಿಗೆ ಕಾರ್ಡ್‌ಗಳು ಬಂದದ್ದು ಹೇಗೆ? ಈ ಬಗ್ಗೆ ಎರಡೂ ತಾಲೂಕು ಪಂಚಾಯತ್‌ಗಳ ಕಾರ್ಯನಿರ್ವಹಣಾಧಿಕಾರಿಗಳನ್ನು ವಿಚಾರಿಸಿದರೆ ಕಾರ್ಡ್‌ಗಳು ಬಂದಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎನ್ನುತ್ತಾರೆ. ಈ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.

ಕಡೂರು ತಾಲೂಕು ಪಂಚಾಯತ್‌ಗೆ 20 ಸಾವಿರ ಹಾಗೂ ಚಿಕ್ಕಮಗಳೂರು ತಾಲೂಕು ಪಂಚಾಯತ್‌ಗೆ 16 ಸಾವಿರ ಜಾಬ್‌ ಕಾಡ್‌
ìಗಳು ಬಂದಿವೆ ಎಂದು ಕೆಲವು ಜಾಬ್‌ ಕಾಡ್‌ ìಗಳನ್ನು ಸಭೆಯಲ್ಲಿ ಪ್ರದರ್ಶಿಸಿದರಲ್ಲದೆ, ಈ ಜಾಬ್‌ ಕಾರ್ಡ್‌ಗಳು ಜನವರಿ ತಿಂಗಳಲ್ಲೆ
ಬಂದಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಸಿ.ಇ.ಒ. ಸಿ.ಸತ್ಯಭಾಮಾ, ಟೆಂಡರ್‌ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಬೆಂಗಳೂರಿನ ಮುದ್ರಣ ಸಂಸ್ಥೆಯೊಂದು ಒಂದು ಕಾರ್ಡಿಗೆ 4.32 ರೂ. ದರದಲ್ಲಿ ಟೆಂಡರ್‌ ಸಲ್ಲಿಸಿತ್ತು. ಈ  ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಈವರೆಗೂ ಟೆಂಡರ್‌ಗೆ ಅನುಮತಿ ನೀಡಿಲ್ಲ. ಜಾಬ್‌ ಕಾರ್ಡ್‌ಗಳಿಗೆ ತೀವ್ರ ಬೇಡಿಕೆ ಇದ್ದ ಹಿನ್ನೆಲೆಯಲ್ಲಿ ಸರ್ಕಾರಿ ಮುದ್ರಣಾಲಯದಲ್ಲಿ ವೆಚ್ಚವಾಗದೆ ಉಳಿದಿದ್ದ ಜಾಬ್‌ ಕಾರ್ಡ್‌ಗಳನ್ನು
ಕಳುಹಿಸಿಕೊಡುವಂತೆ ತಾವು ಮೌಖೀಕವಾಗಿ ಕೋರಿದ್ದ ಹಿನ್ನೆಲೆಯಲ್ಲಿ ಅಲ್ಲಿಂದ ಜಾಬ್‌ ಕಾಡ್‌ ìಗಳನ್ನು ಕಳುಹಿಸಿಕೊಡಲಾಗಿದೆ ಎಂದರು.

ಒಂದು ಸಣ್ಣ ಪತ್ರ ಬಂದರೂ ಅವುಗಳಿಗೆ ಇಲಾಖೆಗಳಲ್ಲಿ ದಾಖಲೆಗಳನ್ನು ಇಡಲಾಗುತ್ತದೆ. ಸಹಸ್ರಾರು ಕಾರ್ಡ್‌ಗಳು ಬಂದದ್ದಕ್ಕೆ ಯಾವುದೇ ದಾಖಲೆ ಇಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೆ ಎಲ್ಲ ಸದಸ್ಯರೂ ಸಹಮತ ವ್ಯಕ್ತಪಡಿಸಿದರು. ಮಹೇಶ್‌ ಒಡೆಯರ್‌ ಮಾತನಾಡಿ, ಜಿ.ಪಂ. ಸಿ.ಇ.ಒ. ಅವರು ಒಳ್ಳೆಯ ಅಧಿಕಾರಿ. ಆದರೆ ತಮ್ಮ ಕೈಕೆಳಗೆ ಕೆಲಸ ಮಾಡುವ ಎಲ್ಲರನ್ನೂ ನಂಬಬೇಡಿ. ಬೇರೆಯವರನ್ನು ಉಳಿಸುವ ಭರದಲ್ಲಿ ನೀವು ಸಿಲುಕಿಕೊಳ್ಳಬೇಡಿ. ಈ ಪ್ರಕರಣದ ತನಿಖೆ ನಡೆಸಲು ಸದಸ್ಯರು ಹಾಗೂ
ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸೋಣ ಎಂಬ ಸಲಹೆ ನೀಡಿದಾಗ, ಅದಕ್ಕೆ ಸರ್ವಾನುಮತದ ಒಪ್ಪಿಗೆ ದೊರೆಯಿತು.

ಸಿ.ಇ.ಒ. ವಿರುದ್ಧ ಅಸಮಾಧಾನ : ಇದೇ  ಸಂದರ್ಭದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕ ಮಾಡಿಕೊಳ್ಳುವ
ವಿಚಾರದಲ್ಲಿಯೂ ಕೆಲವೊಂದು ಸಂದೇಹಗಳಿವೆ ಎಂದು ಮಾಜಿ ಉಪಾಧ್ಯಕ್ಷ ರಾಮಸ್ವಾಮಿ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿ.ಇ.ಒ. ಸಿ.ಸತ್ಯಭಾಮಾ, ನೇಮಕಾತಿ ವಿಚಾರದಲ್ಲಿ ಎಲ್ಲವೂ ಪಾರದರ್ಶಕವಾಗಿ ನಡೆದಿದೆ. ಸದಸ್ಯರು ಬೇಸ್‌ಲೆಸ್‌ ಆಗಿ ಆರೋಪ
ಮಾಡಬಾರದು ಎಂದರು. ಬೇಸ್‌ಲೆಸ್‌ ಪದ ಬಳಕೆಗೆ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಯಾವುದೇ ಸದಸ್ಯರೂ ವಿನಾಕಾರಣ ಆರೋಪ ಮಾಡುವುದಿಲ್ಲ. ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ಬಗ್ಗೆ ಜಿ.ಪಂ. ಅಧ್ಯಕ್ಷರಿಗಾಗಲಿ, ಉಪಾಧ್ಯಕ್ಷರಿಗಾಗಲಿ
ಮಾಹಿತಿ ಇಲ್ಲವೆಂದರೆ ಹೇಗೆ. ಈ ರೀತಿ ನಡೆದಾಗ ಅನುಮಾನ ಮೂಡುವುದು ಸಹಜ. ಸಿ.ಇ.ಒ. ಅವರು ಯಾವುದೇ ಹೇಳಿಕೆ ನೀಡುವಾಗ ಪದ ಬಳಕೆಯ ಬಗ್ಗೆ ಎಚ್ಚರವಹಿಸಬೇಕೆಂದು ಹೇಳಿದರು. 

ಶಿಷ್ಟಾಚಾರ ಪಾಲನೆ ಇಲ್ಲ : ಸದಸ್ಯ ಶರತ್‌ ಕೃಷ್ಣಮೂರ್ತಿ ಮಾತನಾಡಿ, ಕಡೂರು ತಾಲೂಕಿನಲ್ಲಿ ಶುದ್ಧ ಗಂಗಾ ಘಟಕ ಕಾಮಗಾರಿಗೆ
ಶಂಕುಸ್ಥಾಪನೆ ನೆರವೇರಿಸಲಾಗಿದೆ. ಆದರೆ ಜಿ.ಪಂ. ಸದಸ್ಯರಾದ ತಮ್ಮ ಗಮನಕ್ಕೆ ತಂದಿಲ್ಲ ಎಂದು ದೂರಿದರು. ಪಂಚಾಯತ್‌
ರಾಜ್‌ ಇಲಾಖೆ ಎಇಇ ಮಾತನಾಡಿ, ಈ ಶಂಕುಸ್ಥಾಪನೆಯನ್ನು ಇಲಾಖೆ ವತಿಯಿಂದ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು. ಶರತ್‌
ಕೃಷ್ಣಮೂರ್ತಿ ಮಾತನಾಡಿ, ಕೇವಲ ಶಾಸಕರು ಹಾಗೂ ಜೆಡಿಎಸ್‌ ಕಾರ್ಯಕರ್ತರು ಹೋಗಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಈಗ ಇಲಾಖೆಯ ವತಿಯಿಂದ ಮತ್ತೂಮ್ಮೆ ಶಂಕುಸ್ಥಾಪನೆ ಮಾಡಿ ಎಂದು ಒತ್ತಾಯಿಸಿದರು. ಯಾವುದೇ ಇಲಾಖೆಗಳೂ
ಶಿಷ್ಟಾಚಾರ ಪಾಲಿಸುತ್ತಿಲ್ಲ ಎಂದು ಸದಸ್ಯರು ಆರೋಪಿಸಿದಾಗ, ಇದನ್ನು ಸಹಿಸಲು ಸಾಧ್ಯವಿಲ್ಲ. ಪ್ರತಿ ಸಭೆಯಲ್ಲೂ ಈ ಬಗ್ಗೆ ಚರ್ಚೆ
ನಡೆಯುತ್ತಿದೆ. ಮುಂದೆ ಈ ರೀತಿ ಆದಲ್ಲಿ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷೆ
ಚೈತ್ರಶ್ರೀ ಮಾಲತೇಶ್‌ ಎಚ್ಚರಿಸಿ ಪ್ರಕರಣಕ್ಕೆ ತೆರೆ ಎಳೆದರು.

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

ct-ravi

Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.