ಸುಬ್ರಹ್ಮಣ್ಯ ದೇವಸ್ಥಾನ: ರಥೋತ್ಸವ
Team Udayavani, Apr 16, 2018, 11:36 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಷು ಹಬ್ಬವನ್ನು ರವಿವಾರ ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಲಾಯಿತು. ವಿಷು ಹಬ್ಬದ ಅಂಗವಾಗಿ ಕುಕ್ಕೆ ದೇಗುಲದಲ್ಲಿ ಆರಂಭದಲ್ಲಿ ವಿಷು ಕಣಿಯನ್ನು ಶ್ರೀ ದೇವರಿಗೆ ದರ್ಶನ ಮಾಡಿಸಲಾಯಿತು. ಬಳಿಕ ವಿಷು ರಥೋತ್ಸವ ನಡೆಯಿತು. ಬೆಳಗ್ಗೆ ನಿತ್ಯ ಪೂಜೆ ಮತ್ತು ಸೇವಾದಿಗಳು ಉತ್ಸವದ ಬಳಿಕ ನಡೆದವು.
ಮುಂಜಾನೆ ದೇವಸ್ಥಾನದ ಗರ್ಭಗೃಹದ ಮುಂಭಾಗದಲ್ಲಿ ವಿಷು ಕಣಿಯನ್ನು ಇಡಲಾಯಿತು. ಬಳಿಕ ರಥಬೀದಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ವಿಷು ಹಬ್ಬದ ಅಂಗವಾಗಿ ಚಿಕ್ಕರಥೋತ್ಸವ ನೆರವೇರಿತು. ರಥೋತ್ಸವದ ಬಳಿಕ ದೇವಸ್ಥಾನದ ಹೊರಾಂಗಣದಲ್ಲಿರುವ ದ್ವಾದಶಿ ಮಂಟಪದಲ್ಲಿ ದೇವರಿಗೆ ಪೂಜೆ ನೆರವೇರಿತು. ತದನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ನಿತ್ಯಪೂಜೆ ಮತ್ತು ಬೆಳಗಿನ ಮಹಾಪೂಜೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.