ಜಲಮಂಡಳಿಗಿರುವ ನೀರು ಜನರಿಗಿಲ್ಲ!


Team Udayavani, Apr 10, 2018, 12:22 PM IST

jalamandali.jpg

ತಿಪ್ಪಗೊಂಡನಳ್ಳಿ ಕೆರೆ ನೀರು ಖಾಲಿಯಾಯ್ತು. ಹೆಸರಘಟ್ಟ ಕೆರೆ ಕೂಡ ಬರಿದಾಯ್ತು. ಕಡೆಗೆ ಬೆಂಗಳೂರಿಗರ ದಾಹ ತೀರಿಸಲು ಬಂದವಳು ಕಾವೇರಮ್ಮ. ದಿನೇ ದಿನೆ ಬೆಂಗಳೂರ ವ್ಯಾಪ್ತಿ ಹಿಗ್ಗುತ್ತಿದೆ. ಅತ್ತ ಹೂಳು ತುಂಬಿ ಕಾವೇರಿಯ ಒಡಲ (ಕೆಆರ್‌ಎಸ್‌) ಗಾತ್ರ ಕುಗ್ಗುತ್ತಿದೆ. ಹೀಗಾಗಿ ಬೇಸಿಗೆ ಬಂತೆಂದರೆ, ಮನೆಯ ಕೊಳಾಯಿಗೆ ಕಾವೇರಿ ನೀರು ಬರುವುದೂ ವಿರಳ.

ಎರಡು ದಿನಕ್ಕೊಮ್ಮೆ ಬರುತ್ತಿದ್ದ ನೀರು ಬೇಸಿಗೆಯಲ್ಲಿ ವಾರಕ್ಕೊಮ್ಮೆ ಬಂದರೆ ಪುಣ್ಯ. ಇದು ಪ್ರತಿ ವರ್ಷದ ಬವಣೆ. ಈಗ ಮತ್ತೂಂದು ಬೇಸಿಗೆ ಬಂದಿದೆ. ಯಥಾಪ್ರಕಾರ “ಈ ಬೇಸಿಗೆಯಲ್ಲಿ ನೀರಿಗೇನೂ ತೊಂದರೆಯಿಲ್ಲ’ ಎಂದು ಬೆಂಗಳೂರು ಜಲಮಂಡಳಿ ಹೇಳಿದೆ. ಆದರೆ, ವಾಸ್ತವ ಸ್ಥಿತಿ ಜಲಮಂಡಳಿ ಹೇಳಿಕೆಗೆ ವ್ಯತಿರಿಕ್ತವಾಗಿದೆ.

ಬೆಂಗಳೂರು: ಬೇಸಿಗೆ ಮತ್ತು ನೀರಿನ ಬರಕ್ಕೆ ಅವಿನಾಭಾವ ಬಂಧ. ಮಳೆಗಾಲದಲ್ಲಿ ವರುಣ ಎಷ್ಟೇ ದೊಡ್ಡಮಟ್ಟದಲ್ಲಿ ಕೃಪೆ ತೋರಿದರೂ ಬೇಸಿಗೆಯಲ್ಲಿ “ನೀರಿಲ್ಲ’ವೆಂಬ ಕೂಗು ಕೇಳೇ ಕೇಳುತ್ತದೆ. ಕಾರಣ ಬೆಂಗಳೂರು ಬೆಳೆಯುತ್ತಲಿದೆ. ನೀರು ಬಳಕೆದಾರರ ಸಂಖ್ಯೆ ಕೂಡ ಹೆಚ್ಚಿದೆ. ಹೀಗಾಗಿ ಕಾವೇರಿ ಸಂಪರ್ಕವಿರುವ ಹಳೇ ಬೆಂಗಳೂರಿನ ಬಡಾವಣೆಗಳಲ್ಲೂ ನೀರಿನ ಬವಣೆ ಶುರುವಾಗಿದೆ. 

ನಗರದ ಕೇಂದ್ರ ಭಾಗದಲ್ಲೇ ಪರಿಸ್ಥಿತಿ ಹೀಗಿರುವಾಗ ಹೊರ ವಲಯದ ಹಳ್ಳಿಗಳ ಸ್ಥಿತಿ ಏನೆಂದು ಹೇಳಬೇಕಿಲ್ಲ. ಬಿಸಿಲ ದಿನಗಳು ಆರಂಭವಾದಾಗಿನಿಂದಲೇ ಹೊರವಲಯದ ಗ್ರಾಮಸ್ಥರ ನೀರಿನ ಬವಣೆ ಕೂಡ ಶುರುವಾಗಿದೆ. ಒಂದೆಡೆ ಕಾವೇರಿ ನೀರಿಲ್ಲ. ಇನ್ನೊಂದೆಡೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಶಾಸಕರು, ರಾಜಕೀಯ ಮುಖಂಡರು ಕಳಿಸುತ್ತಿದ್ದ ಟ್ಯಾಂಕರ್‌ಗಳೂ ಮನೆ ಬಳಿ ಬರುತ್ತಿಲ್ಲ.

ಹೀಗಾಗಿ ಖಾಸಗಿ ಟ್ಯಾಂಕರ್‌ನವರಿಗೆ ಹಣ ಕೊಟ್ಟು ನೀರು ಖರೀದಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಎಲ್ಲೂ ನೀರು ಸಿಗದಿರುವಾಗ ಟ್ಯಾಂಕರ್‌ಗಳ ಮೊರೆ ಹೋಗುವುದು ಅನಿವಾರ್ಯ. ಜನರ ಈ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡ ಟ್ಯಾಂಕರ್‌ಗಳ ಮಾಲೀಕರು ಇನ್ನಿಲ್ಲದಂತೆ ಸುಲಿಗೆ ಮಾಡುತ್ತಿದ್ದಾರೆ. 350-400 ರೂ. ಇರುತ್ತಿದ್ದ ಂದು ಟ್ಯಾಂಕರ್‌ ನೀರಿನ ಬೆಲೆ ಈಗ 600 ರೂ. ತಲುಪಿದೆ.

ಹೀಗೆ ನಾಗರಿಕರು ಹನಿ ನೀರಿಗೂ ಹಣಕೊಟ್ಟು ಖರೀದಿಸುತ್ತಿದ್ದರೆ, ಜಲಮಂಡಳಿ ಮಾತ್ರ “ನಗರದಲ್ಲಿ ಈ ಬಾರಿ ನೀರಿಗೇನೂ ಕೊರತೆಯಿಲ್ಲ’ ಎಂಬ ತನ್ನ ಹಳೇ ರಾಗ ಮುಂದುವರಿಸಿದೆ. ಪ್ರಮುಖವಾಗಿ ಬಡವರೇ ಇರುವ ಕೊಳೆಗೇರಿಗಳಲ್ಲಿ ಕುಡಿಯುವ ನೀರಿಗಾಗಿ ದಿನಗಟ್ಟಲೇ ಸರತಿಯಲ್ಲಿ ಕಾಯಬೇಕಾದ ಸ್ಥಿತಿಯಿದೆ. ನೀರಿಗಾಗಿ ಕಿತ್ತಾಡುವುದು ಸಾಮಾನ್ಯವಾಗಿದೆ.

ಟ್ಯಾಂಕರ್‌ ಮಾಲೀಕರಿಂದ ಸುಲಿಗೆ: ಕೊಳಾಯಿಗಳಲ್ಲಿ ನೀರು ಬಾರದ ಕಾರಣ ಜನತೆ ಟ್ಯಾಂಕರ್‌ ಮೊರೆ ಹೋಗಿದ್ದಾರೆ. ಆದರೆ ಜನರ ಈ ಅಸಹಾಯಕತೆಯ ಲಾಭ ಪಡೆಯುತ್ತಿರುವ ಟ್ಯಾಂಕರ್‌ ಮಾಲೀಕರು, ಮನಬಂದಂತೆ ದರ ನಿಗದಿ ಮಾಡುತ್ತಿದ್ದಾರೆ. ಇಲ್ಲಿ ಒಂದೊಂದು ಏರಿಯಾಗೆ ಒಂದೊಂದು ದರ ನಿಗದಿ ಮಾಡಲಾಗುತ್ತಿದೆ. ಹಿಂದೆಲ್ಲ ಒಂದು ಟ್ಯಾಂಕರ್‌ಗೆ 300, 400 ರೂ. ಪಡೆಯುತ್ತಿದ್ದವರು,

ಈಗ 600ರಿಂದ 700 ರೂ.ವರೆಗೆ ಸುಲಿಗೆ ಮಾಡುತ್ತಿದ್ದಾರೆ. 2008ರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಸೇರಿದ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಜಲಮಂಡಳಿಯಿಂದ ಹಲವು ಹಳ್ಳಿಗಳಿಗೆ ನೀರಿನ ಪೈಪ್‌ಲೈನ್‌ ಅಳವಡಿಸಿದ್ದರೂ ಈವರೆಗೆ ನೀರು ಹರಿದಿಲ್ಲ. ಕೆಲವೆಡೆ ಕರ್ಸಾರಿ ಬೋರ್‌ವೆಲ್‌ಗ‌ಳು ಕೆಟ್ಟಿದ್ದು, ಜನ ನೀರಿಗಾಗಿ ಅಲೆಯುತ್ತಿದ್ದಾರೆ. ವಿಪರ್ಯಾಸವೆಂದರೆ ನಗರದ ಕೆಲ ಬಡಾವಣೆಗಳ ಜನ ಕೆಲಸಕ್ಕೆ ರಜೆ ಹಾಕಿ ನೀರು ಹಿಡಿಯುತ್ತಿದ್ದಾರೆ.

ಈ ಬಾರಿ ನೀರಿಗೆ ಬರವಿಲ್ಲ!: ಬೆಂಗಳೂರು ಜಲಮಂಡಳಿಯಿಂದ ನೀರು ಸರಬರಾಜು ಮಾಡುತ್ತಿರುವ ಪ್ರದೇಶಗಳಿಗೆ ಬೇಸಿಗೆಯಲ್ಲಿ ಯಾವುದೇ ರೀತಿಯ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಬೆಂಗಳೂರಿಗೆ ಅಗತ್ಯವಾದ ನೀರು ಶೇಖರಿಸಲಾಗಿದ್ದು, ಜೂನ್‌ ತಿಂಗಳವರೆಗೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಜಲಮಂಡಳಿಯ ಪ್ರಧಾನ ಎಂಜಿನಿಯರ್‌ ಕೆಂಪರಾಮಯ್ಯ ಭರವಸೆ ನೀಡಿದ್ದಾರೆ.

ಬಿಬಿಎಂಪಿ ಕ್ರಿಯಾ ಯೋಜನೆ: ಕುಡಿಯುವ ನೀರು ಪೂರೈಕೆ ಹಾಗೂ ಕೊಳವೆ ಬಾವಿ ಕೊರೆಸುವ ಉದ್ದೇಶದಿಂದ ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹಳೆಯ ವಾರ್ಡ್‌ಗಳಿಗೆ 15 ಲಕ್ಷ ರೂ. ಹಾಗೂ ಹೊಸ ವಾರ್ಡ್‌ಗಳಿಗೆ 40 ಲಕ್ಷ ರೂ. ಮೀಸಲಿರಿಸಲಾಗಿದೆ. ಆದರೆ, ಬಜೆಟ್‌ಗೆ ಸರ್ಕಾರದಿಂದ ಅನುಮೋದನೆ ದೊರೆತಿಲ್ಲ. ಆದರೆ, ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿರುವ ಕಡೆ ಟ್ಯಾಂಕರ್‌ ಮೂಲಕ ಇಲ್ಲವೇ ಕೊಳವೆ ಬಾವಿ ಕೊರೆಸುವಂತೆ ಬಿಬಿಎಂಪಿ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಜಲಮಂಡಳಿ ಕ್ರಿಯಾ ಯೋಜನೆ: ಕಾವೇರಿ ಎಲ್ಲ ಹಂತಗಳಿಂದ ನಗರಕ್ಕೆ ನಿತ್ಯ 1400 ದಶಲಕ್ಷ ಲೀಟರ್‌ ನೀರು ಪೂರೈಕೆಯಾಗುತ್ತಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳಿಗೆ ಮಂಡಳಿಯ 68 ಟ್ಯಾಂಕರ್‌ ಮೂಲಕ ನೀರು ಪೂರೈಸಲು ತೀರ್ಮಾನಿಸಿದೆ. ಇದರೊಂದಿಗೆ ನೀರು ಸರಬರಾಜು ಮೇಲ್ವಿಚಾರಣೆಗಾಗಿ ನೋಡಲ್‌ ಅಧಿಕಾರಿಗಳನ್ನು ನೇಮಿಸಿದ್ದು, ಜಲಮಂಡಳಿ ಬೋರ್‌ವೆಲ್‌ಗ‌ಳನ್ನು ಸುಸ್ಥಿತಿಯಲ್ಲಿರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಉದಯವಾಣಿ ಕಾಳಜಿ: ನಗರದ ವಿವಿಧ ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆ ಸ್ಥಿತಿಗತಿ, ಸ್ಥಳೀಯರ ಸಮಸ್ಯೆ ಹಾಗೂ ಜಲಮಂಡಳಿ, ಬಿಬಿಎಂಪಿ ವತಿಯಿಂದ ಕೈಗೊಂಡಿರುವ ಕ್ರಮಗಳ ಕುರಿತು ಬೆಳಕು ಚೆಲ್ಲುವ ಉದ್ದೇಶದಿಂದ “ಉದಯವಾಣಿ’ ಇಂದಿನಿಂದ ಸರಣಿ ವರದಿ ಪ್ರಕಟಿಸಲಿದೆ. ಸಾರ್ವಜನಿಕರು ಸಹ ತಮ್ಮ ಭಾಗಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಛಾಯಾಚಿತ್ರ ಸಹಿತ ಮಾಹಿತಿ ಕಳುಹಿಸಬಹುದು.

ನೀರಿನ ಪ್ರಾಬ್ಲಿಂ ನಮಗೆ ತಿಳಿಸಿ: ನಿಮ್ಮ ಏರಿಯಾದಲ್ಲೂ ನೀರಿಗೆ ಬರವೇ? ಜಲಮಂಡಳಿ ಕೊಳಾಯಿಗಳಲ್ಲಿ ನೀರು ಬರುತ್ತಿಲ್ಲವೇ? ಕುಡಿಯುವ ನೀರಿಗಾಗಿ ಗಂಟೆಗಟ್ಟಲೇ ಕ್ಯೂ ನಿಲ್ಲುತ್ತಿದ್ದೀರಾ? ಟ್ಯಾಂಕರ್‌ನವರು ಸುಲಿಗೆ ಮಾಡುತ್ತಿದ್ದಾರಾ? ನಿಮ್ಮ ಉತ್ತರ ಹೌದು ಎಂದಾಗಿದ್ದರೆ ಕೂಡಲೇ ನಿಮ್ಮೇರಿಯಾದಲ್ಲಿನ ನೀರಿನ ಸಮಸ್ಯೆ ಕುರಿತು “ಉದಯವಾಣಿ’ ವಾಟ್ಸ್‌ಆ್ಯಪ್‌ ಸಂಖ್ಯೆಗೆ ಚಿತ್ರ ಸಹಿತ ಮಾಹಿತಿ ಕಳಿಸಿ.

ವಾಟ್ಸ್‌ಆ್ಯಪ್‌ ಸಂಖ್ಯೆ: 88611 96369

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.