ಪಕ್ಷ, ಜಾತಿಗೆ ಮಣಿಯದೆ ಸಂಹಿತೆ ಜಾರಿ


Team Udayavani, Mar 30, 2018, 11:38 AM IST

paksha-jaati.jpg

ಬೆಂಗಳೂರು: ನಗರ ಜಿಲ್ಲೆ ವ್ಯಾಪ್ತಿಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಪಕ್ಷ, ವ್ಯಕ್ತಿ, ಜಾತಿ, ಧರ್ಮದ ಮುಲಾಜಿಗೆ ಒಳಗಾಗದೆ ನೀತಿ ಸಂಹಿತೆ ಅನುಷ್ಠಾನಕ್ಕೆ ತರುವಂತೆ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ. 

ಗುರುವಾರ ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್‌ ರೂಮ್‌ ಹಾಗೂ ಸಹಾಯವಾಣಿ ಕೇಂದ್ರಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳ ಪೈಕಿ ನಗರ ಜಿಲ್ಲಾಧಿಕಾರಿ ವ್ಯಾಪ್ತಿಗೆ ಬರುವ ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ, ಮಹದೇವಪುರ, ಆನೇಕಲ್‌ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ರಾಜಕೀಯ ಪಕ್ಷಗಳ ಕಚೇರಿಗಳ ಎದುರು ಅಳವಡಿಸಲಾಗಿದ್ದ ಜಾಹಿರಾತು ಫ‌ಲಕಗಳು ಸೇರಿದಂತೆ ಏಳು ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಶೇ.99ರಷ್ಟು ಜಾಹಿರಾತು ಫ‌ಲಕಗಳನ್ನು ತೆರವುಗೊಳಿಸಲಾಗಿದೆ. ಕೆಲವೊಂದು ಬಾಕಿ ಉಳಿದಿದ್ದರೆ ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ. ನೀತಿ ಸಂಹಿತೆ ಜಾರಿಯ ಉಸ್ತುವಾರಿ ನೋಡಿಕೊಳ್ಳಲು ಪ್ರತಿ 20 ಮತಗಟ್ಟೆಗೆ ಒಬ್ಬರನ್ನು ಸೆಕ್ಟರ್‌ ಆಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. 6 ಸಂಚಾರಿ ವಿಚಕ್ಷಣ ದಳಗಳನ್ನು ರಚಿಸಲಾಗಿದೆ.

ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ರಾಜಕೀಯ ಪಕ್ಷಗಳ ಸಭೆ, ಸಮಾರಂಭ ಮತ್ತು ಪ್ರಚಾರದ ವಿಡಿಯೋ ಚಿತ್ರೀಣರಣ ಮಾಡಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ನಗರ ಜಿಲ್ಲಾಧಿಕಾರಿ ವ್ಯಾಪ್ತಿಗೆ ಬರುವ ಏಳು ಕ್ಷೇತ್ರಗಳಲ್ಲಿ ಒಟ್ಟು 30.85 ಲಕ್ಷ ಮತದಾರರಿದ್ದು, ಇದಕ್ಕಾಗಿ 5,369 ಬ್ಯಾಲೆಟ್‌ ಯೂನಿಟ್‌, 4,729 ಕಂಟ್ರೋಲ್‌ ಯೂನಿಟ್‌ ಹಾಗೂ 4,700 ವಿವಿಪ್ಯಾಟ್‌ಗಳು ಬೇಕು.

ಈಗಾಗಲೇ ಅಗತ್ಯವಿರುವ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ತರಿಸಿಕೊಳ್ಳಲಾಗಿದೆ. 2,772 ಮತಗಟ್ಟೆಗಳನ್ನು ಗುರುತಿಸಿದ್ದು, 410 ಹೆಚ್ಚುವರಿ ಮತಗಟ್ಟೆಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಚುನವಣಾ ಕರ್ತವ್ಯಕ್ಕೆ ಒಟ್ಟು 20 ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ನಗರ ಜಿಲ್ಲಾಧಿಕಾರಿ ಎನ್‌.ಎಂ. ನಾಗರಾಜ್‌, ವಿಶೇಷ ಜಿಲ್ಲಾಧಿಕಾರಿ-2, ರಂಗಪ್ಪ  ಉಪಸ್ಥಿತರಿದ್ದರು.

ಕಂಟ್ರೋಲ್‌ ರೂಮ್‌ ಗೆ ಚಾಲನೆ: ಇದೇ ವೇಳೆ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಕಂಟ್ರೋಲ್‌ ರೂಮ್‌ಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಸಾರ್ವಜನಿಕರು 18004250138 ಶುಲ್ಕ ರಹಿತ ಸಂಖ್ಯೆಗೆ ಕರೆ ಮಾಡಿ ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ನೀಡಬಹುದು. ಇದರೊಂದಿಗೆ ಸಹಾಯವಾಣಿ ಕೇಂದ್ರಕ್ಕೂ (080 22211157) ಜಿಲ್ಲಾಧಿಕಾರಿಗಳು ಗುರುವಾರ ಚಾಲನೆ ನೀಡಿದರು.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.