ಸಮಾಜ ಸೇವೆಯಲ್ಲೇ ಗೌರವ


Team Udayavani, Apr 15, 2018, 6:15 AM IST

Leeladhara-sheety.jpg

ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಿತರಾದರೂ ಸಮಾಜ ಸೇವೆಯ ಮೂಲಕ ಸದಾ ಚಟುವಟಿಕೆಯಲ್ಲಿರುವವರು ಕೆ. ಲೀಲಾಧರ ಶೆಟ್ಟಿ.
 
ರಾಜಕೀಯದತ್ತ ಹೇಗೆ ಆಕರ್ಷಿತರಾದಿರಿ?
    ಸಮಾಜ ಸೇವೆಯಲ್ಲಿಯೇ ಸಂತೃಪ್ತಿ ಕಾಣುತ್ತಿದ್ದ ನಾನು ಹೊಂದಿದ್ದ ಜನಸಂಪರ್ಕದ ಕಾರಣ, ಬೆಂಬಲಿಗರ ಒತ್ತಾಯಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಿದೆ. 1994ರಲ್ಲಿ ಕೆಸಿಪಿ ಮತ್ತು ಜನತಾ ದಳದಲ್ಲಿ ಸ್ಪರ್ಧಿಸುವ ಅವಕಾಶವಿದ್ದರೂ ಕೊನೇ ಕ್ಷಣದಲ್ಲಿ ಟಿಕೆಟ್‌ ವಂಚಿತನಾಗಿ ಪಕ್ಷೇತರನಾಗಿ ಸ್ಪರ್ಧಿಸಿದೆ. 15 ವರ್ಷಗಳ ಬಳಿಕ ಅಂದರೆ 2009ರಲ್ಲಿ ಜೆಡಿಎಸ್‌ ಮೂಲಕ ಸ್ಪರ್ಧಿಸುವಂತಾಯಿತು.

ರಾಜಕೀಯ ಹಿಡಿಸಿತೇ?
     ಸಮಾಜ ಸೇವಕನಾಗಿರುವ ನನಗೆ ರಾಜಕೀಯ ಕ್ಷೇತ್ರ ಹಿಡಿಸದು ಎಂದು ಹಲವರು ಹೇಳಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಿದ ಬಳಿಕ ಅದು ಹೌದೆಂದು ಮನದಟ್ಟಾಗಿದೆ. ಸಮಾಜ ಸೇವೆಯಲ್ಲಿ ಸಿಗುವ ಗೌರವ ರಾಜಕೀಯ ಕ್ಷೇತ್ರದಲ್ಲಿ ಸಿಗದು ಎಂಬುದು ಅರಿವಿಗೆ ಬಂದಿದೆ. ಈ ಕಾರಣದಿಂದಾಗಿ ರಾಜಕೀಯ ಕ್ಷೇತ್ರದಿಂದ ಹಿಂದೆ ಸರಿದಿದ್ದೇನೆ.

ಇಂದಿನ ರಾಜಕೀಯ ಪರಿಸ್ಥಿತಿಯ ಬಗ್ಗೆ… ?
     ಪ್ರಸಕ್ತ ರಾಜಕೀಯ ವ್ಯವಸ್ಥೆಗೂ ನನ್ನ ಸಮಾಜ ಸೇವೆಗೂ ತಾಳೆಯೇ ಆಗುವುದಿಲ್ಲ. ಆ ಕಾರಣದಿಂದಾಗಿ ರಾಜಕೀಯದಲ್ಲಿ ಸಕ್ರಿಯನಾಗಿಲ್ಲ. ಜಾತಿ ಬಲ, ಹಣ ಬಲದ ಆಮಿಷಗಳನ್ನು ಒಡ್ಡಿ  ಮತದಾರರನ್ನು ಓಲೈಸುವುದು, ಮತ ಗಿಟ್ಟಿಸಿಕೊಳ್ಳುವುದು ಮಾಮೂಲಾಗಿದೆ. ಜನರು ಯಾವುದೇ ಆಮಿಷಕ್ಕೊಳಗಾಗದೆ ಜಾತಿ, ಧರ್ಮ, ಮತ, ಪಕ್ಷಕ್ಕೆ ಒತ್ತು ನೀಡದೇ ಸಜ್ಜನರನ್ನು ಆಯ್ಕೆ ಮಾಡುವಂತೆ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದೇನೆ.

ಕಾಪು ತಾಲೂಕು ರಚನೆಯಲ್ಲಿ ನಿಮ್ಮ ಪಾತ್ರ ?
     ಕಾಪು ತಾಲೂಕು ರಚನೆ ಬಗ್ಗೆ ಹಾಲಿ ಶಾಸಕರಲ್ಲಿ ಮನವಿ ಮಾಡಿದಾಗ ಅದಕ್ಕೆ ಜನಬೆಂಬಲ ದೊರಕಿಸಲು ಪ್ರಯತ್ನಿಸಿ ಎಂದರು. ಜನಬೆಂಬಲ ಪಡೆಯುವ ನಿಟ್ಟಿನಲ್ಲಿ ಎಲ್ಲ ಗ್ರಾ.ಪಂ.ಗಳಲ್ಲೂ ಎರಡೆರಡು ಬಾರಿ ಸಭೆ ನಡೆಸಿ, ಸರ್ವ ಪಕ್ಷಗಳ ಬೆಂಬಲ ಪಡೆದು ಹೋರಾಟಕ್ಕೆ ಚಾಲನೆ ನೀಡಲಾಯಿತು. ಹೆಜಮಾಡಿಯಿಂದ ಉದ್ಯಾವರ ವರೆಗೆ ಕಾಲ್ನಡಿಗೆ ಜಾಥಾ, ಪತ್ರ ಚಳವಳಿ ಸಹಿತ ಎಲ್ಲರ ಸಹಕಾರ ದೊರಕಿದ ಕಾರಣದಿಂದಾಗಿ ಆರೇ ತಿಂಗಳಲ್ಲಿ ಕಾಪು ತಾಲೂಕು ಘೋಷಣೆಯಾಗಿದೆ.

ನಿಮ್ಮಿಷ್ಟದ ಕ್ಷೇತ್ರ ಯಾವುದು?
      ಸಮಾಜ ಸೇವೆ. ಅಂದೂ ಅದೇ; ಇಂದೂ ಅದೇ. ಕಾಲೇಜು ಜೀವನದಿಂದಲೇ ಸಮಾಜ ಸೇವೆಯಲ್ಲಿ ತೊಡಗಿದವನು ನಾನು. ಕಳೆದ 40 ವರ್ಷಗಳಿಂದ ಇದರಲ್ಲಿ ಸಂತೃಪ್ತಿ ಕಾಣುತ್ತಿದ್ದೇನೆ. ಕಲೆಯೂ ನನ್ನ ಇಷ್ಟದ ಕ್ಷೇತ್ರ. ಕಾಪು ರಂಗತರಂಗ ನಾಟಕ ತಂಡದ ಮೂಲಕ ಸ್ಥಳೀಯ ಕಲಾವಿದರ ಪ್ರತಿಭಾ ಪ್ರದರ್ಶನಕ್ಕೆ ಪ್ರೋತ್ಸಾಹ, ತ್ರಿಮೂರ್ತಿ ಯಕ್ಷಗಾನ ಕಲಾ ಕೇಂದ್ರ ಸ್ಥಾಪನೆ ಮೂಲಕ ಯಕ್ಷಗಾನ ತರಬೇತಿ, ಬ್ರಹ್ಮಲಿಂಗೇಶ್ವರ ಭಜನ ಮಂಡಳಿ ಮೂಲಕ ಭಜನೆ ಬಗ್ಗೆ ಜಾಗೃತಿ, ಚಕ್ರವರ್ತಿ ಕಲ್ಚರಲ್‌ ಕ್ಲಬ್‌ ಸ್ಥಾಪನೆ ಮೂಲಕ ಗ್ರಾಮೀಣ ಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.