ಬಳ್ಳಕ ಅಂಗನವಾಡಿ ಮಕ್ಕಳಿಗೆ ಟ್ಯಾಬ್‌ ಮೂಲಕ ಶಿಕ್ಷಣ


Team Udayavani, Apr 2, 2018, 11:23 AM IST

2April-8.jpg

ಸುಬ್ರಹ್ಮಣ್ಯ: ಈ ಅಂಗನವಾಡಿಗೆ ಬರಲು ಮಕ್ಕಳು ಹಿಂದೇಟು ಹಾಕುವುದಿಲ್ಲ, ರಚ್ಚೆ ಹಿಡಿದು ಅಳುವುದಿಲ್ಲ. ಆಧುನಿಕ ಶೈಲಿಯಲ್ಲಿ ಶಿಕ್ಷಣ ನೀಡುತ್ತಿರುವ ಈ ಕೇಂದ್ರವೀಗ ಎಲ್ಲರ ಗಮನ ಸೆಳೆಯುತ್ತಿದೆ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಬಳ್ಳಕ ಎಂಬಲ್ಲಿ ಅಂಗನವಾಡಿ ಕೇಂದ್ರವಿದೆ. ಪಂಜ- ಗುತ್ತಿಗಾರು ರಸ್ತೆಯ ಒಳಗಿನ ಕಾಡಿನ ಮಧ್ಯೆ ಜನವಸತಿ ವಿರಳವಿರುವಲ್ಲಿ ಇದು ಕಾರ್ಯಾಚರಿಸುತ್ತಿದೆ. ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ಅಂಗನವಾಡಿ ಕೇಂದ್ರವಿದು. ನಗರದ ಆಂ.ಮಾ.ಶಾಲೆಗಳಲ್ಲೂ ಇಲ್ಲದಿರುವ ವ್ಯವಸ್ಥೆಗಳು ಇಲ್ಲಿವೆ.

ಇಲ್ಲಿ ಈ ಹಿಂದೆ ಸರಕಾರಿ ಶಾಲೆ ಕಟ್ಟಡದ ಜತೆ ಅಂಗನವಾಡಿ ಕೇಂದ್ರವಿತ್ತು. ಬಳಿಕ ಸರಕಾರದ ಅನುದಾನದ ಜತೆಗೆ ಊರಿನ ದಾನಿಗಳು, ಪೋಷಕರು ಮತ್ತು ಸಂಘ – ಸಂಸ್ಥೆಗಳ ನೆರವಿನಿಂದ 14 ಲಕ್ಷ ರೂ. ವೆಚ್ಚದಲ್ಲಿ ಇಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಿಕೊಂಡಿದ್ದಾರೆ. 

ಭವಿಷ್ಯ ಬೆಳಗಿಸುತ್ತಿದೆ
ಶಿಕ್ಷಕಿಯಾಗಿ ಬಂದಾಗಿಂದ ಏನಾದರೂ ಹೊಸತನ ತರಬೇಕು ಎಂಬ ಯೋಚನೆಯಿತ್ತು. ಪರಿಸರದ ಮಕ್ಕಳ ಪೋಷಕರನ್ನು ಸವಲತ್ತಿಗಾಗಿ ಕೇಳಿಕೊಂಡೆ. ಕೇಳಿದ ತತ್‌ಕ್ಷಣ ಯಾರೊಬ್ಬರೂ ಹಿಂಜರಿಯದೆ ಸ್ಪಂದಿಸಿ ಶಾಲೆಗೆ ಬೇಕಾದ ಎಲ್ಲ ಸವಲತ್ತು ಒದಗಿಸಿದರು. ನಿರೀಕ್ಷೆ ಮೀರಿದ ಸೊತ್ತುಗಳು ಒದಗಿ ಅಚ್ಚರಿ ಮೂಡಿತು. ಕೇಳುವ ಮನಸ್ಸಿದ್ದರೆ ಕೊಡುವ ಕೈಗಳಿರುತ್ತವೆ, ಬಾಲವಿಕಾಸ ಸಮಿತಿ, ಕಟ್ಟಡ ಸಮಿತಿ, ಪೋಷಕರು, ಸಂಘ-ಸಂಸ್ಥೆಗಳ ನೆರವು ಇಲ್ಲಿ ಮಕ್ಕಳ ಭವಿಷ್ಯ ಬೆಳಗಿಸುತ್ತಿದೆ.
-ಲತಾ ಅಂಬೆಕಲ್ಲು ,
ರಾಜ್ಯ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪುರಸ್ಕೃತೆ, ಬಳ್ಳಕ

ಒಗ್ಗಟ್ಟಿನ ಮೂಲಕ ಪರಿಹಾರ
ಶಾಲೆಯ ಕುರಿತು ಗ್ರಾಮದಲ್ಲಿ ಅಭಿಮಾನ ಇದ್ದಾಗ ತನ್ನಿಂತಾನೆ ಸವಲತ್ತು ಒದಗುತ್ತದೆ. ಸ್ಥಳೀಯವಾಗಿ ಹೊಂದಾಣಿಕೆ ಇದ್ದಾಗ ಸುಂದರ ಸುಸಜ್ಜಿತ ಕೇಂದ್ರ ನಿರ್ಮಾಣವಾಗಲು ಸಾಧ್ಯ. ಇಲ್ಲಿ ಇಲಾಖೆ, ಕಾರ್ಯಕರ್ತೆ, ಸಿಬಂದಿ, ಪೋಷಕರು ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದ ಇದು ಸಾಧ್ಯವಾಗಿದೆ. ಸರಕಾರದ ಇತ್ತೀಚಿನ ಧೋರಣೆಗಳು ಮಕ್ಕಳ ಶಿಕ್ಷಣವನ್ನು ಅಧಃಪತನಗೊಳಿಸುತ್ತಿವೆ. ಒಗ್ಗಟ್ಟಿನ ಮೂಲಕವೇ ಇದಕ್ಕೆಲ್ಲ ಪರಿಹಾರ ಕಂಡುಕೊಳ್ಳಬಹುದು.
-ಜಯಪ್ರಕಾಶ ಮೊಗ್ರ,ಕಟ್ಟಡ ಸಮಿತಿ ಅಧ್ಯಕ್ಷರು

ಆಧುನಿಕ ಶೈಲಿಯ ಶಿಕ್ಷಣ
ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗೆ ಇಲ್ಲಿ ಪ್ರೋತ್ಸಾಹ ಸಿಗುತ್ತಿದೆ. ನಗರ ಶಾಲೆಗಳಿಗೆ ಕಮ್ಮಿ ಇಲ್ಲದಂತೆ ಶಾಲೆ ಆಧುನಿಕ ಶೈಲಿಯಲ್ಲಿ ಶಿಕ್ಷಣ ದೊರಕುತ್ತಿದೆ. ಇದು ನಮಗೆ ಹೆಮ್ಮೆ ತಂದಿದೆ.
-ಮಿತ್ರಕುಮಾರಿ ಚಿಕ್ಮುಳಿ,
ಬಾಲವಿಕಾಸ ಸಮಿತಿ ಅಧ್ಯಕ್ಷೆ 

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.