ಪ್ರವಾಸಿಗರಿಗಾಗಿ ತೃಕ್ಕನ್ನಾಡು,ಕಾಪ್ಪಿಲ್‌,ಚೆಂಬರಿಕ ಬೀಚ್‌ ಅಭಿವೃದ್ಧಿ


Team Udayavani, Apr 4, 2018, 9:15 AM IST

Bekala-Beach-600.jpg

ಕಾಸರಗೋಡು: ಇತಿಹಾಸ ಪ್ರಸಿದ್ಧ ಮತ್ತು ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರಗಳಲ್ಲೊಂದಾಗಿರುವ ಬೇಕಲ ಕೋಟೆ ಬೀಚ್‌ ಸಹಿತ ಕಾಸರಗೋಡು ಜಿಲ್ಲೆಯ ಸುಮಾರು 10 ಬೀಚ್‌ಗಳನ್ನು ಪ್ರವಾಸಿಗರನ್ನು ಕೈಬೀಸಿ ಕರೆಯುವ ಉದ್ದೇಶದಿಂದ ಅಭಿವೃದ್ಧಿಪಡಿಸಲು ಬಿಆರ್‌ಡಿಸಿ ಮುಂದಾಗಿದೆ. ‘ಬೀಚ್‌ ಟೂರಿಸಂ’ ಅಭಿವೃದ್ಧಿ ಸಾಧ್ಯತೆಯ ಆಧಾರದಲ್ಲಿ 1991ರಲ್ಲಿ ಕೇಂದ್ರ ಸರಕಾರ ಆಯ್ಕೆ ಮಾಡಿದ ದೇಶದ ಐದು ಬೀಚ್‌ಗಳಲ್ಲಿ ಬೇಕಲ ಬೀಚ್‌ ಒಂದು. ಈ ಬೀಚ್‌ನೊಂದಿಗೆ ಕಾಸರಗೋಡು ಜಿಲ್ಲೆಯ ಹತ್ತು ಬೀಚ್‌ಗಳನ್ನು ಅಭಿವೃದ್ಧಿಪಡಿಸುವ ಮಹತ್ವದ ಯೋಜನೆಯೊಂದನ್ನು ಬಿಆರ್‌ಡಿಸಿ ಹಮ್ಮಿಕೊಂಡಿದೆ. ಬೇಕಲ ಬೀಚ್‌ಗಳನ್ನು ಜೋಡಿಸಿ ಕೋಡಿ, ಕಾಪ್ಪಿಲ್‌, ಚೆಂಬರಿಕ, ತೃಕ್ಕನ್ನಾಡು ಮೊದಲಾದ ಹತ್ತು ಬೀಚ್‌ಗಳನ್ನು ಅಭಿವೃದ್ದಿಪಡಿಸಲಾಗುವುದು.

ತೆಂಗಿನ ಗರಿ, ಬಿದಿರು, ಸಮುದ್ರ ಉತ್ಪನ್ನಗಳು ಮೊದಲಾದವುಗಳನ್ನು ಬಳಸಿಕೊಂಡು ಕುಟೀರಗಳನ್ನು ನಿರ್ಮಿಸಿ ಪ್ರವಾಸಿಗರನ್ನು ಆಕರ್ಷಿಸಲಾಗುವುದು. ಆಯಾಯ ಬೀಚ್‌ಗಳಿಗೆ ಹೊಂದಿಕೊಂಡು ಅಭಿವೃದ್ಧಿಪಡಿಸಲು ಸೂಕ್ತವಾದ ನೀಲನಕ್ಷೆಯನ್ನು ಸಿದ್ಧಪಡಿಸಲಾಗುವುದು. ಆ ಮೂಲಕ ಮೂಲ ಸೌಕರ್ಯ ಕಲ್ಪಿಸುವುದರ ಜತೆಗೆ ಅಗತ್ಯದ ಎಲ್ಲಾ ಸೌಲಭ್ಯ ನೀಡುವುದು ಉದ್ದೇಶವಾಗಿದೆ. ಬೀಚ್‌ನಲ್ಲಿ ಪ್ರವಾಸಿಗರಿಗೆ ವಿನೋದ ಕಾರ್ಯಕ್ರಮಗಳು ಮತ್ತು ಸಮಿಚಿ ರುಚಿಯಾದ ಆಹಾರ ಲಭಿಸುವಂತೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಬೀಚ್‌ ವಾಲಿಬಾಲ್‌, ಬೀಚ್‌ ಫುಟ್ಬಾಲ್‌ ಮೊದಲಾದ ಗೇಮ್‌ಗಳು, ಸೀ ಫುಡ್‌, ಊರ ಆಹಾರ ಹೊಟೇಲ್‌ಗ‌ಳು, ಅಕ್ವೇರಿಯಂ, ಸಮುದ್ರದ ಕತೆಗಳನ್ನು ಹೇಳುವ ಮತ್ತು ಪ್ರಾದೇಶಿಕ ಇತಿಹಾಸಗಳ ಮಾಹಿತಿ ನೀಡುವ ಗ್ಯಾಲರಿಗಳನ್ನು ಸ್ಥಾಪಿಸಲಾಗುವುದು. ಕಡಲಾಮೆ, ಏಡಿ ಮೊದಲಾದ ಸಮುದ್ರ ಜೀವಿಗಳ ಆಕೃತಿಯಲ್ಲಿ ಮಕ್ಕಳಿಗಾಗಿ ಆಟದ ಉಪಕರಣಗಳನ್ನು ಬೀಚ್‌ನಲ್ಲಿ ವ್ಯವಸ್ಥೆಗೊಳಿಸಲಾಗುವುದು.

ಬಿಆರ್‌ಡಿಸಿಯ ಸೈಕಲ್‌ ಟೂರಿಸಂ ಯೋಜನೆಯೊಂದಿಗೆ ಬೀಚ್‌ ಪ್ರವಾಸೋದ್ಯಮವನ್ನು ಜೋಡಿಸಲಾಗುವುದು. ಎಲ್ಲ ಬೀಚ್‌ಗಳಲ್ಲೂ ಸೈಕಲ್‌ ಹಬ್‌ಗಳನ್ನು ಸ್ಥಾಪಿಸಲಾಗುವುದು. ಬೀಚ್‌ಗಳನ್ನು ಪರಸ್ಪರ ಜೋಡಿಸಿ ಸೈಕಲ್‌ ಟೂರ್‌ಗಳನ್ನು ಪ್ರೋತ್ಸಾಹಿಸಲಾಗುವುದು. ಪ್ರತಿಯೊಂದು ಬೀಚ್‌ನಲ್ಲೂ ಹೋಂಸ್ಟೇ ಸಹಿತ ವಾಸ್ತವ್ಯ ಹೂಡಲು ಸೌಕರ್ಯ ಕಲ್ಪಿಸಲಾಗುವುದು. ಇದಕ್ಕಾಗಿ ‘ಸ್ಮೈಲ್‌’ ಯೋಜನೆಯನ್ನು ಜೋಡಿಸಲಾಗುವುದು.

ಮೂಲ ಸೌಕರ್ಯ ಅಭಿವೃದ್ಧಿ
ಆಯಾಯ ಬೀಚ್‌ಗಳ ಅಭಿವೃದ್ಧಿ ಸಾಧ್ಯತೆಗನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಈ ಬೀಚ್‌ಗಳಿಗೆ ದೇಶಿ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಯೋಗ್ಯವಾದ ಸವಲತ್ತುಗಳನ್ನು ಸೌಲಭ್ಯಗಳನ್ನು, ಮೂಲ ಸೌಕರ್ಯಗಳನ್ನು ವ್ಯವಸ್ಥೆಗೊಳಿಸಲಾಗುವುದು. ಬೀಚ್‌ಗಳ ಅಭಿವೃದ್ಧಿಯ ಸಂದರ್ಭಗಳಲ್ಲಿ ಸ್ಥಳೀಯರ ಸಹಭಾಗಿತ್ವವನ್ನು ಸ್ವಾಗತಿಸಲಾಗುವುದು. ಅಲ್ಲದೆ ಸ್ಥಳೀಯರ ವರಮಾನವನ್ನು ಹೆಚ್ಚಿಸುವ ಉದ್ದೇಶವು ಇದರಲ್ಲಿದೆ. ಪ್ರವಾಸೋದ್ಯಮದ ಪ್ರಯೋಜನ ಸಾಮಾನ್ಯ ಜನರಿಗೂ ಲಭಿಸುವಂತೆ ಮಾಡಲಾಗುವುದು. ಬೀಚ್‌ಗಳನ್ನು ಅಭಿವೃದ್ಧಿಪಡಿಸುವ ಜತೆಯಲ್ಲಿ ಮಾರುಕಟ್ಟೆಯನ್ನು ವ್ಯವಸ್ಥೆಗೊಳಿಸುವುದು ಮೊದಲಾದವು ಪ್ರಾಥಮಿಕ ಗುರಿಯಾಗಿವೆ ಎಂದು ಬಿಆರ್‌ಡಿಸಿ ಎಂ.ಡಿ. ಟಿ.ಕೆ.ಮನ್ಸೂರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.