ಪ್ರೊ| ಡಾ| ಎಂ.ಪಿ. ಪೈ ವಿಶೇಷ ಅಂಚೆ ಕವರ್‌ ಬಿಡುಗಡೆ


Team Udayavani, Apr 11, 2018, 9:22 AM IST

ANCHE-COVER.jpg

ಮಂಗಳೂರು: ಮಂಗಳೂರಿನ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿನ ಅಭಿವೃದ್ಧಿಯ ರೂವಾರಿ ಡಾ| ಪ್ರೊ| ಎಂ.ಪಿ. ಪೈ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅಂಚೆ ಇಲಾಖೆ ಹೊರತಂದಿರುವ ವಿಶೇಷ ಅಂಚೆ ಕವರನ್ನು ಮಂಗಳವಾರ ನಗರದ ಪಾಂಡೇಶ್ವರದ ಪ್ರಧಾನ ಅಂಚೆ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು. 

ಮಂಗಳೂರು ಅಂಚೆ ಕಚೇರಿಗಳ ಸೀನಿಯರ್‌ ಸೂಪರಿಂಟೆಂಡೆಂಟ್‌ ಎಂ. ಜಗದೀಶ್‌ ಪೈ ಅವರು ವಿಶೇಷ ಅಂಚೆ ಕವರನ್ನು ಬಿಡುಗಡೆ ಮಾಡಿದರು. ಮಾಹೆ ವಿಶ್ರಾಂತ ಉಪಕುಲಪತಿ ಡಾ| ಬಿ.ಎಂ. ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು.

ಮಂಗಳೂರು ಪಾಂಡುರಂಗ ಪೈ ಅವರು ಡಾ| ಎಂ.ಪಿ. ಪೈ ಎಂದೇ ಪ್ರಸಿದ್ಧರಾಗಿದ್ದರು. ಅವರು ಕರಾವಳಿ ಕಂಡ ಅತ್ಯುತ್ತಮ ತಜ್ಞರಾಗಿದ್ದು, ಅತ್ಯುತ್ತಮ ಮಾನವೀಯ ಗುಣಗಳ ಮೂಲಕವೂ ಜನಮಾತಾಗಿದ್ದರು. ಕೆಎಂಸಿಯಲ್ಲಿ ಜನರಲ್‌ ಸರ್ಜರಿ ವಿಭಾಗದಲ್ಲಿ ಅವರು ಆರಂಭಿಸಿದ್ದ ಸ್ನಾತ ಕೋತ್ತರ ಪದವಿ ವಿಭಾಗವು ಇದುವರೆಗೆ 500ಕ್ಕೂ ಮಿಕ್ಕಿ ಶಸ್ತ್ರ ಚಿಕಿತ್ಸಾ ತಜ್ಞ ವೈದ್ಯರನ್ನು ತಯಾರಿಸಿ ಸಮಾಜಕ್ಕೆ ನೀಡಿದೆ ಎಂದವರು ಹೇಳಿದರು.

ಅನನ್ಯ ಕೊಡುಗೆ
ಮುಖ್ಯ ಅತಿಥಿ ಕೆಎಂಸಿ ಡೀನ್‌ ಡಾ| ಎಂ.ವಿ. ಪ್ರಭು ಮಾತನಾಡಿ, ಲೈಟ್‌ಹೌಸ್‌ ಹಿಲ್‌ ರಸ್ತೆಯ ಬಳಿ ಇರುವ ಬೃಹತ್‌ ಕೆಎಂಸಿ ಕಟ್ಟಡ ಡಾ| ಎಂ.ಪಿ. ಪೈ ಅವರ ಕೊಡುಗೆ. ಸಂಶೋಧನಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅವರು ಈ ಕಟ್ಟಡದ ಮೇಲ್ಭಾಗದ ಮಾಳಿಗೆಯಲ್ಲಿ ಸಂಶೋಧನಾ ಲ್ಯಾಬ್‌ ಆರಂಭಿಸಿದ್ದರು. ಅವರ ಬೋಧನೆ ಮಂಗಳೂರಿಗೆ ಮಾತ್ರ ಸೀಮಿತವಾಗದೆ ಮಣಿ ಪಾಲ ಕೆಎಂಸಿಗೂ ವಿಸ್ತರಿಸಿತ್ತು. ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡುವ ಘಟಕವನ್ನು ಮಣಿಪಾಲದಲ್ಲಿ ಆರಂಭಿಸಿದ್ದರು. ಕೆಎಂಸಿಯಿಂದ ನಿವೃತ್ತಿ ಹೊಂದಿದ ಬಳಿಕ ಅವರು ಒಮಾನ್‌ಗೆ ತೆರಳಿ ಸಲಾಲಾ ದಲ್ಲಿರುವ ಖಬೂಸ್‌ ಆಸ್ಪತ್ರೆಯಲ್ಲಿ ಕನ್ಸಲ್ಟೆಂಟ್‌ ಸರ್ಜನ್‌ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ಬದುಕಿನ ಕೊನೆಯ ದಿನಗಳನ್ನು ಅವರು ಮಂಗಳೂರಿನಲ್ಲಿ ಕಳೆದಿದ್ದು, ಈ ಸಂದರ್ಭದಲ್ಲಿ ನಗರ ಮತ್ತು ಸುತ್ತಮುತ್ತಲ ಪರಿಸರದಲ್ಲಿ ಶಸ್ತ್ರ ಚಿಕಿತ್ಸೆ ಸಂಬಂಧಿತ ಸಮಸ್ಯೆಗಳಿಗೆ ಸಲಹೆ ನೀಡಿದ್ದರು. 1992 ಆಗಸ್ಟ್‌ 27 ರಂದು ಅವರು ನಿಧನರಾಗಿದ್ದರು. ವೈದ್ಯಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಶ್ಲಾಘನೀಯ ಎಂದರು.

ಅಂಚೆ ಕಚೇರಿಯ ಸೀನಿಯರ್‌ ಪೋಸ್ಟ್‌ ಮಾಸ್ಟರ್‌ ಎಲ್‌.ಪ್ರಕಾಶ್‌ ಉಪಸ್ಥಿತರಿದ್ದರು. ಕೆಎಂಸಿ ಮೂತ್ರಾಂಗ ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಪ್ರಸ್ತಾವನೆ ಗೈದರು. ದಿನೇಶ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.