ಜಯದೇವ ವೃತ್ತದ ಮೇಲ್ಸೇತುವೆಗೆ ಜೀವದಾನ


Team Udayavani, Apr 10, 2018, 12:21 PM IST

jayadeva.jpg

ಬೆಂಗಳೂರು: ವಿಧಾನಸಭಾ ಚುನಾವಣೆಯಿಂದ ಜಯದೇವ ವೃತ್ತದ ಮೇಲ್ಸೇತುವೆಗೆ ಜೀವದಾನ ಸಿಕ್ಕಿದೆ! “ನಮ್ಮ ಮೆಟ್ರೋ’ ಎರಡನೇ ಹಂತದ ಯೋಜನೆಗಾಗಿ ಜಯದೇವ ಫ್ಲೈಓವರ್‌ ನೆಲಸಮಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ನಿರ್ಧರಿಸಿತ್ತು. ಆದರೆ, ಚುನಾವಣೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಇದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಫ್ಲೈಓವರ್‌ ಕೆಡವಲು ಈ ಹಿಂದೆಯೇ ಸಂಚಾರ ಪೊಲೀಸರ ಅನುಮತಿ ದೊರಕಿತ್ತು. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗವನ್ನೂ ರೂಪಿಸಲಾಗಿತ್ತು. ಅಲ್ಲದೆ, ಹಿಂದೂಸ್ತಾನ್‌ ಕನ್‌ಸ್ಟ್ರಕ್ಷನ್‌ ಕಂಪನಿ (ಎಚ್‌ಸಿಸಿ) ಮತ್ತು ಯುಆರ್‌ಸಿ ಕನ್‌ಸ್ಟ್ರಕ್ಷನ್‌ಗೆ ಟೆಂಡರ್‌ ನೀಡಲಾಗಿತ್ತು. ಸಿವಿಲ್‌ ಕಾಮಗಾರಿಯ ಯೋಜನಾ ವೆಚ್ಚ 797.29 ಕೋಟಿ ರೂ. ಆಗಿದೆ. ಕಾಮಗಾರಿ ದಿನಾಂಕ ನಿಗದಿ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಚುನಾವಣೆ ಘೋಷಣೆ ಆಗಿದ್ದರಿಂದ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಂಜರಿಕೆ: ನಗರದ ಅತಿಹೆಚ್ಚು ವಾಹನದಟ್ಟಣೆ ಇರುವ ಮಾರ್ಗಗಳಲ್ಲಿ ಜಯದೇವ ವೃತ್ತ ಕೂಡ ಒಂದು. ಇಲ್ಲಿ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಚುನಾವಣೆ ಹೊಸ್ತಿಲಲ್ಲಿ ಇರುವಾಗ ಮೇಲ್ಸೇತುವೆ ನೆಲಸಮಗೊಳಿಸಿ, ಜನರಿಗೆ ಕಿರಿಕಿರಿ ಉಂಟುಮಾಡುವುದರ ಜತೆಗೆ “ಕಪ್ಪುಚುಕ್ಕೆ’ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಿಂದೆಸರಿಯಲಾಗಿದೆ ಎಂದು ಬಿಎಂಆರ್‌ಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಶಕದ ಹಿಂದಷ್ಟೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸುಮಾರು 21 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಈ ಮೇಲ್ಸೇತುವೆಯು ಬನ್ನೇರುಘಟ್ಟ ಮಾರ್ಗದ ಸಿಗ್ನಲ್‌ ಮುಕ್ತ ಸಂಚಾರ ಸೇವೆ ಒದಗಿಸುತ್ತಿದೆ. 

ಹಿನ್ನೆಲೆ: ಜಯದೇವ ಬಳಿಯ 8 ಕಿ.ಮೀ. ಮೆಟ್ರೋ ಮಾರ್ಗವು ಜಯದೇವ ಆಸ್ಪತ್ರೆ ಆವರಣದಲ್ಲಿ ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿತ್ತು. ಇದಕ್ಕೆ ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿತು. ಪರಿಣಾಮ ಆಸ್ಪತ್ರೆಯ ವಿರುದ್ಧ ದಿಕ್ಕಿನಲ್ಲಿರುವ ಸ್ಥಳಕ್ಕೆ ವರ್ಗಾವಣೆಗೊಂಡಿತ್ತು. ಇದಕ್ಕೂ ವಾಣಿಜ್ಯ ಕಟ್ಟಡಗಳು ಹಾಗೂ ಹಿರಿಯ ನಾಗರಿಕರ ಮನೆಗಳು ಸೇರಿದಂತೆ ಸುಮಾರು 90ಕ್ಕೂ ಹೆಚ್ಚು ಮನೆಗಳು ನೆಲಸಮಗೊಳ್ಳುತ್ತಿದ್ದವು. ಈ ಬದಲಾವಣೆಯನ್ನು ಖಂಡಿಸಿ ಜಯದೇವ ಇಂಟರ್‌ಚೇಂಜ್‌ ಮೆಟ್ರೋ ಸಂತ್ರಸ್ತರ ವೇದಿಕೆ ವಿರೋಧ ವ್ಯಕ್ತಪಡಿಸಿತ್ತು.

ಎತ್ತರಿಸಿದ ಮಾರ್ಗದಿಂದ ನಿವಾಸಿಗಳಿಗೆ ತೊಂದರೆಯಾಗಲಿದ್ದು, ಈ ಮಾರ್ಗವನ್ನು ಸುರಂಗ ಮಾರ್ಗದಲ್ಲಿ ಕೊಂಡೊಯ್ಯಬೇಕು ಎಂದೂ ವೇದಿಕೆ ಆಗ್ರಹಿಸಿತ್ತು.  ಆದರೆ, ಸುರಂಗ ಮಾರ್ಗ ನಿರ್ಮಾಣ ವೆಚ್ಚ ದುಪ್ಪಟ್ಟು ಆಗಲಿದೆ. ಈ ಹಿನ್ನೆಲೆಯಲ್ಲಿ ಎರಡೂ ಮಾರ್ಗಗಳನ್ನು ಕೈಬಿಟ್ಟು, ರಸ್ತೆ ಮಧ್ಯದಿಂದ ಮಾರ್ಗ ನಿರ್ಮಾಣಕ್ಕೆ ನಿಗಮ ನಿರ್ಧರಿಸಿತು. ಇದರಿಂದ ಕಟ್ಟಡಗಳನ್ನು ಕೆಡಹುವುದು ತಪ್ಪಲಿದೆ. ಈ ಕಾಮಗಾರಿಯನ್ನು 36 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದೆ. 

ಏನೇನು ಬರುತ್ತೆ?: ಇಲ್ಲಿ ಮೂರು ಗ್ರೇಡ್‌ ಸೆಪರೇಟರ್‌ಗಳು ಹಾಗೂ ಎರಡು ಮೆಟ್ರೋ ಮಾರ್ಗಗಳನ್ನು ಒಳಗೊಂಡ ಐದು ಹಂತಗಳ ಸಂಚಾರ ವ್ಯವಸ್ಥೆ ಬರಲಿದೆ. ಒಂದು ಇಂಟರ್‌ಚೇಂಜ್‌ ಮೆಟ್ರೋ ನಿಲ್ದಾಣವೂ ಇಲ್ಲಿ ನಿರ್ಮಾಣಗೊಳ್ಳಲಿದೆ. ಮೇಲ್ಸೇತುವೆಯನ್ನು ನೆಲಸಮಗೊಳಿಸಲಾಗುತ್ತದೆ. ಆದರೆ, ಈಗಿರುವ ಕೆಳಸೇತುವೆ ಹಾಗೆಯೇ ಉಳಿಸಿಕೊಳ್ಳಲಾಗುವುದು.

ಡೇರಿ ವೃತ್ತದಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಸಂಪರ್ಕಿಸುವ ಬನ್ನೇರುಘಟ್ಟ ರಸ್ತೆಯಲ್ಲಿರುವ ಈ ಕೆಳಸೇತುವೆ ಮೊದಲ ಹಂತದಲ್ಲಿ ಇರಲಿದೆ. ಕೆಳಸೇತುವೆಯ ಮೇಲೆ ನೆಲಮಟ್ಟದಲ್ಲಿ ಎರಡೂ ದಿಕ್ಕುಗಳಲ್ಲಿ ರಸ್ತೆ ನಿರ್ಮಿಸಲಾಗುತ್ತದೆ. ಅವು ಎರಡನೇ ಹಂತದಲ್ಲಿ ಬರಲಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.