ಅಕ್ಕಲ್‌ಕೋಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಘಟಕದ ಉದ್ಘಾಟನೆ


Team Udayavani, Mar 31, 2018, 4:13 PM IST

3003mum03.jpg

ಸೊಲ್ಲಾಪುರ: ಪ್ರತಿಯೊಬ್ಬ ಕನ್ನಡಿ ಗರು ತಮ್ಮ ಮಾತೃ ಭಾಷೆಯನ್ನು ಉಳಿಸಿ, ಬೆಳೆಸಲು ಪ್ರಯತ್ನಿಸಬೇಕು. ನಾವೆಲ್ಲಿದ್ದರೂ ನಾವು ಕನ್ನಡಿಗರು ಎಂಬ ಮನೋಭಾವ ನಮ್ಮದಾಗ ಬೇಕು ಎಂದು ಅಫ್ಜಲ್‌ಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಎಂ. ನದಾಫ್‌ ಹೇಳಿದರು.

ಅಕ್ಕಲ್‌ಕೋಟೆ ತಾಲೂಕಿನ ದುಧನಿಯ ಶ್ರೀ ಶಾಂತಲಿಂಗೇಶ್ವರ ವಿರಕ್ತ ಮಠದಲ್ಲಿ ಇತ್ತೀಚೆಗೆ ನಡೆದ ಅಕ್ಕಲ್‌ಕೋಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಉದ್ಘಾಟನೆ ಸಮಾರಂಭದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಇವರು, 12ನೇ ಶತಮಾನದ ಸೊನ್ನಲಿಗೆಯ ಶರಣ ಸಿದ್ಧರಾಮೇಶ್ವರರು ಕನ್ನಡದಲ್ಲಿಯೇ ಸಾವಿರಾರೂ ವಚನಗಳನ್ನು ಬರೆಯುವ ಮೂಲಕ ಈ ಭಾಗದಲ್ಲಿ ಕನ್ನಡ ಉಳಿಸಿ ಬೆಳೆಸಿದ್ದಾರೆ. ಅಲ್ಲದೆ ಗುಡ್ಡಾಪುರದ ದಾನೇಶ್ವರಿ ಮತ್ತು ಪಂಡರಪುರದ ವಿಟuಲನು ಮೂಲತಃ ಕರ್ನಾಟಕದವರಾಗಿದ್ದು ಮಹಾರಾಷ್ಟ್ರದಲ್ಲಿ ನೆಲೆಸಿದ್ದಾರೆ ಎಂದು ಹೇಳಿ ನೂತನ ಸಂಸ್ಥೆಗೆ ಶುಭಹಾರೈಸಿದರು.

ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಬಸವರಾಜ ಮಸೂತಿ ಪ್ರಾಸ್ತಾವಿಕವಾಗಿ ಮಾತ ನಾಡಿ, ಇದೇ ಮೊದಲಬಾರಿಗೆ ಮಹಾರಾಷ್ಟ್ರದ ಬೃಹತ್‌ ಮುಂಬಯಿ, ದಕ್ಷಿಣ ಸೊಲ್ಲಾಪುರ, ಜತ್ತ ಹಾಗೂ ಅಕ್ಕಲ್‌ಕೋಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು  ತಾಲೂಕು ಘಟಕ ರಚನೆಮಾಡಲಾಗಿದೆ. ಇದರಿಂದ ನಾವೆಲ್ಲರೂ ಕಸಾಪ ವತಿಯಿಂದ ಕನ್ನಡ ಭಾಷೆ ಬೆಳೆಸಲು ಪ್ರಯತ್ನಿಸೋಣ. ಅಲ್ಲದೆ ಈ ಭಾಗದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಮಹತ್ವವನ್ನು ಮಹಾರಾಷ್ಟ್ರ ಸರಕಾರ ನೀಡುತ್ತಿಲ್ಲ. ಅಷ್ಟೇ ಅಲ್ಲದೆ ಈಗ ಇಲ್ಲಿನ ಕನ್ನಡ ಶಾಲೆಗಳು ಮುಚ್ಚುತ್ತಿವೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳ ಕಲಿಕಾ ಮಟ್ಟ ಕುಸಿಯುತ್ತಿದೆ. ಆದ್ದರಿಂದ ಅನಿವಾರ್ಯವಾಗಿ ಪಾಲಕರು ತಮ್ಮ ಮಕ್ಕಳನ್ನು ಮರಾಠಿ ಮಾಧ್ಯಮಕ್ಕೆ ಸೇರಿಸುವಂತಾಗಿದೆ ಎಂದು ಅವರು ಹೇಳಿದರು.

ದುಧನಿ ವಿರಕ್ತಮಠದ ಪೂಜ್ಯ ಡಾ| ಶಾಂತಲಿಂಗ ಮಹಾಸ್ವಾಮೀಜಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನೆ-ಮನೆಗಳಲ್ಲಿ ಮಠ-ಮಂದಿರಗಳಲ್ಲಿ ಕನ್ನಡ ಮಾತನಾಡುವುದರಿಂದ ಕನ್ನಡ ಭಾಷೆ ಬೆಳೆಯಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ಕನ್ನಡಿಗರು ತಮ್ಮ ಮನೆಗಳಲ್ಲಿ ಮಾತೃ  ಭಾಷೆಯಲ್ಲಿ ಮಾತನಾಡಬೇಕು. ಕನ್ನಡ ಭಾಷೆ ನಮ್ಮೆಲ್ಲರ ಮಾತೃ ಭಾಷೆಯಾಗಿದ್ದು, ನಾವೆಲ್ಲರೂ ಕನ್ನಡದಲ್ಲಿಯೇ ಮಾತನಾಡುವ ಮೂಲಕ ಮಾತೃಭಾಷೆಯನ್ನು ಗೌರವಿಸಬೇಕು. ಅದರ ಜತೆಗೆ ಬೇರೆ ಭಾಷೆಗಳನ್ನು ಪ್ರೀತಿಸಬೇಕು. ಇವತ್ತಿಗೂ ಮಠಗಳಲ್ಲಿ ನಡೆಯುವ ಶಿವಾನುಭವ ಕಾರ್ಯಕ್ರಮದಲ್ಲಿ ನಮ್ಮ ತಾಯಂದಿರು ಕನ್ನಡದ ಹಾಡುಗಳನ್ನು ಹಾಡುತ್ತಾರೆ ಎಂದು ಹೇಳಿದರು.

ಅಕ್ಕಲ್‌ಕೋಟೆ ತಾಲೂಕು ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ್‌ ಮಡ್ಡೆ ಮಾತನಾಡಿ, ಹೆಣ್ಣಿಗೆ ಮಂಗಳಸೂತ್ರ ಏಷ್ಟು ಮುಖ್ಯನೋ ಅಷ್ಟೇ ಪ್ರತಿಯೊಬ್ಬ ಕನ್ನಡಿಗರಿಗೆ ಕನ್ನಡ ಭಾಷೆ ಬಹಳ ಮಹತ್ವದ್ದಾಗಿದೆ. ನಮ್ಮ ದೇಹ ಮಹಾರಾಷ್ಟ್ರದಲ್ಲಿದ್ದರೂ ಮನಸ್ಸು ಮಾತ್ರ ಕರ್ನಾಟಕದಲ್ಲಿದೆ. ನಾವೆಲ್ಲಿದ್ದರೂ ಕನ್ನಡಕ್ಕಾಗಿ ಹೊರಾಡುತ್ತೇವೆ ಎಂದರು.

ನಮಗೆ ಕರ್ನಾಟಕ ಬಿಟ್ಟರ ಬಹುದು. ಆದರೆ ನಾವು ಮಾತ್ರ ಕನ್ನಡ ಬಿಟ್ಟಿಲ್ಲ. ಹೀಗಾಗಿ ಕಸಾಪ ಮೂಲಕ ಕನ್ನಡ ಸೇವೆ ಮಾಡಲು ಅವಕಾಶ ದೊರೆತಿದೆ ಎಂದು ಹೇಳಿದರು.

ಮೊದಲಿಗೆ ಅಫ್ಜಲ್‌ಪುರದ  ಪೂಜ್ಯ ಶಿವಲಿಂಗೇ ಶ್ವರ ಶ್ರೀಗಳು ಹಾಗೂ ದುಧನಿಯ ಶ್ರೀಗಳು ಅಕ್ಕಲ್‌ಕೋಟೆ ತಾಲೂಕು ಕಸಾಪ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು.

ಮುಖ್ಯ ಅತಿಥಿಗಳಾಗಿ ಆಳಂದ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಕರೆ, ಸುಭಾಸ್‌  ಪರಮಶೆಟ್ಟಿ, ಸಿದ್ಧಾರಾಮ ಯಗದಿ, ರಾಜಶೇಖರ ಮಸೂತಿ, ಬಸವೇಶ್ವರ ಕರಜಗಿ, ನರಸಪ್ಪ ಬಿರಾಜ ದಾರ, ಬಸವರಾಜ ಆಲಮದ, ದಯಾನಂದ ಬಮನಳ್ಳಿ, ಪ್ರಕಾಶ ಗೊಬ್ಬುರ, ಪ್ರಕಾಶ ಪ್ರದಾನ, ರಾಜಶ್ರೀ ಮಸೂತಿ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು. ಶಿವಚಲಕುಮಾರ ಸಾಲಿಮಠ ಸ್ವಾಗತಿಸಿದರು. ಗದಗಯ್ಯ ಹಿರೇಮಠ ಅವರು ಕಾರ್ಯಕ್ರಮ ನಿರೂಪಿಸಿದರು. ಗಿರಮಲ್ಲಪ್ಪ ಭರಮಾ ವಂದಿಸಿದರು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.