ಕಾಂಗ್ರೆಸ್‌ನಿಂದ ಬಿ.ಶಿವರಾಂಗೆ ಟಿಕೆಟ್‌ ನೀಡಲು ಆಗ್ರಹ


Team Udayavani, Apr 15, 2018, 2:05 PM IST

1508mum06.jpg

ಬೇಲೂರು: ಬೇಲೂರು ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕ ದಿ.ವೈ.ಎನ್‌.ರುದ್ರೇಶಗೌಡ ಪತ್ನಿ ಕೀರ್ತನರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಘೋಷಣೆ ಮಾಡಿರುವ ಹೈಕಮಾಂಡ್‌ ಕ್ರಮ ವಿರೋಧಿಸಿ ಮಾಜಿ ಸಚಿವ ಬಿ.ಶಿವರಾಂ ಬೆಂಬಲಿಗರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದಾರೆ.

ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶಿವರಾಂ ಬೆಂಬಲಿಗರ ಮುಖಂಡ ಹೆಬ್ಟಾಳು ಕ್ಷೇತ್ರದ ಜಿಪಂ ಸದಸ್ಯ ಮಂಜಪ್ಪ ಮಾತನಾಡಿ, ಕಳೆದ 10 ವರ್ಷಗಳಿಂದ ಶಾಸಕ ವೈ.ಎನ್‌.ರುದ್ರೇಶಗೌಡ ಕಾರ್ಯಕರ್ತರನ್ನು ಕಡೆಗಣಿಸಿದ್ದು ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡುವಲ್ಲಿ ವಿಫ‌ಲಾಗಿದ್ದರು ಎಂದರು.

ಕಳೆದ 2 ವರ್ಷಗಳಿಂದ ಮಾಜಿ ಸಚಿವ ಬಿ.ಶಿವರಾಂ ಬೇಲೂರು ವಿಧಾನ ಸಭಾ ಕ್ಷೇತ್ರದಲ್ಲಿ ನೀರಾವರಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಸರ್ಕಾರದ ಹಲವಾರು ಯೋಜನೆಗಳನ್ನು ತಂದು ಮತದಾರರ ವಿಶ್ವಾಸ ಗಳಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಲು ಬಯಸಿದ್ದರಲ್ಲದೆ ಹೈಕಮಾಂಡ್‌ ಸಹ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿತ್ತು.

ಆದರೆ ತಾಲೂಕಿನ ಯಾವುದೇ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸದ ಕಾರ್ಯಕರ್ತರೊಂದಿಗೆ ಒಡನಾಟವಿರದ ಕೀರ್ತನ ಅವರಿಗೆ ಹೈಕಮಾಂಡ್‌ ಟಿಕೆಟ್‌ ನೀಡುತ್ತಿರುವುದು ಸರಿಯಲ್ಲ. ಚುನಾವಣೆಯಲ್ಲಿ ಜನ ಬೆಂಬಲ ವಿಲ್ಲದೇ ಗೆಲ್ಲುವುದು ಹೇಗೆ ಎಂದು ಪ್ರಶ್ನಿಸಿದರು.

ಹೈಕಮಾಂಡ್‌ ಕಾರ್ಯಕರ್ತರ ಮನ್ನಣೆ ಬೆಲೆ ನೀಡಿ ಶಿವರಾಂಗೆ ಟಿಕೆಟ್‌ ನೀಡದಿರುವ ಪಕ್ಷದಲ್ಲಿ ತಾಪಂ, ಜಿಪಂ, ಪುರಸಭೆ ಕಾಂಗ್ರೆಸ್‌ ಸದಸ್ಯರು ರಾಜೀನಾಮೆ ನೀಡಿ ಶಿವರಾಂರನ್ನು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯನ್ನಾಗಿ ಕಣಕಿಳಿಸಲಾಗುವುದು ಎಂದು ಎಚ್ಚರಿಸಿದರು.

ಚನ್ನಕೇಶವ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೈ.ಟಿ.ದಾಮೋಧರ್‌ ಮಾತನಾಡಿ, ಮಾಜಿ ಶಾಸಕ ವೈ.ಎನ್‌.ರುದ್ರೇಶಗೌಡರ ಪತ್ನಿ ಕಾಂಗ್ರೆಸ್‌ ಸದಸ್ಯತ್ವವನ್ನೇ  ಪಡೆದಿಲ್ಲ ಹಾಗೂ ಪಕ್ಷದ ಟಿಕೆಟ್‌ ಬೇಡಿಕೆಯನ್ನು ಸಲ್ಲಿಸಿದೇ ಇರುವಾಗ ಹೈಕಮಾಂಡ್‌ ಇವರಿಗೆ ಮಣೆ ಹಾಕುತ್ತಿರುವುದು ದುರದುಷ್ಟಕರವಾಗಿದ್ದು ಕಳೆದ 10 ವರ್ಷಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುವುದಲ್ಲದೆ ಮನೆ ಬಾಗಿಲಿಗೆ ಬಂದವರನ್ನು ನಿರ್ಲಕ್ಷಸಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಮುಖಂಡ ಕೆ.ಪಿ.ಶೈಲೇಶ್‌ ಮಾತನಾಡಿ, ತಾಲೂಕಿನ ಸಮಗ್ರ ಅಭಿವೃದ್ಧಿ ಮೀಸಲು ಕ್ಷೇತ್ರವಾಗಿದ್ದಾಗಲೇ ಅಭಿವೃದ್ಧಿಯಾಗಿದ್ದು ಕಳೆದ 10 ವರ್ಷಗಳ ಆಡಳಿತ ನಡೆಸಿದ ಶಾಸಕ ವೈ.ಎನ್‌.ರುದ್ರೇಶಗೌಡರಿಂದ ತಾಲೂಕಿನ ಅಭಿವೃದ್ಧಿಯಾಗಿಲ್ಲ ಈಗಾಗಲೇ ತಾಲೂಕಾದ್ಯಂತ ಮತದಾರರು ಇವರ ವಿರುದ್ಧ ತಿರುಗಿಬಿದಿದ್ದು, ಇಂಥ ವಾತಾವರಣದಲ್ಲಿ ಇವರಿಗೆ ಟಿಕೆಟ್‌ ನೀಡುವುದು ಸೂಕ್ತವಾಗಲ್ಲ ಎಂದರು.

ಮಾಜಿ ಶಾಸಕ ಶಿವರಾಂಗೆ ಟಿಕೆಟ್‌ ನೀಡಲೇ ಬೇಕೆಂದು ಒತ್ತಾಯಿಸಿ ಬೃಹತ್‌ ಪತ್ರಿಭಟನೆ ನಡೆಸಲಾಗುವುದು ಎಂದು ನಿರ್ಣಯ ಕೈಗೊಳ್ಳಲಾಯಿತು. ಅಲ್ಲದೆ ಬಿ.ಶಿವರಾಂಗೆ ಪಕ್ಷದ ಟಿಕೆಟ್‌ ಸಿಗದಿರುವುದಕ್ಕೆ ಜಿಲ್ಲಾ ಮಂತ್ರಿ ಎ.ಮಂಜು ಕಾರಣವಾಗಿದ್ದಾರೆ ಎಂದು ಹಲವು ಕಾರ್ಯಕರ್ತರು ಆರೋಪಿಸಿ ಎ.ಮಂಜು ವಿರುದ್ಧ ಧಿಕ್ಕಾರ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪುರಸಭಾ ಉಪಾಧ್ಯಕ್ಷ ಅರುಣ್‌ಕುಮಾರ್‌, ಸದಸ್ಯ ಜುಬೇರ ಅಹಮದ್‌, ಶಿವಾನಂದ್‌, ಶಾಂತಕುಮಾರ್‌ ಬೇಲೂರು -ಹಳೇಬೀಡು ಪ್ರಾಧಿಕಾರದ ಅಧ್ಯಕ್ಷ ಬಿ.ಎ.ಜಮಾಲ್‌, ಚನ್ನಕೇಶವ ದೇವಾಲದಯ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಿಶಾಂತ, ರಂಗನಾಥ್‌, ಕಾಂಗ್ರೆಸ್‌ ಮುಖಂಡರಾದ ಸತ್ಯನಾರಾಯಣ, ತುಳಸಿ, ಗಂಗಮ್ಮ, ಮಹದೇವ, ಸೋಮಣ್ಣ, ರಾಮೇನಹಳ್ಳಿ ವೆಂಕಟೇಶ್‌, ಅರೇಹಳ್ಳಿ ನಿಂಗರಾಜ, ಲಕ್ಷ್ಮೀ, ಲೋಲಾಕ್ಷಮ್ಮ, ಜಾವಗಲ್‌ ನಾಗರಾಜು, ನವೀದ್‌, ಇತರರು ಇದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.