ಹಿರಿಯಡಕ ಇಂದಿನಿಂದ ಬ್ರಹ್ಮಕಲಶೋತ್ಸವ ಸಡಗರ


Team Udayavani, Apr 16, 2018, 10:51 AM IST

hiriyadka.jpg

ಹಿರಿಯಡಕ: ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇಗುಲದ ಸಮಗ್ರ ಜೀರ್ಣೋದ್ಧಾರ ಪೂರ್ಣಗೊಂಡಿದ್ದು, ಬ್ರಹ್ಮಕಲಶೋತ್ಸವ ಸಡಗರದಲ್ಲಿದೆ. ತುಳುನಾಡಿನ ಮಾತೃಮೂಲ ಸಂಸ್ಕೃತಿಯ ಎಲ್ಲ ಜಾತಿ ವರ್ಗಗಳ ಬಹುತೇಕ ಜನರಿಗೆ ಆದಿ-ಆಲಡೆ ಎಂದು ಗುರುತಿಸಲ್ಪಡುವ ಕ್ಷೇತ್ರದಲ್ಲಿ ಎ. 16ರಿಂದ ಎ. 25ರ ತನಕ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಸಂಘಟನ ಕಾರ್ಯದರ್ಶಿ ನಟರಾಜ್‌ ಹೆಗ್ಡೆ ಹೇಳಿದರು.
ದೇವಸ್ಥಾನದ ವಠಾರದಲ್ಲಿ ರವಿವಾರ ಪತ್ರಿಕಾ ಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿದರು. ಎ. 16ರಂದು ಹೊರೆಕಾಣಿಕೆ, ಎ.20 ರಂದು ಪ್ರತಿಷ್ಠೆ, ಎ. 21ರಂದು ಮಹಾರುದ್ರ ಯಾಗ, ಎ. 22ರಂದು ಕಲಶಾಭಿಷೇಕ, ಎ. 23ರಂದು ಶತಚಂಡಿಕಾ ಯಾಗ ಜರಗಲಿದೆ.

ಬ್ರಹ್ಮಕಲಶೋತ್ಸವದ ಪ್ರಥಮ ದಿನದ ಧಾರ್ಮಿಕ ಸಭೆಯನ್ನು ಮಾತೆಯರಿಗಾಗಿ ಮೀಸಲಿಡಲಾಗಿದ್ದು, ಎ. 19ರ ಸಂಜೆ ನಡೆಯಲಿರುವ ಮಾತೃಸಂಗಮದ ಅಧ್ಯಕ್ಷತೆಯನ್ನು ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್‌. ಪೈ ವಹಿಸುವರು. ವಿಶೇಷ ಉಪನ್ಯಾಸಕರಾಗಿ ಬರಹಗಾರ್ತಿಡಾ| ಇಂದಿರಾ ಹೆಗ್ಡೆ ಭಾಗವಹಿಸಲಿ ದ್ದಾರೆ. ಸುಮಾರು 7,000 ಮಾತೆಯರು ಭಾಗ ವಹಿಸ ಲಿದ್ದಾರೆ. ಬೃಹತ್‌ ಶೋಭಾಯಾತ್ರೆ ನಡೆಯಲಿದೆ.

ಎ. 20ರಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಅಧ್ಯಕ್ಷತೆ ಯಲ್ಲಿ “ಸಂತ ಸಂಗಮ’ ನಡೆಯಲಿದೆ. ವಿವಿಧ ಸಂಪ್ರದಾಯಗಳ ಸಾಧು ಸಂತರು ಭಾಗವಹಿಸಲಿ ದ್ದಾರೆ. ಎ. 21ರಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆಶೀರ್ವಚನದೊಂದಿಗೆ ಎನ್‌. ವಿನಯ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ “ರಾಜಧರ್ಮ ಸಭೆ’ ನಡೆಯಲಿದೆ. ಎ. 22ರಂದು ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಅವರ ಅಧ್ಯಕ್ಷತೆಯಲ್ಲಿ “ಸುಧರ್ಮ ಸಭೆ’ ಜರಗಲಿದೆ ಎಂದು ವಿವರಿಸಿದರು. 

ಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಭಾಶ್ಚಂದ್ರ ಹೆಗ್ಡೆ,ಕಾರ್ಯಧ್ಯಕ್ಷ ಗೋವರ್ಧನದಾಸ ಹೆಗ್ಡೆ, ಕಾರ್ಯದರ್ಶಿ ಪರೀಕ ಅರಮನೆ ಸೋಮನಾಥ ಶೆಟ್ಟಿ ಮೊದಲಾದವರಿದ್ದರು.

ಸಾಂಸ್ಕೃತಿಕ ಕಲೋತ್ಸವ; ನಿರಂತರ ಊಟೋಪಚಾರ
ಬ್ರಹ್ಮಕಲಶೋತ್ಸವದ ಎಲ್ಲ ಹತ್ತು ದಿನಗಳಲ್ಲಿ ಬಹು ದೊಡ್ಡ ಸಾಂಸ್ಕೃತಿಕ ಕಲೋತ್ಸವ ಆಯೋಜಿಸಲಾಗಿದೆ. ಹೊರಾಂಗಣದ ಪ್ರಧಾನ ವೇದಿಕೆಯಲ್ಲಿ ಪ್ರತಿದಿನ ಸಭಾ ಕಾರ್ಯಕ್ರಮದ ಅನಂತರ ರಾಷ್ಟ್ರಮಟ್ಟದ ಕಲಾವಿದರಿಂದ ಸಂಗೀತ, ನೃತ್ಯ, ಯಕ್ಷಗಾನ ಇತ್ಯಾದಿ ಕಾರ್ಯಕ್ರಮಗಳು ಜರಗಲಿವೆ. ಹತ್ತು ದಿನಗಳಲ್ಲಿ ಬೆಳಗ್ಗಿನಿಂದ ಆರಂಭಿಸಿ ರಾತ್ರಿಯ ವರೆಗೆ ನಿರಂತರ ಉಪಾಹಾರ ಮತ್ತು ಅನ್ನದಾನದ ವ್ಯವಸ್ಥೆ ಮಾಡಲಾಗಿದೆ.
- ನಟರಾಜ್‌ ಹೆಗ್ಡೆ

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.