ಪದ್ಮನಾಭ ರೆಡ್ಡಿ ಸೇರಿ 12 ಮಂದಿ ವಿರುದ್ಧ ಎಫ್ಐಆರ್
Team Udayavani, Apr 11, 2018, 12:14 PM IST
ಬೆಂಗಳೂರು: ಕೋಲಾರದ ನರಸಾಪುರ ಹೋಬಳಿಯ ಭೈರಸಂದ್ರದಿಂದ 62 ಅಡಿ ಏಕಶಿಲಾ ಹನುಮ ಮೂರ್ತಿ ಹೊತ್ತು ತರುತ್ತಿದ್ದ ವಾಹನವು ಕಾಚರಕನಹಳ್ಳಿಗೆ ಬಂದು ಸೇರಿದೆ. ಆದರೆ, ಅದರ ರವಾನೆಗಾಗಿ ಮೋರಿ ಮುಚ್ಚಿದ್ದ ಹಾಗೂ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಆಯೋಜಕರಾದ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಜಗದೀಶ್ ರೆಡ್ಡಿ, ಎಂ.ಎನ್.ರೆಡ್ಡಿ ಹಾಗೂ ಗೋಪಾಲ ರೆಡ್ಡಿ ಸೇರಿದಂತೆ 12 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಸೋಮವಾರ ಬೆಳಿಗ್ಗೆ ಎಚ್ಬಿಆರ್ ಬಡಾವಣೆ ಪ್ರವೇಶಿಸಿದ್ದ ಮೂರ್ತಿಯನ್ನು ಕೋದಂಡ ರಾಮಸ್ವಾಮಿ ದೇವಾಲಯದ ಮೈದಾನದತ್ತ ತರಲಾಗುತ್ತಿತ್ತು. ಇದಕ್ಕಾಗಿ ರಸ್ತೆಯಲ್ಲಿದ್ದ ವಿಭಜಕಗಳನ್ನು ಒಡೆದು ಹಾಕಲಾಯಿತು. ಜತೆಗೆ ರಸ್ತೆ ಪಕ್ಕದಲ್ಲಿದ್ದ ಮೋರಿಯನ್ನು ಮುಚ್ಚಲಾಯಿತು.
ಇದಕ್ಕೆ ಯಾವುದೇ ಅನುಮತಿಯನ್ನೂ ಆಯೋಜಕರು ಪಡೆದಿರಲಿಲ್ಲ. ಈ ಸಂಬಂಧ ಮಾಹಿತಿ ಪಡೆದು ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿ ಜಗದೀಶ್, ಆಯೋಜಕರ ವರ್ತನೆಯನ್ನು ಪ್ರಶ್ನಿಸಿದರು. ಮೂರ್ತಿ ರವಾನೆ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕಿತ್ತು. ಏಕಾಏಕಿ ಸಾರ್ವಜನಿಕರ ಆಸ್ತಿಗೆ ಧಕ್ಕೆ ಮಾಡುವುದು ಅಪರಾಧ ಎಂದು ಹೇಳಿ ಪ್ರಕರಣ ದಾಖಲಿಸಿದ್ದಾರೆ.
ಮೂರ್ತಿ ಹೊತ್ತ ಲಾರಿಯು 26 ಅಡಿ ಅಗಲವಿದೆ. 750 ಟನ್ ಭಾರವಿದೆ. ಇದನ್ನು ರಸ್ತೆಯಲ್ಲಿ ಸಾಗಿಸುವಾಗ ಸರ್ಕಾರಿ ಜಾಗದಲ್ಲಿ ಅತಿಕ್ರಮವಾಗಿ ಪ್ರವೇಶಿಸಲಾಗಿದೆ. ಅದನ್ನು ಕೇಳಿದ್ದ ಸರ್ಕಾರಿ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಉಪವಿಭಾಗಾಧಿಕಾರಿ ಜಗದೀಶ್ ಅವರೇ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.