ಪೊಲೀಸ್‌ ಪ್ರಸ್ತಾವನೆ, ತಾಂತ್ರಿಕ ತಜ್ಞರ ವರದಿ ಕಡತಕ್ಕೆ  ಸೀಮಿತವೇ?


Team Udayavani, Apr 9, 2018, 6:40 AM IST

040418Astro03.jpg

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಜಿಲ್ಲೆಯ ಅಪಾಯಕಾರಿ ಜಂಕ್ಷನ್‌ಗಳ ಬಗ್ಗೆ ಮಣಿಪಾಲದ ಖಾಸಗಿ ಎಂಜಿನಿಯರಿಂಗ್‌ ಸಂಸ್ಥೆಯ ತಜ್ಞರ ಮೂಲ ಸಿದ್ಧಪಡಿಸಿದ ವರದಿ ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವರದಿ ಕಡತಕ್ಕೆ ಮಾತ್ರ ಸೀಮಿತವಾಗುವುದೇ? ಎನ್ನುವ ಜಿಜ್ಞಾಸೆ ಹುಟ್ಟಿಕೊಂಡಿದೆ.

ಹೆದ್ದಾರಿ ಪ್ರಾಧಿಕಾರ ಮೂಲಕ ಖಾಸಗಿ ಸಂಸ್ಥೆ ಗುತ್ತಿಗೆ ವಹಿಸಿ ಕಾಮಗಾರಿ ನಡೆಸುತ್ತಿದೆ. ಜಂಕ್ಷನ್‌ಗಳಲ್ಲಿ ನಡೆದ ಕಾಮಗಾರಿಗಳು ವಾಹನ ಸವಾರರಿಗೆ, ಪಾದಚಾರಿಗಳಿಗೆ ಕಂಟಕವಾಗಿದೆ ಎನ್ನುವುದನ್ನು 24 ಪುಟಗಳ ವರದಿಯಲ್ಲಿ ಹೇಳಲಾಗಿದೆ. ಈ ವರದಿಯಲ್ಲಿನ ಅಂಶಗಳನ್ನು ಪರಿಗಣಿಸಿ ಜಂಕ್ಷನ್‌ಗಳಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಬೇಕು ಎನ್ನುವುದು ಪೊಲೀಸ್‌ ಇಲಾಖೆಯ ಇರಾದೆ.
 
ಹೆಚ್ಚಿದ ವಾಹನದೊತ್ತಡ
ಸಂತೆಕಟ್ಟೆ, ಅಂಬಲಪಾಡಿ, ಕಟಪಾಡಿ, ಉದ್ಯಾವರ ಈ ನಾಲ್ಕು ಜಂಕ್ಷನ್‌ಗಳಲ್ಲಿ ಹೆಚ್ಚಿನ ವಾಹನಗಳು ಒಳ ರಸ್ತೆಗಳಿಂದ ಬಂದು ರಾ.ಹೆ.ಯನ್ನು ಸಂಪರ್ಕಿಸುತ್ತವೆ. ಇಲ್ಲಿ ವಾಹನ ದಟ್ಟಣೆ ಬಹಳ ಹೆಚ್ಚಿದೆ. ದಿನವಿಡೀ ಪೊಲೀಸರು ಜಂಕ್ಷನ್‌ಗಳಲ್ಲಿ ಕಾರ್ಯನಿರ್ವಹಿಸಬೇಕಾದ ಅನಿವಾರ್ಯವಿದೆ.  ಒಂದು ವೇಳೆ ಇಲ್ಲಿ ಪೊಲೀಸರು ಇಲ್ಲದಿದ್ದರೆ ಟ್ರಾಫಿಕ್‌ ಜಾಂ ಉಂಟಾಗುತ್ತದೆ.

ಸರ್ವಿಸ್‌ ರಸ್ತೆ ಸದುಪಯೋಗವಾಗಲಿ
ಪ್ರಮುಖ ಜಂಕ್ಷನ್‌ಗಳಲ್ಲಿ ಸರ್ವಿಸ್‌ ರಸ್ತೆಗಳನ್ನು ಮಾಡಲಾಗಿದೆ. ಆದರೆ ಈ ರಸ್ತೆಗಳು ಸೂಕ್ತ ಉದ್ದೇಶಕ್ಕೆ ಬಳಕೆಯೇ ಆಗುತ್ತಿಲ್ಲ. ರಸ್ತೆಯಲ್ಲಿ  ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತಿದೆ. ಆಟೋ, ಟ್ಯಾಕ್ಸಿ ನಿಲ್ದಾಣವಾಗಿ, ಅಂಗಡಿ ಮಾಲಕರು, ಗ್ರಾಹಕರ ವಾಹನಗಳ ಪಾರ್ಕಿಂಗ್‌  ತೆಕ್ಕಟ್ಟೆ, ಸಾಲಿಗ್ರಾಮ, ಉದ್ಯಾವರ, ಪಾಂಗಾಳದಲ್ಲಿ ಒಳರಸ್ತೆಗಳು ನೇರವಾಗಿ ಹೆದ್ದಾರಿಯನ್ನು ಸಂಪರ್ಕಿಸುತ್ತವೆ. ಆದರೆ ಇಲ್ಲಿ ಸರ್ವಿಸ್‌ ರಸ್ತೆಗಳೇ ಆಗಿಲ್ಲ. ಇಲ್ಲಿಯೂ ಸರ್ವೀಸ್‌ ರಸ್ತೆ ಮಾಡಬೇಕು ಎನ್ನುವ ಅಂಶ ವರದಿಯಲ್ಲಿದೆ.

ವರದಿಯ ಅನ್ವಯ ಹೀಗೆ ಮಾಡಬೇಕು
–  ಬಸ್‌ ನಿಲುಗಡೆಗೆ ಬಸ್‌ ಬೇ ನಿರ್ಮಿಸಬೇಕು.
– ಜಂಕ್ಷನ್‌ಗೆ ಸಮೀಪವಿರುವ ಬಸ್‌ ನಿಲ್ದಾಣಗಳನ್ನು 100 ಮೀ. ದೂರಕ್ಕೆ ಸ್ಥಳಾಂತರಿಸಬೇಕು.
–  ಜೀಬ್ರಾ ಕ್ರಾಸ್‌ ಮತ್ತು ದೊಡ್ಡದಾದ ಸೂಚನಾ ಫ‌ಲಕ ಅತ್ಯಗತ್ಯ.
–  ಜಂಕ್ಷನ್‌ ಇರುವಲ್ಲಿ ಸರ್ವಿಸ್‌ ರಸ್ತೆಗಳು ಅಗತ್ಯವಾಗಿ ಆಗಬೇಕು.
–  ನಿರ್ಮಾಣವಾಗಿರುವ ಸರ್ವೀಸ್‌ ರಸ್ತೆಗಳಲ್ಲಿ ವಾಹನ ಪಾರ್ಕ್‌ ತೆರವು ಮಾಡಬೇಕು.
–  ಜಂಕ್ಷನ್‌ ರಸ್ತೆಯಲ್ಲಿ ರಾತ್ರಿ ವೇಳೆ ಹೆಚ್ಚು ಬೆಳಕಿನ ವ್ಯವಸ್ಥೆ ಮಾಡಬೇಕು.

ಡೇಂಜರಸ್‌ ಜಂಕ್ಷನ್‌ಗಳು
ಪಡುಬಿದ್ರಿ, ಕಾಪು, ಇನ್ನಂಜೆ (ಪಾಂಗಾಳ), ಕಟಪಾಡಿ, ಉದ್ಯಾವರ, ಅಂಬಲಪಾಡಿ, ಉಡುಪಿ ಕರಾವಳಿ, ಬಾಳಿಗಾ ಫಿಶ್‌ನೆಟ್‌ ಕ್ರಾಸ್‌, ಆಶೀರ್ವಾದ್‌, ಸಂತೆ ಕಟ್ಟೆ, ಮಹೇಶ್‌ ಆಸ್ಪತ್ರೆ ಕ್ರಾಸ್‌, ಬ್ರಹ್ಮಾವರ ಆಕಾಶವಾಣಿ, ಸಾಲಿ ಗ್ರಾಮ-ಗುಂಡ್ಮಿ, ಗುರು ನರಸಿಂಹ ಟೆಂಪಲ್‌, ತೆಕ್ಕಟ್ಟೆ, ಜಂಕ್ಷನ್‌ಗಳು ಅಪಾಯಕಾರಿಯಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

3 ವರ್ಷ- 402 ಸಾವು
ರಾ.ಹೆ. 66ರಲ್ಲಿ  ಹೆಜಮಾಡಿ ಯಿಂದ ತೆಕ್ಕಟ್ಟೆ ವರೆಗೆ 2015-17 ಅವಧಿಯಲ್ಲಿ  1,630 ಅಪಘಾತಗಳು ಸಂಭವಿಸಿವೆ. ಇದರಲ್ಲಿ  402 ಮಂದಿ ಮೃತಪಟ್ಟರೆ, 368 ಮಂದಿ ಗಂಭೀರ ಗಾಯ ಗೊಂಡವರೂ ಸೇರಿ 1,803 ಮಂದಿ ಗಾಯಗೊಂಡಿದ್ದಾರೆ ಎಂದು ಅಂಕಿ ಅಂಶಗಳು ಹೇಳುತ್ತವೆ.

ಸ್ಕೈವಾಕರ್‌ ಪ್ರಸ್ತಾವನೆಯೂ ನನೆಗುದಿಗೆ?
ರಾ.ಹೆ. 66ರ ಹೆಜಮಾಡಿಯಿಂದ ಬೈಂದೂರಿನವರೆಗಿನ ವರದಿ ತಯಾರಿಸಿ ಒಟ್ಟು 24 ಕಡೆಗಳಲ್ಲಿ ಪಾದಚಾರಿ ಮೇಲ್ಸೇತುವೆ (ಸ್ಕೈವಾಕರ್‌) ನಿರ್ಮಾಣ ಮಾಡಬೇಕು ಎನ್ನುವ ಪ್ರಸ್ತಾವನೆಯನ್ನು ಹಿಂದಿನ ಎಸ್‌ಪಿ ಡಾ| ಸಂಜೀವ ಎಂ. ಪಾಟೀಲ್‌ ಅವರು ಕಳೆದ ಅಕ್ಟೋಬರ್‌ನಲ್ಲಿಯೇ ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಕೆ ಮಾಡಿದ್ದರು. ಆದರೆ ಆ ವರದಿ ಕೂಡ ಕಡತದಲ್ಲಿದೆ. ಜಾರಿಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಫಾಲೋಅಪ್‌ ಮಾಡ್ತೇವೆ
ರಸ್ತೆ ಸುರಕ್ಷೆ ಸಂಬಂಧ ಖಾಸಗಿ ಸಂಸ್ಥೆ ನೀಡಿದ ವರದಿಯನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ.  ಸದ್ಯ ಚುನಾವಣೆ ಒತ್ತಡಗಳಿವೆ. ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿಕೊಂಡು ರಾ.ಹೆ. ಪ್ರಾಧಿಕಾರದ ಅಧಿಕಾರಿಗಳ ಸಭೆ ಕರೆದು ಫಾಲೋ ಅಪ್‌ ಮಾಡಲಾಗುವುದು.
-ಲಕ್ಷ್ಮಣ ಬ. ನಿಂಬರಗಿ,  
ಉಡುಪಿ ಎಸ್‌ಪಿ

ಚಿತ್ರ: ಆಸ್ಟ್ರೋ ಮೋಹನ್‌

– ಚೇತನ್‌ ಪಡುಬಿದ್ರಿ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.