
ಭುಗಿಲೆದ್ದ ಆಕ್ರೋಶ:ಅತ್ಯಾಚಾರ, ಕೊಲೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ
Team Udayavani, Apr 16, 2018, 6:30 AM IST

ಹೊಸದಿಲ್ಲಿ: ಜಮ್ಮು- ಕಾಶ್ಮೀರದ ಕಥುವಾದಲ್ಲಿ ನಡೆದ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಹಾಗೂ ಉತ್ತರಪ್ರದೇಶದ ಉನ್ನಾವ್ನಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಇಡೀ ದೇಶದ ಗಮನ ಸೆಳೆಯಿದ್ದು, ರವಿವಾರ ಬೆಂಗಳೂರು, ದಿಲ್ಲಿ, ಮುಂಬಯಿ, ಗೋವಾ, ಕೇರಳ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ದಿಲ್ಲಿಯ ಪಾರ್ಲಿಮೆಂಟ್ ಸ್ಟ್ರೀಟ್ನಲ್ಲಿ ಸಾವಿರಾರು ಮಂದಿ ‘ನಾಟ್ ಇನ್ ಮೈ ನೇಮ್’ ಎಂಬ ಫಲಕಗಳನ್ನು ಹಿಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬಯಿಯಲ್ಲಿ ನಡೆದ ಮೊಂಬತ್ತಿ ಮೆರವಣಿಗೆಯಲ್ಲಿ ಪ್ರಿಯಾಂಕಾ ಚೋಪ್ರಾ, ಏಕ್ತಾ ಸೇರಿ ಬಾಲಿವುಡ್ ತಾರೆಯರೂ ಪಾಲ್ಗೊಂಡಿದ್ದರು.
ರಾಜೀನಾಮೆ ಅಂಗೀಕಾರ: ಇದೇ ವೇಳೆ, ಕಥುವಾ ಪ್ರಕರಣದ ಆರೋಪಿಗಳ ಪರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಇಬ್ಬರು ಸಚಿವರ ರಾಜೀನಾಮೆಯನ್ನು ರವಿವಾರ ಸಿಎಂ ಮೆಹಬೂಬಾ ಮುಫ್ತಿ ಅಂಗೀಕರಿಸಿದ್ದಾರೆ. ಇದೇ ವೇಳೆ, ಕಥುವಾ ಪ್ರಕರಣದ ಬಗ್ಗೆ ಪೊಲೀಸರ ತನಿಖೆಯು ಕುಮ್ಮಕ್ಕಿನಿಂದ ಕೂಡಿದ್ದು ಎಂದು ಜಮ್ಮು- ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ಗುಲಾಂ ಅಹ್ಮದ್ ಮಿರ್ ಹೇಳಿದ್ದಾರೆ ಎನ್ನಲಾದ ವಿಡಿಯೋವೊಂದು ಬಹಿರಂಗಗೊಂಡಿದೆ. ಈ ಬಗ್ಗೆ ಪ್ರಸ್ತಾವಿಸಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ‘ನಮ್ಮ ಸಚಿವರು ಈ ರೀತಿಯ ಹೇಳಿಕೆ ನೀಡಿದ್ದಕ್ಕೆ ನಾನು ಕ್ರಮ ಕೈಗೊಂಡಿದ್ದೇವೆ. ಈಗ ರಾಹುಲ್ ಗಾಂಧಿ ಅವರು ಮಿರ್ ರಾಜೀನಾಮೆ ಪಡೆಯಲಿ’ ಎಂದು ಸವಾಲು ಹಾಕಿದ್ದಾರೆ.
ವರ್ಗಾಯಿಸಲು ಕೋರಿಕೆ: ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಲು ಮೃತ ಬಾಲಕಿಯ ಕುಟುಂಬ ಸದಸ್ಯರು ಚಿಂತನೆ ನಡೆಸಿದ್ದಾರೆ. ಇದೇ ವೇಳೆ, ಬಾಲಕಿಯ ಅಂತ್ಯಸಂಸ್ಕಾರಕ್ಕೆ ಸ್ಥಳೀಯರು ಭೂಮಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ, 8 ಕಿ.ಮೀ. ದೂರದಲ್ಲಿ ಆಕೆಯನ್ನು ಮಣ್ಣು ಮಾಡಿದ್ದಾಗಿ ಕುಟುಂಬಿಕರು ಹೇಳಿದ್ದಾರೆ.
ಆನಂದ್ ಮಹೀಂದ್ರಾ ಕಿಡಿ
ಮರಣದಂಡನೆ ವಿಧಿಸುವ ವ್ಯಕ್ತಿ ಆಸ್ಥೆಯಿಂದ ಆ ಕೆಲಸ ವಹಿಸಿಕೊಂಡಿರುವುದಿಲ್ಲ. ಆದರೆ, ಪುಟಾಣಿ ಮಕ್ಕಳನ್ನು ಕೊಲ್ಲುವಂಥ ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕೆಂದರೆ, ನಾನೇ ಸ್ವಇಚ್ಛೆಯಿಂದ ಮುಂದೆಬರಲು ಹಿಂಜರಿಯುವುದಿಲ್ಲ. ಶಾಂತವಾಗಿರಬೇಕೆಂದು ನಾನು ಬಹಳಷ್ಟು ಯತ್ನಿಸುತ್ತೇನೆ. ಆದರೆ, ನಮ್ಮ ದೇಶದಲ್ಲಿ ಹೀಗಾಗುತ್ತಿರುವುದು ನೋಡಿದರೆ ರಕ್ತ ಕುದಿಯುತ್ತದೆ ಎಂದು ಉದ್ಯಮಿ ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.