ಕದನ ಕಥನ : ಮನೆ ಬಾಗಿಲಿಗೇ ಬಂದಿದ್ದ MLA ಟಿಕೆಟ್‌ ಕೈತಪ್ಪಿದಾಗ…!


Team Udayavani, Apr 17, 2018, 8:30 AM IST

Election-Symbolic-600.jpg

ಪಡುಬಿದ್ರಿ: ಅಂದು ಬಿಜೆಪಿಯ ಟಿಕೆಟ್‌ ಮನೆಬಾಗಿಲಿಗೇ ಬಂದಿತ್ತು. ಮರುದಿನ ಮಾತ್ರ ಚಿತ್ರಣವೇ ಬೇರೆಯಾಗಿತ್ತು. ಲಾಲಾಜಿ ಮೆಂಡನ್‌ ಅಭ್ಯರ್ಥಿಯಾಗಿದ್ದರು. ಹೀಗೆನ್ನುತ್ತಾರೆ ಪಕ್ಷದ ಹಿರಿಯ ನಾಯಕಿ ಶೀಲಾ ಕೆ. ಶೆಟ್ಟಿ ಎರ್ಮಾಳು.

1994ರ ಅವಧಿ, ಆಗಿನ ದ.ಕ. ಜಿಲ್ಲೆಯ ಉತ್ತರ ಭಾಗದಲ್ಲಿ ಬಿಜೆಪಿಯಲ್ಲಿ ಶೀಲಾ ಶೆಟ್ಟಿ ಹೆಸರಾಗಿದ್ದರೆ; ದಕ್ಷಿಣ ಭಾಗದಲ್ಲಿ ಶಕುಂತಳಾ ಶೆಟ್ಟಿ ಹೆಸರಿದ್ದ ಕಾಲವದು. ಒಂದು ದಿನ ಪಕ್ಷದ ಹಿರಿಯರಾದ ಡಾ| ವಿ.ಎಸ್‌. ಆಚಾರ್ಯ ಮತ್ತು ಗುಜ್ಜಾಡಿ ಪ್ರಭಾಕರ ನಾಯಕ್‌ ಅವರು ಬಿ ಫಾರ್ಮ್ ಹಿಡಿದುಕೊಂಡು ನನ್ನ ಮನೆಗೆ ಆಗಮಿಸಿದ್ದರು. ಪತಿ ಕುಟ್ಟಿ ಶೆಟ್ಟಿ ಅವರನ್ನು ಅದಾಗಲೇ ಒಪ್ಪಿಸಿದ್ದ ಡಾ| ಆಚಾರ್ಯರು ನನ್ನಲ್ಲಿ ಚುನಾವಣೆಗೆ ತಯಾರಾಗುವಂತೆ ತಿಳಿಸಿ ಹೋಗಿದ್ದರು. ಆದರೆ ಮರುದಿನವೇ ವಾತಾವರಣ ಬದಲಾಯಿತು. ಲಾಲಾಜಿ ಮೆಂಡನ್‌ ಅಭ್ಯರ್ಥಿಯಾಗಿದ್ದರು. ಕಾರಣವೇನೋ ಗೊತ್ತಿಲ್ಲ. ಆದರೆ ನಾನೇನೂ ಕಸರತ್ತು ಮಾಡಲು ಹೋಗಲಿಲ್ಲ. ಚುನಾವಣಾ ಕಣಕ್ಕಿಳಿದು ಬಿಜೆಪಿಗಾಗಿ ದುಡಿದೆ. ಆದರೂ ಬಿಜೆಪಿಗೆ ಸೋಲಾಯ್ತು ಎನ್ನುತ್ತಾರೆ ಶೀಲಾ ಶೆಟ್ಟಿ.

80ರ ದಶಕದಲ್ಲಿ ಮನೆಯವರ ಕ್ಷಮೆ ಕೋರಿ ರಾಜಕೀಯ ರಂಗಕ್ಕಿಳಿದವಳು ನಾನು. ರಾಜಕೀಯ ಎಂದರೆ ಮಹಿಳೆಯರು ಮಾರು ದೂರ ಓಡಿ ಹೋಗುತ್ತಿದ್ದ ಕಾಲವದು. ಐದು ಬಾರಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಜಿಲ್ಲೆಯಲ್ಲಿ ಸಕ್ರಿಯವಾಗಿದ್ದ ಕಾಲದಲ್ಲಿ ನಾನೂ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದೇನೆ. ಮಹಿಳಾ ಹೋರಾಟಗಾರ್ತಿಯಾಗಿ ರಾಜಕೀಯದ ಮೊದಲ ದಿನದಿಂದಲೂ ಮಹಿಳೆಯರಿಗೆ ರಾಜಕೀಯದಲ್ಲಿ ಸಮಾನ ಸ್ಥಾನಮಾನ ನೀಡಿಕೆ, ಉದ್ಯೋಗ ಕ್ಷೇತ್ರದಲ್ಲೂ ಮಹಿಳೆಗೆ ಹೆಚ್ಚಿನ ಸಮಪಾಲಿನ ಆದ್ಯತೆ, ಮಹಿಳಾ ದೌರ್ಜನ್ಯ, ಅತ್ಯಾಚಾರಗಳ ನಿಗ್ರಹಕ್ಕೂ ಸೂಕ್ತ ಕಾನೂನಿನ ಮಾರ್ಪಾಟುಗಳನ್ನು ಬಯಸಿದ್ದೆ. ಮಹಿಳಾ ಸ್ವ ಉದ್ಯೋಗಕ್ಕೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೆ. ಅದಕ್ಕಾಗಿ ಹೆಣ್ಮಕ್ಕಳ ಶಿಕ್ಷಣವನ್ನು ಬೆಂಬಲಿಸುವ ಪ್ರಯತ್ನ ನಡೆಸುತ್ತಿದ್ದೆ. ಗಂಡು, ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಭೇದ ಸಲ್ಲದು. ಹಾಗೆಂದು ಹೆಣ್ಣು ಮನೆ ಬಿಟ್ಟು ಸಮಾಜ ಸೇವೆಗೆ ಬರುವುದಲ್ಲ. ಇಂದು ಮನೆ ಮತ್ತು ಸಮಾಜ ಸೇವೆಗಳು ತುಲನಾತ್ಮಕವಾಗಿ ನಿಭಾಯಿಸುತ್ತಿರುವವಳು ಹೆಣ್ಣು ಎಂಬುದನ್ನು ನಿರ್ಭೀತಿಯಿಂದ ನಾನು ಹೇಳಬಲ್ಲೆ ಎನ್ನುತ್ತಾರೆ ಶೀಲಾ ಶೆಟ್ಟಿ.

ಈ ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಮಾತೆಯರ ಕೊಡುಗೆ ಅಪಾರ. ಶಿಕ್ಷಣ ವಂಚಿತರಾಗಿದ್ದ ಕಾಲದಲ್ಲೂ ಹೆಣ್ಣುಮಕ್ಕಳು ಈ ದೇಶದ ಜ್ಞಾನ ಸಂಪತ್ತಿನ ಹರಿಕಾರರಾಗಿದ್ದರು. ಸಂಸ್ಕೃತಿಯನ್ನು ಬೆಳೆಸುತ್ತಾ ಬಂದಿದ್ದರು. ಶಿಕ್ಷಣದಿಂದಲೇ ನಾವು ಎಲ್ಲವನ್ನೂ ಸಾಧಿಸುತ್ತೇವೆ ಎಂಬುದು ಭ್ರಮೆ. ಹಿಂದಿನ ಕಾಲದ ಶಿಕ್ಷಣ ವಂಚಿತ ಹೆಣ್ಮಕ್ಕಳು ಬಹಳಷ್ಟು ಅನುಭವಿಗಳೂ ಜ್ಞಾನಸಂಪತ್ತು ಇದ್ದವರೂ ಸಂಸ್ಕೃತಿವಂತರೂ ಆಗಿದ್ದರು. ದೊಡ್ಡ ಕೂಡು ಕುಟುಂಬವನ್ನು ತೂಗಿಸಿಕೊಂಡು ಹೋಗುವ ಚಾಕಚಕ್ಯತೆ ಅವರಲ್ಲಿತ್ತು. ಭಾರತ ದೇಶದಲ್ಲಿ ಮಹಿಳೆಯರನ್ನು ಇನ್ನಷ್ಟು ಗೌರವದಿಂದ ಕಾಣುವಂತಾಗಬೇಕು ಎನ್ನುವುದು ಶೀಲಾ ಶೆಟ್ಟಿ ಅವರ ಅಭಿಪ್ರಾಯ.

ಪಕ್ಷದ ಸಂಘಟನೆಗಾಗಿ ಮಹಿಳಾ ಮೋರ್ಚಾ ನಾಯಕಿಯಾಗಿ ಬೈಂದೂರುವರೆಗೆ ಪಕ್ಷ ಸಂಘಟನೆಗಾಗಿ ಓಡಾಡುತ್ತಿರುವೆ. ವಯಸ್ಸಾಗುತ್ತಿದ್ದರೂ 25ರ ಹರೆಯದ ಯುವತಿಯರೂ ನಾಚುವಂತೆ ಕೆಲಸ ಕಾರ್ಯ ಮಾಡುತ್ತಿದ್ದೇನೆ. ಎಂ.ಎಲ್‌.ಎ. ಸ್ಥಾನಮಾನವಲ್ಲದಿದ್ದರೂ ಕಲೆ, ಸಾಹಿತ್ಯ ಮತ್ತು ಸಮಾಜ ಸೇವೆಯನ್ನು ಗಮನಿಸಿ ವಿಧಾನ ಪರಿಷತ್‌ ಸದಸ್ಯೆ ಸ್ಥಾನವನ್ನಾದರೂ ಪಕ್ಷವು ಕೊಡಬಹುದಿತ್ತು ಎಂದು ಶೀಲಾ ಶೆಟ್ಟಿ ಹೇಳಿದ್ದಾರೆ.

— ಆರಾಮ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.