ವಿದ್ಯಾರ್ಥಿಗಳ ಸಾಧನೆಗೆ ಆದ್ಯತೆ: ಡಾ| ಸುರೇಶ್
Team Udayavani, Apr 16, 2018, 11:04 AM IST
ಇನೋಳಿ: ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸಾಧನೆಗಳ ಬದಲಾಗಿ ಮಾನ್ಯತೆಯನ್ನು ತುಲನೆ ಮಾಡಲಾಗುತ್ತಿದೆ. ವಾಸ್ತವವಾಗಿ ವಿದ್ಯಾರ್ಥಿಗಳ ಬುದ್ಧಿವಂತಿಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದರೆ ಅವರ ಭವಿಷ್ಯದ ಜತೆಗೆ ಶಿಕ್ಷಣ ಸಂಸ್ಥೆಯ ಹೆಸರು ಖ್ಯಾತಿ ಪಡೆಯುತ್ತದೆ ಎಂದು ಐಐಟಿ ಮುಂಬೈ ನಿರ್ದೇಶಕ ಡಾ| ಎ.ಕೆ. ಸುರೇಶ್ ಅಭಿಪ್ರಾಯಪಟ್ಟರು.
ಇನೋಳಿಯ ಬೇರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬೇರಿಸ್ ಎನ್ವಿರೋ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ ‘ಬಿಐಟಿ ಆ್ಯಂಡ್ ಬೀಡ್ಸ್ ಉತ್ಸವ- 2018’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆವಿಷ್ಕಾರಗಳತ್ತ ಮುಖ ಮಾಡಿ
ಎಂಜಿನಿಯರಿಂಗ್ ವಿಭಾಗ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ವಿಚಾರಗಳನ್ನು ಒಳಗೊಂಡ ಸಮಗ್ರ ವಿಷಯವಾಗಿದೆ. ತಾಂತ್ರಿಕ ಕೌಶಲಗಳ ಉಪಯೋಗದ ಜತೆಗೆ ಆವಿಷ್ಕಾರಗಳು ಎಂಜಿನಿಯರಿಂಗ್ ಪದವೀಧರರನ್ನು ಯಶಸ್ಸಿನ ಹಾದಿಯಲ್ಲಿ ನಡೆಸುತ್ತವೆ. ಈ ನಿಟ್ಟಿನಲ್ಲಿ ಬಿಐಟಿ ಶಿಕ್ಷಣ ಸಂಸ್ಥೆಯ ವಾತಾವರಣ ಪ್ರಕೃತಿ ಮಡಿಲಿನ ಜತೆಗಿನ ಒಡನಾಟ ಇರುವುದರಿಂದ ಶಿಕ್ಷಣಕ್ಕೆ ಪೂರಕವಾಗಿದ್ದು ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳತ್ತ ಮುಖ ಮಾಡಬೇಕಾಗಿದೆ ಎಂದರು. ಬೇರೀಸ್ ಅಕಾಡೆಮಿ ಆಫ್ ಲರ್ನಿಂಗ್ನ ಅಧ್ಯಕ್ಷ ಸೈಯದ್ ಮಹಮದ್ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.
ಬೆಂಗಳೂರು ಇನ್ಪ್ಸಿರೇಜ್ ಸಾಫ್ಟ್ ವೇರ್ ಕನ್ಸಲ್ಟಿಂಗ್ ಪ್ರೈ.ಲಿ.ನ ನಿರ್ದೇಶಕಿ ಅನ್ನಪೂರ್ಣಾ, ಮಂಗಳೂರು ನವ
ಬಂದರು ಟ್ರಸ್ಟಿನ ಮೆಕ್ಯಾನಿಕಲ್ ಎಂಜಿನಿಯರ್ ಸತೀಶ್ ಹೊನ್ನಕಟ್ಟೆ ಮುಖ್ಯ ಅತಿಥಿಗಳಾಗಿದ್ದರು.
ಬೇರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ| ಆ್ಯಂಟನಿ ಎ.ಜೆ., ಬೇರಿಸ್ ಎನ್ವಿರೋ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ನ ಪ್ರಾಂಶುಪಾಲ ಅಶೋಕ್ ಮೆಂಡೋನ್ಸ ವಾರ್ಷಿಕ ವರದಿ ಮಂಡಿಸಿದರು. ಬಿಐಟಿ ಸಿಎಸ್ಇ ವಿಭಾಗ ಮುಖ್ಯಸ್ಥ ಪ್ರೊ| ಮುಸ್ತಾಫ ಬಸ್ತಿಕೋಡಿ ಸ್ವಾಗತಿಸಿದರು. ಉರೂಸಾ ಖಾನ್ ನಿರೂಪಿಸಿದರು. ಅಬೂಬಕರ್ ಶಮೀಝ್ ವಂದಿಸಿದರು.
ಬಹುಮಾನ ವಿತರಣೆ
ಈ ಸಂದರ್ಭ ರ್ಯಾಂಕ್, ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ
ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.