ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಸ್ವಂತ ಕಟ್ಟಡವೇ ಇಲ್ಲ
Team Udayavani, Apr 3, 2018, 4:21 PM IST
ಪುತ್ತೂರು ಎ. 2: ಪುತ್ತೂರಿಗೆ ಮಹಿಳಾ ಠಾಣೆ ಮಂಜೂರುಗೊಂಡು ವರ್ಷ ಪೂರೈಸಿದೆ. ಆದರೆ ಮಹಿಳಾ ಠಾಣೆಗೆ ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಣೆಯ ಭಾಗ್ಯ ಇನ್ನೂ ಲಭಿಸಿಲ್ಲ. ಸುಳ್ಯ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳನ್ನು ಒಳಗೊಂಡು ಪುತ್ತೂರು ವಿಭಾಗ ಕಾರ್ಯವ್ಯಾಪ್ತಿಯನ್ನು ಹೊಂದಿರುವ ದ.ಕ. ಜಿಲ್ಲೆಯ 2ನೇ ಮಹಿಳಾ ಪೊಲೀಸ್ ಠಾಣೆ ಪುತ್ತೂರಿಗೆ ಮಂಜೂರು ಗೊಂಡು 2017ರ ಮಾ. 11ರಂದು ಸಂಚಾರ ಠಾಣೆಯ ಹೊಸ ಕಟ್ಟಡದಲ್ಲಿ ತಾತ್ಕಾಲಿಕ ಉದ್ಘಾಟನೆಗೊಂಡಿತ್ತು.
ಶಾಸಕರ ಸಹಿತ ಭಾಗಶಃ ಸ್ಥಳೀಯ ಸಂಸ್ಥೆಗಳ ಪ್ರಮುಖ ಸ್ಥಾನಗಳಲ್ಲಿ ಮಹಿಳಾ ಪಾರಮ್ಯ ಮೆರೆದಿರುವ ಪುತ್ತೂರಿಗೆ ಮಹಿಳಾ ಠಾಣೆಯ ಮಂಜೂರಾತಿ ಮತ್ತೂಂದು ಗರಿ ಯನ್ನು ಮೂಡಿಸಿತ್ತು. ಮಹಿಳಾ ಠಾಣೆಯ ಮಂಜೂರಾತಿ ನೆಲೆಯಲ್ಲಿ ಶಾಸಕಿ ಶಕುಂತಳಾ ಟಿ. ಶೆಟ್ಟಿಯವರು ಗೃಹ ಸಚಿವರ ಮನವೊಲಿ ಸುವಲ್ಲಿ ಯಶಸ್ವಿಯಾಗಿದ್ದರು.
ಸ್ವಂತ ಕಟ್ಟಡಕ್ಕೆ 20 ಲಕ್ಷ ರೂ.
ಅನಂತರದಲ್ಲಿ ಮಹಿಳಾ ಠಾಣೆಗೆ ಸ್ವಂತ ಕಟ್ಟಡವಾಗಬೇಕೆಂಬ ನಿಟ್ಟಿನಲ್ಲಿ ಆರಂಭಿಸ ಲಾದ ಪ್ರಯತ್ನವೂ ಸಾಕಾರಗೊಂಡು ಸರಕಾರ ಗೃಹ ಇಲಾಖೆಯ ಮೂಲಕ 20 ಲಕ್ಷ ರೂ. ಮಂಜೂರುಗೊಳಿಸಿತ್ತು. ಈ ಅನುದಾನದಲ್ಲಿ ಈ ಹಿಂದೆ ಸಂಚಾರ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದ ಹಳೆಯ ಪೊಲೀಸ್ ಸ್ಟೇಷನ್ ಕಟ್ಟಡವನ್ನು ಅಭಿವೃದ್ಧಿಪಡಿಸಿ ಅಲ್ಲಿಗೆ ಮಹಿಳಾ ಠಾಣೆ ಯನ್ನು ಸ್ಥಳಾಂತರಿಸುವ ಯೋಜನೆ ಹಾಕಿ ಕೊಂಡಿದ್ದರೂ ಇನ್ನೂ ಕಾರ್ಯಗತಗೊಂಡಿಲ್ಲ.
ನಿರ್ವಹಣೆಯಿಲ್ಲದೆ ಅನಾಥ
ಶ್ರೀ ಮಹಾಲಿಂಗೇಶ್ವರ ದೇವಾಲಯದ ಮುತ್ತು ಬೆಳೆದ ಕೆರೆಯ ಬಳಿ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಇರುವ ಹಲವು ದಶಕಗಳ ಇತಿಹಾಸ ಹೊಂದಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಚಾರ ಪೊಲೀಸ್ ಠಾಣೆ 2015ರ ಸೆ. 7ರಂದು ಪಕ್ಕದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿತ್ತು. ಎರಡೂವರೆ ವರ್ಷಗಳಿಂದ ನಿರ್ವಹಣೆಯಿಲ್ಲದೆ ಕಟ್ಟಡ ಶಿಥಿಲಗೊಳ್ಳುತ್ತಿದೆ.
2010ರಲ್ಲಿ ಪುತ್ತೂರಿಗೆ ಸಂಚಾರ ಪೊಲೀಸ್ ಠಾಣೆ ಮಂಜೂರಾದಾಗ ಈ ಕಟ್ಟಡ ವನ್ನು ಸಂಚಾರ ಠಾಣೆಯನ್ನಾಗಿಸಲಾಗಿತ್ತು. ಅದಕ್ಕೂ ಮೊದಲು ಹಲವು ವರ್ಷಗಳಿಂದ ಪುತ್ತೂರು ಪೊಲೀಸ್ ಠಾಣೆ ಕಾರ್ಯ ನಿರ್ವ ಹಿಸುತ್ತಿತ್ತು. ಹೀಗೆ ಪುತ್ತೂರಿನ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಹೊಸದಾಗಿ ಆರಂಭಗೊಳ್ಳುವ ವ್ಯವಸ್ಥೆಗಳು ಇದೇ ಕಟ್ಟಡದಲ್ಲಿ ಆರಂಭಗೊಳ್ಳುವುದು ವಿಶೇಷ. ಪ್ರಸ್ತುತ ಮಹಿಳಾ ಠಾಣೆಗೆ ಸಂಬಂಧಪಟ್ಟ ಪಿಎಸ್ಐ, ಎಎಸ್ಐ ಹಾಗೂ ಸುಮಾರು 7 ಸಿಬಂದಿ ಸಂಚಾರ ಪೊಲೀಸ್ ಠಾಣೆಯ ಕಟ್ಟಡದಲ್ಲಿ ವಿಭಾಗ ಮಾಡಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೂರು ತಾ| ಗಳ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಮಹಿಳಾ ಠಾಣೆಯ ಸಮರ್ಪಕ ಕರ್ತವ್ಯ ನಿರ್ವಹಣೆ ಭಾಗವಾಗಿ ಪ್ರತ್ಯೇಕ ವ್ಯವಸ್ಥೆಯ ಅನಿವಾರ್ಯವೂ ಇವರಿಗಿದೆ.
ಪುನಶ್ಚೇತನ ಯಾವಾಗ?
ಮಹಿಳಾ ಠಾಣೆಯನ್ನು ಈ ಹಳೆಯ ಕಟ್ಟಡಕ್ಕೆ ಸ್ಥಳಾಂತರಿಸುವುದಕ್ಕೆ ಮೊದಲು ಅದನ್ನು 20 ಲಕ್ಷ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದ ಸೂಚನೆ ನೀಡಲಾಗಿದೆ. ಆದರೆ ಇನ್ನೂ ಅಭಿವೃದ್ಧಿ ಕಾರ್ಯ ಆರಂಭಗೊಂಡಿಲ್ಲ. ಹಾಲಿ ಭೂತ ಬಂಗಲೆಯಂತಿರುವ ಹಳೆಯ ಪೊಲೀಸ್ ಸ್ಟೇಷನ್ ಕಟ್ಟಡದ ನಿರ್ವಹಣೆ ಮಾಡುತ್ತಿಲ್ಲವಾದ್ದರಿಂದ ಇನ್ನಷ್ಟು ಶಿಥಿಲಗೊಳ್ಳುವ ಸಾಧ್ಯತೆಯೂ ಇದೆ.
ರಾಜೇಶ್ ಪಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.