ರಾಜ್ಯದಲ್ಲೂ ಗೋಹತ್ಯೆ ನಿಷೇಧ


Team Udayavani, Mar 30, 2018, 11:37 AM IST

ananth.jpg

ಬೆಂಗಳೂರು: ಉತ್ತರ ಪ್ರದೇಶದ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಗೋಹತ್ಯೆ ನಿಷೇಧ ಜಾರಿಗೊಳಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ತಿಳಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಜೈನ್‌ ಯುವ ಸಂಘಟನೆ ಹಮ್ಮಿಕೊಂಡಿದ್ದ ಭಗವಾನ ಮಹಾವೀರ ಜನ್ಮ ಕಲ್ಯಾನ ಮಹೋತ್ಸವದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯೋಗಿ ಆದ್ಯತ್ಯನಾಥ ಅವರು ಉತ್ತರ ಪ್ರದೇಶದಲ್ಲಿ ಸಮಾಜದ ಸ್ವಾಸ್ಥ್ಯ ಹಾಳುಮಾಡುವ ದುಶ್ಚಟಗಳು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದಾರೆ. ಗೋಹತ್ಯೆಯನ್ನೂ ನಿಷೇಧಿಸಿದ್ದಾರೆ. ರಾಜ್ಯದಲ್ಲಿ ಕೂಡ ಇದೇ ಮಾದರಿಯ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಈ ಮೂಲಕ ಸಂತರು, ಮುನಿಗಳ ಆಶಯದಂತೆ ಅಹಿಂಸಾ ತತ್ವ ಪಾಲಿಸಲಾಗುವುದು ಎಂದು ಹೇಳಿದರು. 

ಮತದಾರರಿಗೆ ಅದರಲ್ಲೂ ಜಗತ್ತಿಗೆ ಅಹಿಂಸೆಯ ತತ್ವ ಸಾರಿದ ಜೈನ ಸಮುದಾಯವು ಮಹಾವೀರರ ಆಶಯದಂತೆ ಆಡಳಿತ ನಡೆಸುವ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅಪ್ಪಟ ಶಾಖಾಹಾರಿ. ಅಷ್ಟೇ ಅಲ್ಲ, ಅತ್ಯಂತ ಕಠಿಣ ಉಪವಾಸ-ವ್ರತಗಳನ್ನೂ ಕೂಡ ಅನುಸರಿಸುತ್ತಾರೆ. ಇದು ಅವರ ವಿದೇಶಿ ಪ್ರವಾಸ ಸಂದರ್ಭದಲ್ಲೂ ಜಾರಿಯಲ್ಲಿರುತ್ತದೆ. ಇದು ಪ್ರಧಾನಿ ಅವರ ಬದ್ಧತೆ ಎಂದು ತಿಳಿಸಿದರು. 

ಸಾಮಾನ್ಯವಾಗಿ ರಾಜಕಾರಣಿಗಳು ಗಾಳಿ ಬೀಸಿದ ಕಡೆ ಹೋಗುತ್ತಾರೆ. ಸಂದರ್ಭಕ್ಕೆ ಅನುಗುಣವಾಗಿ ಮಠ-ಮಂದಿರ, ಮಸೀದಿ-ಚರ್ಚ್‌ಗಳು ನೆನಪಾಗುತ್ತವೆ. ಆದರೆ, ನಾನು ಪ್ರತಿ ವರ್ಷ ಮಹಾವೀರರ ಜನ್ಮ ಕಲ್ಯಾಣ ಮಹೋತ್ಸವಕ್ಕೆ ಬರುತ್ತೇನೆ. ನನ್ನ ಉಸಿರು ಇರುವವರೆಗೂ ಇದನ್ನು ಪಾಲಿಸುತ್ತೇನೆ ಎಂದರು. 

ಇದಕ್ಕೂ ಮುನ್ನ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಮಾತನಾಡಿ, ಕೇವಲ ಒಂದು ಪಕ್ಷ ಅಥವಾ ವ್ಯಕ್ತಿಯಿಂದ ಇಡೀ ದೇಶ ಅಭಿವೃದ್ಧಿ ಹೊಂದುವುದಿಲ್ಲ. ಅದಕ್ಕೆ ಪ್ರತಿಯೊಬ್ಬರ ಕೊಡುಗೆಯೂ ಮುಖ್ಯವಾಗಿದೆ. ಹಾಗಾಗಿ, ಜೈನ ಸಮುದಾಯ ಯಾವೊಂದು ಪಕ್ಷಕ್ಕೆ ಸೀಮಿತವಾಗಬಾರದು. ಎಲ್ಲ ರಾಜಕೀಯ ಪಕ್ಷಗಳೊಂದಿಗೂ ಇರಬೇಕು ಎಂದು ಹೇಳಿದರು. 

“ಅಹಿಂಸಾ ಸರ್ಕಾರ ಬರಲಿ’: ಈ ವೇಳೆ ಮಾತನಾಡಿದ ಆಚಾರ್ಯ ಚಂದ್ರಯಶಸೂರಿಶ್ವರಜಿ ಮಹಾರಾಜ್‌ ಮಾತನಾಡಿ, ಇಂತಹದ್ದೇ ಪಕ್ಷ ಅಧಿಕಾರಕ್ಕೆ ಬರಲಿ ಎಂಬ ಬೇಡಿಕೆ ನಮ್ಮದಲ್ಲ; ಅಹಿಂಸೆಯನ್ನು ಪ್ರತಿಪಾದಿಸುವ ಸರ್ಕಾರ ರಚನೆ ಆಗಬೇಕು ಎಂಬುದು ಸಮುದಾಯದ ಆಕಾಂಕ್ಷೆ ಎಂದು ತಿಳಿಸಿದರು. 

ಮುಕ್ತಿಸಾಗರ್‌ ಸೂರಿಜಿ ಮಹಾರಾಜ್‌, ಆದಿತ್ಯಸಾಗರಜಿ ಮಹಾರಾಜ್‌, ಶಾಸನಶ್ರೀ ಕಮಚನ್‌ ಪ್ರಭಾಜಿ, ಸಮಣಿ ಪ್ರಮುಖಾ ಶ್ರೀನಿಧಿಜಿ, ಜೈನ ಯುವ ಸಂಘಟನೆ ಸೇವಾ ಟ್ರಸ್ಟ್‌ ಅಧ್ಯಕ್ಷ ಬಿಕಂಚಂದ್‌ ಮುಣೋತ್‌, ಪಾಲಿಕೆ ಸದಸ್ಯರಾದ ಲತಾ ನವೀನ್‌ ತೇಜಸ್ವಿ, ಲೀಲಾ ಶಿವಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.