ಪ್ರಿಯತಮೆಗಾಗಿ ಪರಪುರುಷರ ವಂಚಿಸಿದವ ಸೆರೆ


Team Udayavani, Apr 11, 2018, 12:14 PM IST

preyasi.jpg

ಬೆಂಗಳೂರು: ತನ್ನ ಪ್ರಿಯತಮೆಗೆ ಉಡುಗೊರೆ ಕೊಡಿಸುವ ಉದ್ದೇಶದಿಂದ ಡೇಟಿಂಗ್‌ ವೆಬ್‌ಸೈಟ್‌ ಮೂಲಕ ಹುಡುಗಿ ಹೆಸರಿನಲ್ಲಿ ಹುಡುಗರನ್ನು ಡೇಟಿಂಗ್‌ಗೆ ಆಹ್ವಾನಿಸಿ ಹಣ ವಸೂಲಿ ಮಾಡುತ್ತಿದ್ದ ವಂಚಕನನ್ನು ಸಿಸಿಬಿ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ವೈಟ್‌ಫೀಲ್ಡ್‌ನ ವಿನಾಯಕ ಲೇಔಟ್‌ ಇಮ್ಮಡಿಹಳ್ಳಿ ಮುಖ್ಯರಸ್ತೆಯ ನಿವಾಸಿ ಸಾಗರ್‌ ರಾವ್‌ (25) ಬಂಧಿತ. ಯುವಕನೊಬ್ಬನಿಗೆ ಈತ 71 ಸಾವಿರ ರೂ. ವಂಚಿಸಿದ ಬಗ್ಗೆ ದಾಖಲಾದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಆತ ಅನೇಕರಿಗೆ ವಂಚಿಸಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡೇಟಿಂಗ್‌ ವೆಬ್‌ಸೈಟ್‌ನಲ್ಲಿ ಯುವತಿಯ ಹೆಸರಿನಲ್ಲಿ ನೊಂದಣಿಯಾಗಿ ನಕಲಿ ಹೆಸರು ಮತ್ತು ನಕಲಿ ಫೋಟೋ ಹಾಕುತ್ತಿದ್ದ ಆರೋಪಿ ಆನ್‌ಲೈನ್‌ನಲ್ಲಿ ಸಂಪರ್ಕಕ್ಕೆ ಬರುವ ಯುವಕರ ಜತೆ ಚಾಟ್‌ ಮಾಡಿ ಡೇಟಿಂಗ್‌ಗೆ ಆಹ್ವಾನಿಸುತ್ತಿದ್ದ. ಇದಕ್ಕೆ ಒಪ್ಪಿದ ಯುವಕರಿಗೆ ಮುಂಗಡ ಹಣ ನೀಡಬೇಕು. ಅನಂತರ ಖಾಸಗಿಯಾಗಿ ಭೇಟಿಯಾಗುತ್ತೇನೆ ಎಂದು ಹೇಳಿ ತನ್ನ ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡಿಕೊಳ್ಳುತ್ತಿದ್ದ.

ಹಣ ಖಾತೆಗೆ ಜಮೆಯಾದ ಬಳಿಕ ಮೊಬೈಲ್‌ ಸ್ವಿಚ್‌ ಆಫ್ ಮಾಡಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಬಿ.ಕಾಂ ಪದವೀಧರನಾಗಿದ್ದು, ನಿರುದ್ಯೋಗಿಯಾಗಿದ್ದಾನೆ. ಸುಲಭವಾಗಿ ಹಣ ಮಾಡುವ ಉದ್ದೇಶದಿಂದ ಈ ಕೃತ್ಯಕ್ಕೆ ಇಳಿದಿದ್ದ. ಫ್ರೀ ಡೇಟಿಂಗ್‌ ಡಾಟ್‌ ಕಾಮ್‌’ ವೆಬ್‌ಸೈಟ್‌ ಹಾಗೂ ಫ್ರೀ ಡೇಟಿಂಗ್‌ ಆ್ಯಪ್‌ ಬಳಕೆ ಮೂಲಕ ವಂಚಿಸುತ್ತಿದ್ದ ಎಂದು ತಿಳಿದುಬಂದಿದೆ.

ಪ್ರಮುಖವಾಗಿ ಉತ್ತರ ಭಾರತದ ಯುವತಿಯರ ಹೆಸರಿನಲ್ಲಿ, ಸುಂದರವಾದ ಯುವತಿಯ ಫೋಟೋ ಹಾಕಿ ಯುವಕರನ್ನು ಆಕರ್ಷಿಸುತ್ತಿದ್ದ. ಹೊಸದಾಗಿ ಡೇಟಿಂಡ್‌ ವೆಬ್‌ಸೈಟಿಗೆ ಬರುವ ಯುವಕರಿಗೆ ಆರಂಭದ ಕೆಲವು ದಿನ ಆನ್‌ಲೈನ್‌ ಚಾಟ್‌ ಮಾಡುತ್ತಿದ್ದ.

ಬಳಿಕ ಸಲುಗೆ ಬೆಳೆಸಿ ಚಾಟ್‌ ಮಾಡುವ ಯುವಕರ ಮೊಬೈಲ್‌ ನಂಬರ್‌ ಪಡೆದು, ವಾಟ್ಸ್‌ ಆ್ಯಪ್‌ ಚಾಟ್‌ ಮಾಡುತ್ತಿದ್ದ. ಫೋನ್‌ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ನೇರವಾಗಿ ಭೇಟಿಯಾದಾಗ ಮಾತ್ರ ಮಾತನಾಡುತ್ತೇನೆ. ಇಲ್ಲದಿದ್ದರೆ ಬರೇ ಚಾಟಿಂಗ್‌ ಸಾಕು ಎಂದು ಹೇಳುತ್ತಿದ್ದ. ಯುವಕರು ಭೇಟಿಗೆ ಒಪ್ಪಿದರೆ ಮೊದಲು ಬ್ಯಾಂಕ್‌ ಖಾತೆಗೆ ಹಣ ಹಾಕಿ ಎಂದು ಹೇಳುತ್ತಿದ್ದ ಅಧಿಕಾರಿಗಳು ತಿಳಿಸಿದ್ದಾರೆ.

ನಾನಾ ಹೆಸರಿನಲ್ಲಿ ವಂಚನೆ: ಶಿಲ್ಪಾ, ಸೋನಿಯಾ ಜೈನ್‌, ಮನೀಷಾ ಜೈನ್‌ ಎಂಬ ನಾನಾ ಹೆಸರುಗಳಿಂದ ವಂಚಿಸುತ್ತಿದ್ದ ಸಾಗರ್‌ ರಾವ್‌, ಅದಕ್ಕೆ ತಕ್ಕಂತೆ ಪ್ರೋಫೈಲ್‌ ಪೋಟೋಗಳನ್ನು ಹಾಕುತ್ತಿದ್ದ. ಯುವತಿಯಂತೆ ನಟಿಸಿ ಇದುವರೆಗೂ ಸುಮಾರು 12 ಯುವಕರಿಗೆ ವಂಚಿಸಿದ್ದಾನೆ. ಇತ್ತೀಚೆಗೆ ಆರೋಪಿ ಯುವಕನೊಬ್ಬನಿಗೆ 71 ಸಾವಿರ ರೂ. ವಂಚಿಸಿದ್ದ. ಈ ಸಂಬಂಧ ದಾಖಲಾದ ದೂರಿನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲವೂ ಐಶಾರಾಮಿ ಗಿಫ್ಟ್ಗಾಗಿ: ಸಾಗರ್‌ರಾವ್‌ ತಾನೂ ಪ್ರೀತಿಸುತ್ತಿದ್ದ ಯುವತಿಗೆ ಐಷಾರಾಮಿ ಉಡುಗೊರೆಗಳನ್ನು ತಂದು ಕೊಡಲು ಈ ರೀತಿ ಮಾಡುತ್ತಿದ್ದ. ಯುವಕರಿಗೆ ವಂಚಿಸಿದ ಹಣವನ್ನು ಬೇರಾವುದಕ್ಕೂ ಬಳಸದೆ ತನ್ನ ಪ್ರಿಯತಮೆಗೆ ಉಡುಗೊರೆ ಕೊಡುವುದಕ್ಕಾಗಿ ಮತ್ತು ಆಕೆಯನ್ನು ಸುತ್ತಾಡಿಸುವುದಕ್ಕಾಗಿಯೇ ಮೀಸಲಿಡುತ್ತಿದ್ದ. ಮಾಲ್‌, ಸಿನಿಮಾ ಎಂದೆಲ್ಲ ಪ್ರಿಯತಮೆಯನ್ನು ಕರೆದೊಯ್ದು ಹಣ ಖರ್ಚು ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಶಿಸಿ ಹೋಗಿದ್ದ ಅಲಸಂದೆ ತಳಿಗೆ ಮರುಜೀವ! ಯಾವ ಜಿಲ್ಲೆಗೆ ಈ ತಳಿ ಸೂಕ್ತ?

ನಶಿಸಿ ಹೋಗಿದ್ದ ಅಲಸಂದೆ ತಳಿಗೆ ಮರುಜೀವ! ಯಾವ ಜಿಲ್ಲೆಗೆ ಈ ತಳಿ ಸೂಕ್ತ?

1-chir

Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್‌ಗೆ ನುಗ್ಗಲು ಮುಂದಾದ ಚಿರತೆ!

City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ

City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್‌!

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

BBMP: ಇನ್ಮುಂದೆ ಸಿಗರೇಟ್‌ ತುಂಡುಗಳ ಪ್ರತ್ಯೇಕ ಸಂಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Savanooru

Savanooru: ಪಿಕಪ್‌-ಬೈಕ್‌ ಅಪಘಾತ: ಸವಾರರಿಗೆ ಗಾಯ

River-Hand-Person

Vitla: ಹೊಳೆಗೆ ಬಿದ್ದ ವೃದ್ಧರೊಬ್ಬರ ರಕ್ಷಿಸಿದ ಯುವಕರು; ಶ್ಲಾಘನೆ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Shooting

World Junior Shooting: ಭಾರತಕ್ಕೆ 24 ಪದಕ, ಅಗ್ರಸ್ಥಾನ

1-crick

Under-19 ದ್ವಿತೀಯ ಟೆಸ್ಟ್‌ : ಬೃಹತ್‌ ಮೊತ್ತದತ್ತ ಭಾರತ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.