ಈ ವರ್ಷ ರವಿಚಂದ್ರನ್‌ ಸಿನಿಹಬ್ಬ


Team Udayavani, Mar 31, 2018, 11:16 AM IST

Ravichandran-(1).jpg

ಕಳೆದ ವರ್ಷ ರವಿಚಂದ್ರನ್‌ ಅಭಿನಯದ ಒಂದೇ ಒಂದು ಚಿತ್ರ ಬಿಡುಗಡೆಯಾಗಿತ್ತು. ಅದೇ “ಹೆಬ್ಬುಲಿ’. ಅದೊಂದು ಚಿತ್ರ ಹೊರತುಪಡಿಸಿದರೆ ಮಿಕ್ಕಂತೆ ಅವರ ಯಾವುದೇ ಚಿತ್ರ ಬಿಡುಗಡೆಯಾಗಿರಲಿಲ್ಲ. ಈ ಬಗ್ಗೆ ಬೇಸರಗೊಂಡಿದ್ದ ಅವರ ಅಭಿಮಾನಿಗಳಿಗೆ ಈ ವರ್ಷ ಬಂಪರ್‌ ಎಂದರೆ ತಪ್ಪಿಲ್ಲ. ಏಕೆಂದರೆ, ಈ ವರ್ಷ ರವಿಚಂದ್ರನ್‌ ಅವರ ಸಿನಿಹಬ್ಬ ಶುರುವಾಗಲಿದೆ.

ಹೀಗೆಂದಾಕ್ಷಣ, ಅಚ್ಚರಿಯಾಗಬಹುದೇನೋ? ಆದರೂ ಇದು ನಿಜ. ಹೌದು, ರವಿಚಂದ್ರನ್‌ ಅಭಿನಯಿಸಿರುವ ಈ ವರ್ಷದ ಮೊದಲ ಚಿತ್ರ “ಸೀಜರ್‌’ ಏಪ್ರಿಲ್‌ ಎರಡನೆಯ ವಾರದಂದು ಬಿಡುಗಡೆಯಾಗುತ್ತಿದೆ. ಇದು ಬಿಡುಗಡೆಯಾಗುತ್ತಿರುವ ಮೊದಲ ಚಿತ್ರವಾದರೆ, ಅವರು ಅಭಿನಯಿಸಿರುವ ಮೂರು ಚಿತ್ರಗಳು ಕೂಡ ಸಾಲು ಸಾಲಾಗಿ ತೆರೆಗೆ ಬರಲು ಸಜ್ಜಾಗಿವೆ. ಅಲ್ಲಿಗೆ ಈ ವರ್ಷ ರವಿಚಂದ್ರನ್‌ ನಟಿಸಿದ ನಾಲ್ಕು ಚಿತ್ರಗಳು ತೆರೆಗೆ ಬರಲಿವೆ ಎಂಬುದು ವಿಶೇಷ.

“ಸೀಜರ್‌’ ಚಿತ್ರ ಏಪ್ರಿಲ್‌ನಲ್ಲಿ ಬಿಡುಗಡೆಯಾದರೆ, ಅದರ ಹಿಂದೆಯೇ “ಬಕಾಸುರ’ ಚಿತ್ರ ತೆರೆಗೆ ಅಪ್ಪಳಿಸಲಿದೆ. ಇನ್ನು, ಬಹು ನಿರೀಕ್ಷೆಯ “ಮುನಿರತ್ನ ಕುರುಕ್ಷೇತ್ರ’ ಚಿತ್ರವು ಮೇ ಕೊನೆಯಲ್ಲಿ ಅಥವಾ ಜೂನ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದಾದ ಬಳಿಕ ರವಿಚಂದ್ರನ್‌ ನಿರ್ದೇಶಿಸಿ, ಅಭಿನಯಿಸುತ್ತಿರುವ “ರಾಜೇಂದ್ರ ಪೊನ್ನಪ್ಪ’ ಚಿತ್ರ ಕೂಡ ವರ್ಷದ ಅಂತ್ಯದಲ್ಲಿ ಬಿಡುಗಡೆಯಾಗಬಹುದು.

ಅಲ್ಲಿಗೆ, ರವಿಚಂದ್ರನ್‌ ಅಭಿನಯದ ನಾಲ್ಕು ಚಿತ್ರಗಳು ಈ ವರ್ಷ ತೆರೆಗೆ ಬರಲಿವೆ ಎಂಬುದು ವಿಶೇಷತೆಗಳಲ್ಲೊಂದು. ಇದು ಅಭಿಮಾನಿಗಳ ಪಾಲಿಗೆ ಹಬ್ಬವಂತೂ ಹೌದು. ಸಾಮಾನ್ಯವಾಗಿ ಹೀರೋಗಳು ನಟಿಸಿದ ಎರಡು ಅಥವಾ ಮೂರು ಚಿತ್ರಗಳು ಒಂದು ವರ್ಷದಲ್ಲಿ ಬಿಡುಗಡೆಯಾಗಿರುವ ಉದಾಹರಣೆಗಳಿವೆ. ಈ ವರ್ಷ ರವಿಚಂದ್ರನ್‌ ಅಭಿನಯದ ನಾಲ್ಕು ಚಿತ್ರಗಳು ಬಿಡುಗಡೆಯಾಗುವ ಸಾಧ್ಯತೆ ಇರುವುದು ವಿಶೇಷವಂತೂ ಹೌದು.

ವಿನಯ್‌ಕೃಷ್ಣ ನಿರ್ದೇಶನದ “ಸೀಜರ್‌’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ನಾಯಕ. ಅವರಿಗೆ ಪಾರುಲ್‌ ಯಾದವ್‌ ನಾಯಕಿ. ತ್ರಿವಿಕ್ರಮ ಈ ಚಿತ್ರದ ನಿರ್ಮಾಪಕರು. ಆರಂಭದಲ್ಲಿ ರವಿಚಂದ್ರನ್‌ “ಸೀಜರ್‌’ನಲ್ಲಿ ನಟಿಸುತ್ತಾರೆಂಬುದು ಸುದ್ದಿ ಇರಲಿಲ್ಲ. ಎಷ್ಟೋ ದಿನಗಳ ಬಳಿಕ ರವಿಚಂದ್ರನ್‌ “ಸೀಜರ್‌’ ತಂಡ ಸೇರಿಕೊಂಡ ಸುದ್ದಿ ಬಂತು. ಈಗಾಗಲೇ ರವಿಚಂದ್ರನ್‌ ಹಲವು ಹೀರೋಗಳ ಚಿತ್ರದಲ್ಲಿ ನಾಯಕನ ತಂದೆಯಾಗಿ, ಅಣ್ಣನಾಗಿ ಕಾಣಿಸಿಕೊಂಡಿರುವುದರಿಂದ ಇಲ್ಲೂ ಚಿರುಗೆ ತಂದೆ ಪಾತ್ರ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಇತ್ತು.

ಆದರೆ, ರವಿಚಂದ್ರನ್‌ “ಸೀಜರ್‌’ನಲ್ಲಿ ಒಬ್ಬ ಫೈನಾನ್ಶಿಯರ್‌ ಪಾತ್ರ ಮಾಡುತ್ತಿದ್ದಾರೆ. ಅವರೊಂದಿಗೆ ಚಿರು ಅವರು ಕಾರುಗಳನ್ನು ಸೀಜ್‌ ಮಾಡುವ ಹುಡುಗನಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಆಂಜಿ ಛಾಯಾಗ್ರಹಣ ಮಾಡಿದರೆ, ಚಂದನ್‌ ಶೆಟ್ಟಿ ಅವರ ಸಂಗೀತವಿದೆ. ಇನ್ನು, “ಕರ್ವ’ ಖ್ಯಾತಿಯ ನವನೀತ್‌ ನಿರ್ದೇಶನದ “ಬಕಾಸುರ’ದಲ್ಲೂ ರವಿಚಂದ್ರನ್‌ ನಟಿಸುತ್ತಿದ್ದಾರೆ.

ಹಾಗಾದರೆ, ಈ ಚಿತ್ರದಲ್ಲಿ ರವಿಚಂದ್ರನ್‌ ಪಾತ್ರ ಏನು? ಅದಕ್ಕೆ ಉತ್ತರ ಚಿತ್ರ ಬರುವವರೆಗೆ ಕಾಯಬೇಕು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟೊತ್ತಿಗೆ “ಮುನಿರತ್ನ ಕುರುಕ್ಷೇತ್ರ’ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಚುನಾವಣೆ ಘೋಷಣೆಯಾಗಿದ್ದರಿಂದ ಚಿತ್ರ ಮುಂದಕ್ಕೆ ಹೋಗಿದೆ. ಈ ಚಿತ್ರದಲ್ಲಿ ರವಿಚಂದ್ರನ್‌ ಅವರು ಕೃಷ್ಣನಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ದೊಡ್ಡ ತಾರಾಬಳಗ ಇರುವ ಸಿನಿಮಾ. ರವಿಚಂದ್ರನ್‌ ಕೃಷ್ಣನಾಗಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎಂಬುದಕ್ಕೆ ಈಗಾಗಲೇ ಒಂದು ಪೋಸ್ಟರ್‌ ಕೂಡ ಬಿಡುಗಡೆಯಾಗಿತ್ತು.

ಮಹಾಭಾರತದ ಕೃಷ್ಣ ಏನೆಲ್ಲಾ ಮಾಡಿದ್ದಾರೋ, ಅದನ್ನೇ ತೆರೆಯ ಮೇಲೆ ರವಿಚಂದ್ರನ್‌ ಅವರು ಕೃಷ್ಣನಾಗಿ ತೋರಿಸಲು ಹೊರಟಿದ್ದಾರೆ. “ದೃಶ್ಯಂ’ನಲ್ಲಿ ರಾಜೇಂದ್ರ ಪೊನ್ನಪ್ಪ ಪಾತ್ರದಲ್ಲಿ ಗಮನಸೆಳೆದ ರವಿಚಂದ್ರನ್‌, “ರಾಜೇಂದ್ರ ಪೊನ್ನಪ್ಪ’ ಹೆಸರಲ್ಲೇ ಚಿತ್ರವೊಂದಕ್ಕೆ ಚಾಲನೆ ಕೊಟ್ಟರು. ಅದೂ ಕೂಡ ಈ ವರ್ಷವೇ ಬರುವ ಸೂಚನೆ ನೀಡಿದೆ. ಅವರಿಗೆ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.