
ರಾ. ಹಿರಿಯರ ಆ್ಯತ್ಲೆಟಿಕ್ಸ್: ಮಹಾರಾಷ್ಟ್ರಕ್ಕೆ ಪ್ರಶಸ್ತಿ
Team Udayavani, Apr 16, 2018, 11:52 AM IST

ಮಂಗಳೂರು: ಭಾರತ ಕಿರಿಯರ ಆ್ಯತ್ಲೆಟಿಕ್ ಫೆಡರೇಶನ್ (ಇಂಡಿಯನ್ ಮಾಸ್ಟರ್ ಆ್ಯತ್ಲೆಟಿಕ್ಸ್)ನ
ಅನುಮೋದನೆಯೊಂದಿಗೆ ದ.ಕ. ಜಿಲ್ಲಾ ಹಿರಿಯರ ಆ್ಯತ್ಲೆಟಿಕ್ ಅಸೋಸಿಯೇಶನ್ ಮತ್ತು ಕರ್ನಾಟಕ ರಾಜ್ಯ
ಹಿರಿಯರ ಆ್ಯತ್ಲೆಟಿಕ್ ಅಸೋಸಿಯೇಶನ್ನ ಜಂಟಿ ಸಹಯೋಗದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ 38ನೇ ರಾಷ್ಟ್ರೀಯ ಹಿರಿಯರ ಆ್ಯತ್ಲೆಟಿಕ್ ಕ್ರೀಡಾಕೂಟದಲ್ಲಿ ಮಹಾರಾಷ್ಟ್ರ ಪ್ರಶಸ್ತಿ ಜಯಿಸಿದ್ದರೆ ಕರ್ನಾಟಕ ರನ್ನರ್ ಅಪ್ ಸ್ಥಾನ ಪಡೆದಿದೆ.
ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ಕರ್ನಾಟಕ ಸಹಿತ ವಿವಿಧ ರಾಜ್ಯಗಳ 1,600 ಹಿರಿಯ ಆ್ಯತ್ಲೀಟ್ಗಳು ಭಾಗವಹಿಸಿದ್ದರು. 400ಕ್ಕೂ ಹೆಚ್ಚು ವಿಭಾಗಗಳಲ್ಲಿ ಸ್ಪರ್ಧೆ ನಡೆದಿವೆ. ವಿಶೇಷ ಆಮಂತ್ರಿತರಾಗಿ ಶ್ರೀಲಂಕಾದ 47 ಆ್ಯತ್ಲೀಟ್ಗಳು ಭಾಗ ವಹಿಸಿದ್ದು ವಿಶೇಷವಾಗಿತ್ತು.
ಸಮಾರೋಪ ಸಮಾರಂಭದಲ್ಲಿ ಶ್ರೀದೇವಿ ಎಜುಕೇಶನ್ ಟ್ರಸ್ಟ್ ಚೇರ್ಮನ್ ಸದಾನಂದ ಶೆಟ್ಟಿ ಮಾತನಾಡಿ, ಈ ಬಾರಿಯ ಕ್ರೀಡಾಕೂಟ ಮಂಗಳೂರಿನಲ್ಲಿ ನಡೆದಿದ್ದು ಹೆಮ್ಮೆಯ ವಿಷಯ. ಇದರೊಂದಿಗೆ ಮಂಗಳೂರಿನಲ್ಲಿಯೂ ಸಮರ್ಥವಾಗಿ ಕ್ರೀಡಾಕೂಟಗಳನ್ನು ಆಯೋಜಿಸಬಹುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಇಂಡಿಯನ್ ಮಾಸ್ಟರ್ ಆ್ಯತ್ಲೆಟಿಕ್ನ ಚೇರ್ಮನ್ ಅಮರೇಂದ್ರ ರೆಡ್ಡಿ, ಐ.ಎಂ.ಎ. ಹಿರಿಯ ಉಪಾಧ್ಯಕ್ಷ ಧರ್ಮಪಾಲ ಶರ್ಮ, ಸಂಘಟನಾ ಸಮಿತಿಯ ಅಧ್ಯಕ್ಷ ಕೆ.ತೇಜೋಮಯ, ದ. ಕ. ಮಾಸ್ಟರ್ ಆ್ಯತ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಕೆ.ಎಸ್.ಕೋದಂಡ ರಾಮೇಗೌಡ, ಇಂಡಿಯಾ ಮಾಸ್ಟರ್ ಆ್ಯತ್ಲೆಟಿಕ್ನ ಕಾರ್ಯದರ್ಶಿ ಜೆರಾಲ್ಡ್ ಡಿ”ಸೋಜಾ, ಸಂಘಟನಾ ಕಾರ್ಯದರ್ಶಿ ರೈಮಂಡ್ ಡಿ”ಸೋಜಾ ಉಪಸ್ಥಿತರಿದ್ದರು.
ಏಷ್ಯನ್ ಆ್ಯತ್ಲೆಟಿಕ್ಸ್ಗೆ ಆಯ್ಕೆ
ಈ ಕ್ರೀಡಾಕೂಟದಲ್ಲಿ ವಿಜೇತರಾದ ಆ್ಯತ್ಲೀಟ್ಗಳು ಮುಂದಿನ ಆಗಸ್ಟ್ 18, 19ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಏಷ್ಯನ್ ಮಾಸ್ಟರ್ ಆ್ಯತ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.