ಕಳವಿಗೆ ಪೊಲೀಸರಿಂದಲೇ ಕುಮ್ಮಕ್ಕು!
Team Udayavani, Apr 11, 2018, 12:14 PM IST
ಬೆಂಗಳೂರು: ಪೊಲೀಸರೇ ಕಳ್ಳನೊಂದಿಗೆ ಸೇರಿಕೊಂಡು ಮನೆಗಳವು ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆದರೆ, ಪೊಲೀಸ್ ಪೇದೆಗಳ ಮಾತು ಕೇಳಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ತಮಿಳುನಾಡು ಮೂಲದ ಅನ್ನಪೂರ್ಣೇಶ್ವರಿ ನಗರದ ನಿವಾಸಿ ಆರ್ಮುಗಂ (31) ಬಂಧಿತ. ಈತನ ಕೃತ್ಯಕ್ಕೆ ಸಹಕಾರ ನೀಡಿ ಪಾಲು ಪಡೆಯುತ್ತಿದ್ದ ಅನ್ನಪೂಣೇಶ್ವರಿನಗರ ಠಾಣೆ ಪೇದೆಗಳಾದ ಮಧು (22), ತಿಪ್ಪೇಸ್ವಾಮಿ(45) ಪರಾರಿಯಾಗಿದ್ದು, ಹುಡುಕಾಟ ನಡೆಯುತ್ತಿದೆ. ಆರೋಪಿ ಆರ್ಮುಗಂ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ 50ಕ್ಕೂ ಅಧಿಕ ಮನೆಗಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
2016ರಲ್ಲಿ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಆರ್ಮುಗಂ ಜೈಲು ಸೇರಿದ್ದ. ಆ ವೇಳೆ ಪೇದೆಗಳಾದ ಮಧು ಮತ್ತು ತಿಪ್ಪೇಸ್ವಾಮಿಗೆ ಪರಿಚಯವಾಗಿದೆ. ಈತನಿಗೆ ಕಳ್ಳತನಕ್ಕೆ ಪ್ರೋತ್ಸಾಹಿಸಿದರೆ ಲಕ್ಷಾಂತರ ಹಣಗಳಿಸಬಹುದು ಎಂದು ನಿರ್ಧರಿಸಿದ ಪೇದೆಗಳು ಈತನ ಕೃತ್ಯಕ್ಕೆ ಸಹಕಾರ ನೀಡುತ್ತಿದ್ದರು.
ಅದರಂತೆ ಆರ್ಮುಗಂ ಜಾಮೀನು ಪಡೆದು ಹೊರಬರುತ್ತಿದ್ದಂತೆ ಆತನನ್ನು ಸಂಪರ್ಕಿಸಿದ ಪೇದೆಗಳು, ಕಳ್ಳತನ ಮಾಡಿ ಗಳಿಸಿದ ಚಿನ್ನಾಭರಣ, ಹಣದಲ್ಲಿ ಅರ್ಧದಷ್ಟು ನಮಗೆ ನೀಡಿದರೆ, ಬಂಧಿಸುವುದಿಲ್ಲ, ಕೇಸ್ ದಾಖಲಿಸುವುದಿಲ್ಲ ಎಂದು ಹೇಳಿದ್ದರು.
ಹೀಗಾಗಿ ಆ ಪೇದೆಗಳು ಸೂಚಿಸಿದ ಕೆಲ ಮನೆಗಳು ಸೇರಿದಂತೆ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ಇತರೆ ಮನೆಗಳಲ್ಲಿ ಕಳ್ಳತನ ಮಾಡಿ ಆರ್ಮಗಂ ಪಾಲು ಕೊಡುತ್ತಿದ್ದ. ಪೇದೆಗಳು ಅರ್ಮಗಂಗೆ ಅನ್ನಪೂರ್ಣೇಶ್ವರಿ ನಗರದಲ್ಲೇ ಬಾಡಿಗೆ ಮನೆ ಮಾಡಿಕೊಟ್ಟಿದ್ದರು.
ಪೊಲೀಸರ ಸಹಕಾರ: ಮಾ.26ರಂದು ಆರ್ಮುಗಂ ಮೈಕೋಲೇಔಟ್ನಲ್ಲಿ ಬೀಗ ಹಾಕಿದ ಮನೆಯೊಂದರಲ್ಲಿ ಕಳ್ಳತನ ನಡೆಸಿ ತಡರಾತ್ರಿ 1ರ ಸುಮಾರಿಗೆ ಬೈಕ್ನಲ್ಲಿ ತೆರಳುತ್ತಿದ್ದ. ಆ ವೇಳೆ ಗಸ್ತಿನಲ್ಲಿದ್ದ ಮೈಕೋಲೇಔಟ್ ಠಾಣೆ ಪೇದೆಗಳು ಸಂಶಯದ ಮೇರೆಗೆ ಆರೋಪಿಯನ್ನು ನಿಲ್ಲಿಸಿ, ಪರಿಶೀಲಿಸಿದಾಗ ಬ್ಯಾಗ್ನಲ್ಲಿ ಬೆಳ್ಳಿಯ ವಸ್ತು, ಸ್ಟೀಲ್ ಪಾತ್ರೆಗಳು, ಚಿನ್ನಾಭರಣ ಪತ್ತೆಯಾಗಿತ್ತು. ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದಾಗ ಪೊಲೀಸ್ ಪೇದೆ ಮಧು ಮತ್ತು ತಿಪ್ಪೇಸ್ವಾಮಿ ಬಗ್ಗೆ ಹೇಳಿಕೆ ನೀಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಶಿಸಿ ಹೋಗಿದ್ದ ಅಲಸಂದೆ ತಳಿಗೆ ಮರುಜೀವ! ಯಾವ ಜಿಲ್ಲೆಗೆ ಈ ತಳಿ ಸೂಕ್ತ?
Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್ಗೆ ನುಗ್ಗಲು ಮುಂದಾದ ಚಿರತೆ!
City Police Commissioner: ರಾತ್ರಿ ನಡೆಯುವ ಅಪರಾಧಗಳ ಮಾಹಿತಿ ನೀಡುವುದು ಕಡ್ಡಾಯ
Bengaluru: ಅಂಚೆ ಕಚೇರಿಯಲ್ಲಿ ಮಾದಕ ವಸ್ತು ತುಂಬಿದ್ದ 626 ವಿದೇಶಿ ಪಾರ್ಸೆಲ್!
BBMP: ಇನ್ಮುಂದೆ ಸಿಗರೇಟ್ ತುಂಡುಗಳ ಪ್ರತ್ಯೇಕ ಸಂಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ
Hebri Cloud Burst: ಇಂಥ ದುರಂತ, ಪ್ರವಾಹ ಈ ಹಿಂದೆ ಆಗಿದ್ದೇ ನೆನಪಿಲ್ಲವೆಂದ ಹಿರಿಯರು
Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ
Famous Goddess Temple: ಅಭಯಪ್ರದಾಯಿನಿ ಶಕ್ತಿಮಾತೆ ಕನಕದುರ್ಗಾ ದೇವಾಲಯ
Tirupati; ಹೆಚ್ಚುವರಿ 250 ಟನ್ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.