ಯಾವ ಪಕ್ಷಕ್ಕೂ ಬಹುಮತ ಸಿಗದು: ಇಂಡಿಯಾ ಟುಡೆ-ಕಾರ್ವಿ ಸಮೀಕ್ಷೆ
Team Udayavani, Apr 13, 2018, 6:43 PM IST
ಹೊಸದಿಲ್ಲಿ : ಇಂಡಿಯಾ ಟುಡೆ ಮತ್ತು ಕಾರ್ವಿ ಇನ್ಸೈಟ್ಸ್ ಜತೆಗೂಡಿ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ 2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತ್ರಿಶಂಕು ಸ್ಥಿತಿ ತಲೆದೋರಲಿದೆ.
225 ಸದಸ್ಯ ಬಲದ ಕರ್ನಾಟಕ ವಿಧಾನ ಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು ಸರಳ ಬಹುಮತಕ್ಕಾಗಿ ಯಾವುದೇ ಒಂದು ಪಕ್ಷ 112 ಸ್ಥಾನಗಳನ್ನು ಗೆಲ್ಲಬೇಕಿದೆ.
ಇಂಡಿಯಾ ಟುಡೆ – ಕಾರ್ವಿ ಸಮೀಕ್ಷೆಯ ಪ್ರಕಾರ ಆಳುವ ಕಾಂಗ್ರೆಸ್ ಪಕ್ಷಕ್ಕೆ 90 ರಿಂದ 101 ಸ್ಥಾನಗಳು ಸಿಗಲಿವೆ.
ಭಾರತೀಯ ಜನತಾ ಪಕ್ಷಕ್ಕೆ 78ರಿಂದ 86 ಸ್ಥಾನಗಳು ಸಿಗಲಿವೆ.
ಕಿಂಗ್ ಮೇಕರ್ ಆಗಲಿರುವ ಎಚ್ ಡಿ ದೇವೇಗೌಡ ಅವರ ಜೆಡಿಎಸ್ ಪಕ್ಷಕ್ಕೆ 34ರಿಂದ 43 ಸ್ಥಾನಗಳು ಪ್ರಾಪ್ತವಾಗಲಿವೆ ಎಂದು ಸಮೀಕ್ಷೆ ತಿಳಿಸಿದೆ.
ಮತ ಹಂಚಿಕೆ ಪ್ರಕಾರ ಹೇಳುವುದಾದರೆ ಕಾಂಗ್ರೆಸ್ ಶೇ.37 ಮತಗಳನ್ನು ಗಳಿಸಲಿದೆ. ಬಿಜೆಪಿಗೆ ಶೇ.35 ಮತಗಳು ದಕ್ಕಲಿವೆ. ಜೆಡಿಎಸ್-ಬಿಎಸ್ಪಿ ಗೆ ಒಟ್ಟಾರೆಯಾಗಿ ಶೇ.19 ಮತಗಳು ಪ್ರಾಪ್ತವಾಗಲಿವೆ.
ತ್ರಿಶಂಕು ಸ್ಥಿತಿ ಏರ್ಪಟ್ಟಲ್ಲಿ ಅತ್ಯಂತ ಹಳೆಯ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಬೆಂಬಲ ಕೊಡಬೇಕು ಎಂದು ಶೇ.39 ಜನರು ಬಯಸುತ್ತಾರೆ; ಬಿಜೆಪಿಗೆ ಜೆಡಿಎಸ್ ಬೆಂಬಲ ಕೊಡಬೇಕು ಎಂದು ಶೇ.29 ಮಂದಿ ಬಯಸುತ್ತಾರೆ ಎನ್ನುವುದು ಸಮೀಕ್ಷೆಯಲ್ಲಿ ಗೊತ್ತಾಗಿದೆ.
ಈ ಚುನಾವಣಾ ಪೂರ್ವ ಸಮೀಕ್ಷೆಗಾಗಿ ಇಂಡಿಯಾ ಟುಡೆ ಮತ್ತು ಕಾರ್ವಿ ಇನ್ಸೈಟ್ಸ್ ರಾಜ್ಯಾದ್ಯಂತದ 224 ವಿಧಾನಸಭಾ ಕ್ಷೇತ್ರಗಳ 27,919 ಮಂದಿಯನ್ನು ಸಂದರ್ಶಿಸಿದೆ.
ಕರ್ನಾಟಕ ವಿಧಾನಸಭೆಗೆ ಮೇ 12ರಂದು ಮತದಾನ ನಡೆಯಲಿದ್ದು ಮೇ 15ರಂದು ಫಲಿತಾಂಶ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.