ಮೈಸೂರಲ್ಲಿ ಅರೆ ಸೇನಾಪಡೆ ಯೋಧರ ಗಸ್ತು
Team Udayavani, Apr 16, 2018, 1:01 PM IST
ಮೈಸೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ ಮತಬೇಟೆ ಜೋರಾಗಿದ್ದು, ಅದರ ಬೆನ್ನಲ್ಲೆ ಚುನಾವಣಾ ಭದ್ರತೆಗೆಂದು ಆಗಮಿಸಿರುವ ಅರೆ ಸೇನಾಪಡೆಯ ಯೋಧರು ಮೈಸೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಭಾನುವಾರ ಪಥ ಸಂಚಲನ ನಡೆಸಿದರು.
ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಬೆದರಿಸಿ, ವಿವಿಧ ಆಮಿಷವೊಡ್ಡುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಪಥ ಸಂಚಲನ ನಡೆಸಿದ ಅರೆ ಸೇನಾಪಡೆ ಯೋಧರು, ಮತದಾರರೇ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ಸಾರಿದರು. ನಗರದ ಚಾಮರಾಜ ಕ್ಷೇತ್ರದಿಂದ ಆರಂಭಗೊಂಡ ಪಥ ಸಂಚಲನ, ಕೆ.ಆರ್.ಕ್ಷೇತ್ರ, ಎನ್.ಆರ್.ಕ್ಷೇತ್ರ ವ್ಯಾಪ್ತಿಯ ಹಲವು ಬಡಾವಣೆಗಳಲ್ಲಿ ಸಂಚರಿಸಿತು.
ಸ್ಥಳೀಯ ಪೊಲೀಸ್ ಠಾಣೆಯ ಗರುಡ, ಪಿಸಿಆರ್ ಹಾಗೂ ನಗರ ಪೊಲೀಸ್ ಇಲಾಖೆಯ ವಜ್ರ ವಾಹನದ ಬೆಂಗಾವಲಿನಲ್ಲಿ ಸಂಚರಿಸಿದ ಪಥ ಸಂಚಲನದಲ್ಲಿ, ಬಿಎಸ್ಎಫ್, ಸಶಸ್ತ್ರ ಸೀಮಾ ಬಲ್(ಎಸ್ಎಸ್ಬಿ), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ), ರ್ಯಾಪಿಡ್ ಆಕ್ಷನ್ ಪೋರ್ಸ್(ಆರ್ಎಎಪ್) ಸಿಬ್ಬಂದಿ ತಮ್ಮ ವಾಹನಗಳಲ್ಲಿ ಕುಳಿತು ವಿವಿಧ ರಸ್ತೆಗಳಲ್ಲಿ ಸಂಚರಿಸಿದರು.
ಮಾರ್ಗದುದ್ದಕ್ಕೂ ಸ್ಥಳೀಯ ಪೊಲೀಸ್ ಠಾಣೆಗಳಿಗೆ ತೆರಳಿ ಮತದಾರರ ಪಟ್ಟಿ, ಸಂಖ್ಯೆ, ಮತಗಟ್ಟೆಗಳ ಸಂಖ್ಯೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು. ನಗರದ ಚಾಮರಾಜ ಜೋಡಿ ರಸ್ತೆ, ನಜರ್ಬಾದ್, ಟೆರೆಷಿಯನ್ ಕಾಲೇಜು, ಅಗ್ರಹಾರ, ಲಕ್ಷ್ಮೀಪುರಂ, ಕುವೆಂಪುನಗರ, ಪಡುವಾರಹಳ್ಳಿ, ಒಂಟಿಕೊಪ್ಪಲ್, ಜಯಲಕ್ಷ್ಮೀಪುರಂ, ಗೋಕುಲಂ, ವಿಜಯನಗರ, ಹಿನಕಲ್, ಇಲವಾಲ ಸೇರಿದಂತೆ ವಿವಿಧೆಡೆ ಸಂಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.