![Transfer of 23 IAS officers including five District Collectors](https://www.udayavani.com/wp-content/uploads/2024/07/IAS-officer-415x229.jpg)
ಪ್ರಕಾಶ್ ರೈ, ರಾಕ್ಲೈನ್ ಸೆಳೆಯಲು ಕಾಂಗ್ರೆಸ್ ಯತ್ನ
Team Udayavani, Mar 30, 2018, 11:37 AM IST
![sumil-1.jpg](https://www.udayavani.com/wp-content/uploads/2018/03/30/sumil-1.jpg)
ಬೆಂಗಳೂರು: ದಕ್ಷಿಣ ಭಾರತ ಪ್ರಸಿದ್ಧ ನಟ ಪ್ರಕಾಶ್ ರೈ ಹಾಗೂ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರನ್ನು ಕಾಂಗ್ರೆಸ್ಗೆ ಸೆಳೆಯುವ ಪ್ರಯತ್ನ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಪ್ರಕಾಶ್ ರೈ ಅವರನ್ನು ಪಕ್ಷಕ್ಕೆ ಕರೆತರಲು ಮಾತುಕತೆ ನಡೆಸುವಂತೆ ಮಾಜಿ ಸಂಸದೆ ರಮ್ಯಾಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿದು ಬಂದಿದೆ.
ಒಂದು ವೇಳೆ ಅವರು ಕಾಂಗ್ರೆಸ್ ಸೇರಲು ನಿರಾಕರಿಸಿದರೆ ಸ್ಟಾರ್ ಪ್ರಚಾರಕರಾಗಲು ಒಪ್ಪಿಸುವಂತೆ ಸೂಚಿಸಲಾಗಿದೆ. ರೈ ಕಾಂಗ್ರೆಸ್ ಸೇರ್ಪಡೆಯಾದರೆ ಅವರನ್ನು ಬಿಜೆಪಿ ಪ್ರಬಲವಾಗಿರುವ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.
ಚಿತ್ರ ನಿರ್ಮಾಪಕ ರಾಕಲೈನ್ ವೆಂಕಟೇಶ್ ಅವರನ್ನೂ ಕಾಂಗ್ರೆಸ್ಗೆ ಕರೆತರುವ ಜವಾಬ್ದಾರಿಯನ್ನು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
45 ಜನ ಸ್ಟಾರ್ ಕ್ಯಾಂಪೇನರ್: ಈ ಮಧ್ಯೆ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ದರ್ಶನ್, ಸುದೀಪ್, ಅಂಬರೀಶ್, ಮಾಲಾಶ್ರೀ, ಸಾಧುಕೋಕಿಲ, ಶಶಿಕುಮಾರ್, ಭಾವನಾ, ಭವ್ಯಾ, ಜಯಮಾಲಾ, ಮುಖ್ಯಮಂತ್ರಿ ಚಂದ್ರು ಸೇರಿದಂತೆ ಚಿತ್ರರಂಗದ ಅನೇಕ ನಟ ನಟಿಯರನ್ನು ಸ್ಟಾರ್ ಪ್ರಚಾರಕರಾಗಿ ಬಳಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ತೆಲುಗಿನ ಮೆಗಾಸ್ಟಾರ್ ಚಿರಂಜೀವಿ, ಬಾಲಿವುಡ್ ನಟಿ ನಗ್ಮಾ, ಖುಷೂº ಸೇರಿದಂತೆ ಕಾಂಗ್ರೆಸ್ ಪರವಾಗಿರುವ ತೆಲುಗು, ತಮಿಳು ನಟರನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್ ಯೋಜನೆ ರೂಪಿಸಿದೆ.
ಟಾಪ್ ನ್ಯೂಸ್
![Transfer of 23 IAS officers including five District Collectors](https://www.udayavani.com/wp-content/uploads/2024/07/IAS-officer-415x229.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.