ಮಾತಿನ ಮತ, ಸಂದರ್ಶನ


Team Udayavani, Mar 28, 2018, 3:18 PM IST

28-March-10.jpg

ಅವಕಾಶ ನೀಡಿದರೆ ಪುತ್ತೂರು ಬಿಜೆಪಿಯಿಂದ ಸ್ಪರ್ಧೆ

ದಿನೇಶ್‌ ಬಿ.ಎನ್‌. ಹುಟ್ಟು ಬಿಜೆಪಿಗ. ಆದರೆ 2013ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ. ಬಿಜೆಪಿ ನಾಯಕರ ತಾಕಲಾಟದಿಂದ ಬೇಸತ್ತು ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ 7,856 ಮತ ಪಡೆದರು. ಈ ಮತ ಬಿಜೆಪಿ ಹಾಗೂ ಕಾಂಗ್ರೆಸ್‌ ಪಾಲಿಗೆ ನಿರ್ಣಾಯಕವೂ ಆಯಿತು. ಪರಿಣಾಮ ಚುನಾವಣೆ ಮುಗಿದ ತತ್‌ಕ್ಷಣ ಬಿಜೆಪಿ ಮುಖಂಡರು ದಿನೇಶ್‌ ಬಳಿ ಬಂದು ಮಾತುಕತೆ ನಡೆಸಿ, ಪಕ್ಷದೊಳಗೆ ಸೇರಿಸಿಕೊಂಡರು. ಇದೀಗ ದಿನೇಶ್‌ ಅವರು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ.

ಈ ಬಾರಿಯ ಚುನಾವಣೆಯಲ್ಲಿ ನೀವು ಆಕಾಂಕ್ಷಿಯೇ?
ಖಂಡಿತಾ ಹೌದು. ಆದರೆ ಲಾಬಿ ಮಾಡುವುದಿಲ್ಲ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅವಕಾಶ ನೀಡಿದರೆ ಮಾತ್ರ ಬಿಜೆಪಿಯಿಂದ ಸ್ಪರ್ಧೆಗೆ ಇಳಿಯುತ್ತೇನೆ. ನನ್ನ ರಕ್ತದಲ್ಲೇ ಹಿಂದುತ್ವ ಇದೆ. ಬಿಜೆಪಿ ಪಕ್ಷದಲ್ಲೇ ಬೆಳೆದವನು.

ಹಿಂದಿನ ಸಲ ಜೆಡಿಎಸ್‌ನಿಂದ ಸ್ಪರ್ಧಿಸಿದ್ದು ಯಾಕೆ?
ಬಿಜೆಪಿ ನಾಯಕರು ಅವಗಣಿಸಿದ ಕಾರಣ, ಜೆಡಿಎಸ್‌ ಸೇರಬೇಕಾಯಿತು. ಕಾರ್ಯಕರ್ತರ ನೋವನ್ನು ಅವರಿಗೆ ತಿಳಿಸುವ ಕೆಲಸ ಮಾಡಬೇಕಾಗಿತ್ತು. ಅದರಲ್ಲಿ ಯಶಸ್ವಿಯೂ ಆಗಿದ್ದೇನೆ. ಜೆಡಿಎಸ್‌ನಿಂದ ಸ್ಪರ್ಧಿಸಿ 7,856 ಮತ ಪಡೆದಿದ್ದೇನೆ. ಇದು ದಿನೇಶ್‌ಗೆ ಸಿಕ್ಕಿದ ಮತ. ಹಾಗೆಂದು ಜೆಡಿಎಸ್‌ ನಿಂದ ನನಗೆ ಯಾವುದೇ ಆಮಿಷ ಇರಲಿಲ್ಲ.

ಸ್ಪರ್ಧೆಗೆ ಪುತ್ತೂರೇ ಬೇಕು ಎಂಬ ಬೇಡಿಕೆ ಏಕೆ?
ಮೊದಲನೆಯದಾಗಿ ಪುತ್ತೂರಿನ ಎಲ್ಲ ಸ್ಥಳಗಳ ಪರಿಚಯ ನನಗಿದೆ. ಎರಡನೆಯದಾಗಿ ಪುತ್ತೂರಿನಲ್ಲಿ ಗೌಡ ಸಮುದಾಯದ ಮತ ಹೆಚ್ಚಿರುವುದು. ಹಾಗೆಂದು ನಾನು ಮೂಲತಃ ಸುಳ್ಯದವನು. ಪುತ್ತೂರು ಬಿಟ್ಟು ಇತರ ಕಡೆಗಳಲ್ಲಿ
ಆಸಕ್ತಿ ಇಲ್ಲ. ವರಿಷ್ಠರು ನೀಡಿದರೆ ಮಾತ್ರ ಸ್ಪರ್ಧೆ. ಇಲ್ಲದಿದ್ದರೆ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತೇನೆ.

ಬಿಜೆಪಿ ಸೇರಿದ ಬಳಿಕ ನಿಮ್ಮ ಸಾಧನೆ?
ಹಿಂದಿನ ಹತ್ತು ವರ್ಷ ಸುಬ್ರಹ್ಮಣ್ಯ ಗ್ರಾ.ಪಂ. ಕಾಂಗ್ರೆಸ್‌ ಆಡಳಿತದಲ್ಲಿತ್ತು. ಇದೀಗ 18 ಸ್ಥಾನಗಳ ಪೈಕಿ 12 ಬಿಜೆಪಿ ಸದಸ್ಯರು. ಶಕ್ತಿಮೀರಿ ಪ್ರಯತ್ನ ಮಾಡಿದ್ದೇನೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ಉತ್ತಮ ಕೆಲಸ ಮಾಡಿದ್ದೇನೆ. ಸರಕಾರದ ಅನುದಾನಕ್ಕೆ ಮಾತ್ರ ಕಾಯದೇ ಸ್ವಂತ ಹಣವನ್ನು ಹಾಕಿಯೂ ಕೆಲಸ ಮಾಡಿದ್ದೇನೆ. ಮಾಡಿದ ಕೆಲಸದಲ್ಲಿ ತೃಪ್ತಿ ಇದೆ.

ಬಿಜೆಪಿ ಅಲೆ ಹೇಗಿದೆ?
ಈ ಬಾರಿ ಶೇ. 100ರಷ್ಟು ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತದೆ. ತಪ್ಪಿದರೆ ಮುಂದೆ ಯಾವತ್ತೂ ಅಧಿಕಾರ ಕನಸಿನ ಗಂಟು. ಹಿಂದೂ ವಿರೋಧಿ ನೀತಿ, ಅಲ್ಪಸಂಖ್ಯಾಕ ಮತಗಳ ಓಲೈಕೆ ಇತ್ಯಾದಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ.

 ಗಣೇಶ್‌ ಎನ್‌. ಕಲ್ಲರ್ಪೆ 

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.