‘ಶೋಷಣೆಗೆ ಪುರುಷ ಪ್ರಾಧಾನ್ಯ ಪೋಷಿಸುವ ಮಹಿಳೆಯರೂ ಕಾರಣ’


Team Udayavani, Apr 4, 2018, 10:20 AM IST

COLLEGE-3-4.jpg

ಮಡಿಕೇರಿ: ಮಹಿಳೆಯರ ಶೋಷಣೆಗೆ ಕೇವಲ ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆ ಮಾತ್ರ ಕಾರಣವಲ್ಲ, ಬದಲಾಗಿ ಪುರುಷ ಪ್ರಾಧಾನ್ಯತೆಯನ್ನು ಪೋಷಿಸುವ ಮಹಿಳೆಯರೂ ಕಾರಣ ಎಂಬ ಅಭಿಪ್ರಾಯ ನಗರದ‌ ಫೀಲ್ಡ್‌ ಮಾರ್ಷಲ್‌ ಕೆ. ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಸಮಾಜದಲ್ಲಿ ಸಹಬಾಳ್ವೆ; ಮಹಿಳೆ ಮತ್ತು ಪುರುಷರ ಪಾತ್ರ ಕುರಿತು ನಡೆದ ಸಂವಾದ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು. 

ಮಹಿಳೆಯರ ಹಕ್ಕು ಸ್ವಾತಂತ್ರ್ಯ ಕೇವಲ ಸಾಂವಿಧಾನಿಕವಾಗಿ ಮಾತ್ರ ಉಳಿದುಕೊಂಡಿದೆ ಅದು ಪ್ರಾಯೋಗಿಕವಾಗಿ ಆಚರಣೆಯಲ್ಲಿಲ್ಲ ಎಂದು ಕನ್ನಡ ವಿಭಾಗದ ಉಪನ್ಯಾಸಕಿ ಲಕ್ಷ್ಮೀದೇವಿ ಅವರು ಪ್ರತಿಪಾದಿಸಿದರೆ, ಅದಕ್ಕೆ ದನಿಗೂಡಿಸಿದ ಕಲಾವಿದೆ ಶೋಭಾ ಸುಬ್ಬಯ್ಯ, ಮಹಿಳೆಯರ ಶೋಷಣೆಯನ್ನು ಪ್ರತಿಭಟಿಸುವ ನಿಟ್ಟಿನಲ್ಲಿ ಮಹಿಳೆಯರು ಒಂದಾಗಬೇಕು. ಅವರ ಹಕ್ಕೊತ್ತಾಯವನ್ನು ಪ್ರಬಲವಾಗಿ ಮಂಡಿಸುವ ಶಕ್ತಿಯನ್ನು ಮಹಿಳೆಯರೆಲ್ಲರೂ ರೂಢಿಸಿಕೊಳ್ಳಬೇಕು. ಒಗ್ಗಟ್ಟಾಗಿ ಒಕ್ಕೊರಳಿನಿಂದ ಪ್ರತಿಭಟಿಸಿ ಸ್ವತಂತ್ರರಾಗಬೇಕು ಎಂದು ಕರೆ ನೀಡಿದರು. ಈ ನಿಟ್ಟಿನಲ್ಲಿ ದುಡಿದು ನಮ್ಮ ಕಾಲ ಮೇಲೆ ನಾವು ನಿಂತು ಸಾಧನೆಯ ಮೆಟ್ಟಿಲೇರಬೇಕು ಎಂದು ಅಭಿಪ್ರಾಯಪಟ್ಟರು.

ನಿವೃತ್ತ ಉಪನ್ಯಾಸಕಿ ಕಾವೇರಿ ಪೊನ್ನಪ್ಪ ಅವರು ಮಾತನಾಡಿ, ಪುರುಷ ಗಂಡನಾಗಿ, ಅಪ್ಪನಾಗಿ, ಮಗನಾಗಿ ಎಲ್ಲ ಸಂಬಂಧಗಳಲ್ಲೂ ಹೆಣ್ಣಿನೊಂದಿಗೆ ಬದುಕು ಹಂಚಿಕೊಂಡಿರುವುದರಿಂದ ಇಲ್ಲಿ ಪುರುಷರನ್ನು ವಿರೋಧಿಸುವ ಬದಲಾಗಿ ಮಹಿಳೆಯರೂ ಪುರುಷರಿಗೆ ಸಮಾನವಾಗಿ ದುಡಿದು ಆರ್ಥಿಕವಾಗಿ ಸಬಲರಾಗಿ ಸಂಸಾರವನ್ನು ಮುನ್ನಡೆಸುವ ಮಹತ್ವದ ಜವಾಬ್ದಾರಿಯನ್ನು ಹೊರಬೇಕಿದೆ. ಇಂದು ಎಲ್ಲ ಮನೆಗಳಲ್ಲೂ ಬಹುತೇಕ  ಶೇಕಡಾ 75 ರಷ್ಟು ಕೆಲಸವನ್ನು ನಿಭಾಯಿಸುತ್ತಿರುವುದು ಮಹಿಳೆಯರೇ ಆದರೂ ಕೌಟುಂಬಿಕ ನಿರ್ಣಯಗಳಲ್ಲಿ ಪುರುಷರ ನಿಲುವೇ ಅಂತಿಮವಾಗುತ್ತಿರುವುದು ದುರದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದರು. ಕಾನೂನಾತ್ಮಕವಾಗಿ ಮಹಿಳೆಗೆ ಸಾಕಷ್ಟು ರಕ್ಷಣಾ ಕವಚವಿದ್ದರೂ, ಮಹಿಳೆಯರ ವಿರುದ್ಧ ಮನೆಯಲ್ಲಾಗುವ ದೌರ್ಜನ್ಯ, ಕೆಲಸದ ಜಾಗಗಳಲ್ಲಾಗುವ ದೌರ್ಜನ್ಯಗಳ ವಿರುದ್ಧ ಕಾನೂನು ಮೊರೆ ಹೋಗಿದ್ದರೆ ಎಷ್ಟೋ ಪುರುಷರನ್ನು ಜೈಲಿಗೆ ಹಾಕಬಹುದಿತ್ತು. ಆದರೆ ಆಕೆ ಮೌನವಾಗಿಯೇ ಎಲ್ಲವನ್ನೂ ಸಹಿಸಿಕೊಂಡು ಕಾನೂನಿನ ಸದುಪಯೋಗ ಪಡೆಯದೆ ಯಾರ ಮೇಲೂ ಸೇಡು ತೀರಿಸಿಕೊಳ್ಳದೆ ಉಳಿದುಕೊಂಡಿರುವ ಬೆಳವಣಿಗೆಯನ್ನು ಗಮನಿಸಿದರೆ, ಆಕೆಯ ಹೃದಯ ವೈಶಾಲ್ಯತೆ ಎಷ್ಟಿದೆ ಎಂಬುದನ್ನು ಮನಗಾಣಬಹುದಾಗಿದೆ. ಅದನ್ನು ಪುರುಷರು ಅರ್ಥಮಾಡಿಕೊಳ್ಳಲು ವಿಫ‌ಲರಾಗಿರುವುದೇ ಮಹಿಳೆಯರ ಮೇಲಿನ ದೌರ್ಜನ್ಯ ಮುಂದುವರೆಯಲು ಕಾರಣವಾಗಿದೆ ಎಂದರು.

ಕೊಡಗು ಚಾನಲ್‌ನ ಕಾರ್ಯಕ್ರಮ ನಿರ್ದೇಶಕ ಜೈರಸ್‌ ಥಾಮಸ್‌ ಅಲೆಕ್ಸಾಂಡರ್‌ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರೆ, ಪ್ರಾಂಶುಪಾಲೆ ಡಾ|  ಪಾರ್ವತಿ ಅಪ್ಪಯ್ಯ ಮತ್ತು ಕಾಲೇಜಿನ ಕೌನ್ಸೆಲಿಂಗ್‌ ಘಟಕದ ಸಂಯೋಜಕರು ಹಾಗೂ ಇಂಗ್ಲೀಷ್‌ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಡಾ| ನಯನಾ ಕಶ್ಯಪ್‌ ಅವರು ಒಟ್ಟಾರೆ ಸಂವಾದದ ನೇತೃತ್ವ ವಹಿಸಿದರು. 

ಕಾಲೇಜಿನ ಕೌನ್ಸಿಲರ್‌ ಆರತಿ ಸೋಮಯ್ಯ ಸಂವಾದಕ್ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬೋಧಕ ಬೋಧಕೇತರ ಸಿಬಂದಿ ಸೇರಿದಂತೆ ಗ್ರಂಥಪಾಲಕರಾದ ವಿಜಯಲತಾ, ಉಪನ್ಯಾಸಕರಾದ ಡಾ| ಗಾಯತ್ರಿದೇವಿ, ಡಾ| ಸೌಮ್ಯಾ, ಡಾ| ಗಾಯತ್ರಿ ಎ ಎನ್‌, ಕಾಂಚನ, ಕ್ಷೇತ್ರ, ಕೃತಿಕಾ, ತೇಜಸ್ವಿ, ಅಶ್ವಿ‌ನಿ, ನಿವ್ಯಾ, ಅಪೂರ್ವ, ರಕ್ಷಿತಾ, ಸಚಿನ್‌, ಶ್ರೀನಿವಾಸ್‌, ಕಚೇರಿ ಸಿಬಂದಿ ಚಂದ್ರಾವತಿ, ಭಾರತಿ ಮತ್ತು ದ್ವಿತೀಯ ಎಂ. ಎಸ್‌. ಸಿ. ಭೌತಶಾಸ್ತ್ರ ವಿದ್ಯಾರ್ಥಿ ಶ್ರೀನಿ ಅವರು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. 

ಕುಮಾರಿಯರಾದ ನೂರ್‌ ಹುದಾ ಮತ್ತು ನೂರ್‌ ಸಭಾ ತಯಾರಿಸಿದ ಮಹಿಳಾ ಸಾಧಕಿಯರ ಕುರಿತ ಅನ್ಸಂಗ್‌ ಶೀರೋಸ್‌ ಎಂಬ ಕಿರುಚಿತ್ರವನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಡೀನಾ ಮತ್ತು ಕಾಂಚನ ನಿರೂಪಿಸಿದರು.  

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.