ಕರ್ನಾಟಕದ ಕೋಟೆಗಳು ಉಳಿಸುವ ಕೆಲಸವಾಗಲಿ


Team Udayavani, Apr 16, 2018, 1:01 PM IST

m1-karnataka.jpg

ಮೈಸೂರು: ಛಾಯಾಗ್ರಾಹಕ ವಿಶ್ವನಾಥ್‌ ಸುವರ್ಣ ಕರುನಾಡ ಕೋಟೆಗಳ ಸುವರ್ಣ ನೋಟ ಕೃತಿಯ ಮೂಲಕ ಕರ್ನಾಟಕದ ಇತಿಹಾಸವನ್ನು ಕಟ್ಟಿಕೊಡುವ ಕೆಲಸ ಮಾಡಿದ್ದಾರೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು.

ನಗರದ ಜೆಎಸ್‌ಎಸ್‌ ಆಸ್ಪತ್ರೆ ಆವರಣದ ಶ್ರೀ ಶಿವರಾತ್ರಿ ರಾಜೇಂದ್ರ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್‌ ಸುವರ್ಣ ಹೊರತಂದಿರುವ ಕರುನಾಡ ಕೋಟೆಗಳ ಸುವರ್ಣ ನೋಟ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಬದ್ಧತೆ, ನಿಷ್ಠೆ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದನ್ನು ವಿಶ್ವನಾಥ್‌ ಸುವರ್ಣ ತೋರಿಸಿದ್ದಾರೆ.

ರಾಜ್ಯದ ಪುರಾತತ್ವ ಇಲಾಖೆ ಮಾಡಬೇಕಾದ ಕೆಲಸವನ್ನು ವಿಶ್ವನಾಥ್‌ ಸುವರ್ಣ ಮಾಡಿದ್ದು, ಪುರಾತತ್ವ ಇಲಾಖೆ ಈಗಲಾದರೂ ಎಚ್ಚೆತ್ತು, ಕರ್ನಾಟಕದ ಮಹತ್ವದ ಕೋಟೆಗಳನ್ನು ಉಳಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸುವರ್ಣ ಹೊರತಂದಿರುವ ಪುಸ್ತಕಗಳನ್ನು ರಾಜ್ಯದ ಎಲ್ಲಾ ಗ್ರಂಥಾಲಯಗಳಲ್ಲಿ ಲಭಿಸುವಂತೆ ಮಾಡಬೇಕಿದೆ ಎಂದರು.

ಕರ್ನಾಟಕದಲ್ಲಿ ಜಲದುರ್ಗ, ಗಿರಿದುರ್ಗ, ವನದುರ್ಗ ಹಾಗೂ ಸ್ಥಳದುರ್ಗ ಎಂಬ ನಾಲ್ಕು ಬಗೆಯ ವೈವಿಧ್ಯಮಯ ಕೋಟೆಗಳಿವೆ. ಅವುಗಳ ಪೈಕಿ ರಾಜ್ಯದಲ್ಲಿ ವನದುರ್ಗಗಳು ಹೆಚ್ಚಾಗಿವೆ. ಈ ಎಲ್ಲಾ ಕೋಟೆಗಳ ಛಾಯಾಚಿತ್ರಗಳು, ಮಾಹಿತಿಗಳನ್ನು ಪುಸ್ತಕದಲ್ಲಿ ಕಟ್ಟಿಕೊಟ್ಟಿರುವ ಈ ಪುಸ್ತಕಕ್ಕೆ ವರ್ಷಗಳು ಕಳೆದಂತೆ ಹೆಚ್ಚಿನ ಮಹತ್ವ ದೊರೆಯಲಿದೆ. ಈ ನಿಟ್ಟಿನಲ್ಲಿ ಕೋಟೆಗಳ ಛಾಯಾಚಿತ್ರಗಳನ್ನು ಸೆರೆ ಹಿಡಿದಿರುವ ವಿಶ್ವನಾಥ್‌ ಸುವರ್ಣ, ಪರಿಸರ ಪ್ರಜ್ಞೆಯೊಂದಿಗೆ ಕೆಲವು ಫೋಟೋಗಳನ್ನು ತೆಗೆದಿದ್ದಾರೆ. ಛಾಯಾಗ್ರಾಹಕರಿಗೆ ಸಮಯಪ್ರಜ್ಞೆ ಹಾಗೂ ಕರ್ತವ್ಯಪ್ರಜ್ಞೆ ಅಗತ್ಯವಿದೆ ಎಂದು ಹೇಳಿದರು.

ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್‌ ಸುವರ್ಣ ಮಾತನಾಡಿ, ಈ ಹಿಂದೆ ಬೀದರ್‌, ಕಲಬುರ್ಗಿ ಕೋಟೆಗಳ ಛಾಯಾಚಿತ್ರವನ್ನು ತೆಗೆದಾಗ, ಕರ್ನಾಟಕದಲ್ಲಿರುವ ಕೋಟೆಗಳ ಛಾಯಾಚಿತ್ರಗಳನ್ನು ಸೆರೆಹಿಡಿಯುವಂತೆ ಕೆಲವರು ಸಲಹೆ ನೀಡಿದರು. ಹೀಗಾಗಿ ಎರಡು ವರ್ಷಗಳ ಹಿಂದೆ ಈ ಪ್ರಯತ್ನಕ್ಕೆ ಕೈಹಾಕಿದೆ. ಆದರೆ ಕೋಟೆಗಳ ಚಿತ್ರಗಳನ್ನು ತೆಗೆಯುವುದು ಸುಲಭದ ಕೆಲಸವಲ್ಲ ಎಂದರು.

ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕರುನಾಡ ಕೋಟೆಗಳ ಸುವರ್ಣ ನೋಟ ಕೃತಿಯನ್ನು ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಮೈಸೂರು ವಿವಿ ಪ್ರಾಚ್ಯ ವಿದ್ಯಾ ಸಂಶೋಧನಾಲಯದ ನಿರ್ದೇಶಕ ಡಾ.ಎಸ್‌.ಶಿವರಾಜಪ್ಪ, ಎಪ್‌ಕೆಸಿಸಿಐ ಹಿರಿಯ ಉಪಾಧ್ಯಕ್ಷ ಸುಧಾಕರ್‌ ಎಸ್‌.ಶೆಟ್ಟಿ ಇನ್ನಿತರರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.