ತಮಿಳುನಾಡು:ಭಾರೀ ಪ್ರತಿಭಟನೆಯ ನಡುವೆಯೂ ರಾಮ ರಾಜ್ಯ ರಥ ಯಾತ್ರೆ
Team Udayavani, Mar 21, 2018, 10:55 AM IST
ಚೆನ್ನೈ: ಭಾರಿ ಪ್ರತಿಭಟನೆಯ ನಡುವೆಯೂ ವಿಶ್ವಹಿಂದು ಪರಿಷದ್ನ ‘ರಾಮ ರಾಜ್ಯ ರಥ ಯಾತ್ರೆ’ ತಮಿಳುನಾಡಿನಲ್ಲಿ ಸಾಗುತ್ತಿದ್ದು ಬುಧವಾರ ಮಧುರೈ ತಲುಪಿದೆ.
ಮಂಗಳವಾರ ತಿರುನಲ್ವೇಲಿಯಲ್ಲಿ ಪ್ರತಿಭಟನೆಗೆ ಮುಂದಾಗದ ಹಲವು ಸಂಘಟನೆಗಳು ಮತ್ತು ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿತ್ತು.
ರಥ ಯಾತ್ರೆಗೆ ಅವಕಾಶ ನೀಡಿದುಕ್ಕಾಗಿ ವಿಪಕ್ಷ ಡಿಎಂಕೆ ಆಡಳಿತೂರೂಢ ಎಐಡಿಎಂಕೆ ವಿರುದ್ಧ ಕಿಡಿ ಕಾರಿದೆ. ವಿಪಕ್ಷ ನಾಯಕ ಸ್ಟಾಲಿನ್ ‘ಯಾತ್ರೆಯಿಂದ ರಾಜ್ಯದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗಲಿದೆ, ಕಾನೂನು ಮತ್ತು ಸುವ್ಯವಸ್ಥೆ ಹಾಳಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಎಐಎಡಿಎಂಕೆ ಸರ್ಕಾರ ಇದೆಯೋ ಬಿಜೆಪಿ ಸರ್ಕಾರ ಇದೆಯೊ ತಿಳಿಯುತ್ತಿಲ್ಲ’ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಫೆಬ್ರವರಿಯಲ್ಲಿ ಅಯೋಧ್ಯೆಯಿಂದ ಹೊರಟಿರುವ 39 ದಿನಗಳ ರಾಮ ರಾಜ್ಯ ರಥ ಯಾತ್ರೆ ಮಾರ್ಚ್ 25ರಂದು ರಾಮೇಶ್ವರದಲ್ಲಿ ಸಮಾಪ್ತಿಯಾಗಲಿದೆ. ಯಾತ್ರೆ ತೆರಳುವ ಮಾರ್ಗದುದ್ದಕ್ಕೂ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.