ನಾಳೆ, ನಾಡಿದ್ದು ಸಾಮಾನ್ಯ ಪ್ರವೇಶ ಪರೀಕ್ಷೆ


Team Udayavani, Apr 17, 2018, 7:00 AM IST

Ban17041807Medn.jpg

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಏ.18ರಿಂದ ಆರಂಭವಾಗಲಿದೆ.

1,00,071 ಪುರುಷ ಅಭ್ಯರ್ಥಿ, 98,568 ಮಹಿಳಾ ಅಭ್ಯರ್ಥಿ ಸೇರಿ 1,98,639 ಅಭ್ಯರ್ಥಿಗಳು ಸಿಇಟಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರಿನ 86 ಸೇರಿ ರಾಜ್ಯದ 430 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಏ.18ರ ಬೆಳಗ್ಗೆ 10.30ರಿಂದ 11.50ರ ತನಕ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ತನಕ ಗಣಿತ ಮತ್ತು ಏ.19ರ ಬೆಳಗ್ಗೆ 10.30ರಿಂದ 11.50ರ ತನಕ ಭೌತಶಾಸ್ತ್ರಹಾಗೂ ಮಧ್ಯಾಹ್ನ 2.30ರಿಂದ 3.50ರ ತನಕ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. 

ಹೊರನಾಡು ಮತ್ತು ಗಡಿನಾಡಿನ ಕನ್ನಡ ಅಭ್ಯರ್ಥಿಗಳಿಗೆ ಬೆಂಗಳೂರು ಕೇಂದ್ರದಲ್ಲಿ ಏ.20ರಂದು ಕನ್ನಡ ಪರೀಕ್ಷೆ ನಡೆಯ
ಲಿದೆ. ಹೊರನಾಡು, ಗಡಿನಾಡು ಭಾಗದ 2,240 ಅಭ್ಯರ್ಥಿಗಳು ಕನ್ನಡ ಪರೀಕ್ಷೆ ಬರೆಯಲಿದ್ದಾರೆ.

ವಿದ್ಯಾರ್ಥಿಗಳಿಗೆ ಸೂಚನೆ: ಓಎಂಆರ್‌ ಉತ್ತರ ಪತ್ರಿಕೆಯು ಅಭ್ಯರ್ಥಿಗೆ ನಿರ್ದಿಷ್ಟವಾಗಿದ್ದು,ಪ್ರವೇಶ ಪತ್ರದ ಸಂಖ್ಯೆ, ಅಭ್ಯರ್ಥಿ ಹೆಸರು ಹಾಗೂ ಪ್ರಶ್ನೆಪತ್ರಿಕೆಯ ವರ್ಷನ್‌ ಕೋಡ್‌ ಅದರಲ್ಲಿ ಮುದ್ರಿಸಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಓಎಂಆರ್‌ ಉತ್ತರ ಪತ್ರಿಕೆಯಲ್ಲಿ ಎಲ್ಲವೂ ಸರಿಯಾಗಿದೆ ಎಂಬುದನ್ನು ಪರಿಶೀಲಿಸಿ ನಂತರ ಪರೀಕ್ಷೆ ಬರೆಯಬೇಕು. ಓಎಂಆರ್‌ ಶೀಟ್‌ನಲ್ಲಿ ಉತ್ತರ ಟಿಕ್‌ ಮಾಡಲು ನೀಲಿ ಅಥವಾ ಕಪ್ಪು ಶಾಯಿ ಬಾಲ್‌ ಪೆನ್‌ ತೆಗೆದುಕೊಂಡು ಹೋಗಬೇಕು. ಪರೀಕ್ಷೆ ಆರಂಭಕ್ಕೂ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿ ಇರಬೇಕೆಂದು ಪ್ರಾಧಿಕಾರ ಸೂಚಿಸಿದೆ.

ಪ್ರವೇಶ ಪತ್ರದ ಜತೆಗೆ ಕಾಲೇಜಿನ ಗುರುತಿನ ಚೀಟಿ, 12ನೇ ತರಗತಿ ಪ್ರವೇಶ ಪತ್ರ, ಬಸ್‌ಪಾಸ್‌,ಆಧಾರ್‌ ಕಾರ್ಡ್‌, ಪಾನ್‌ಕಾರ್ಡ್‌ ಅಥವಾ ಯಾವುದಾದರೂ ಒಂದು ಗುರುತಿನ ಚೀಟಿ ಕೊಂಡೊಯ್ಯಬೇಕು. ಪ್ರಶ್ನೆಗಳು ಕನ್ನಡ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿರುತ್ತದೆ. ಯಾವುದೇ ಭಾಷೆಯ ಪ್ರಶ್ನೆಯಲ್ಲಿ ಸಂಶಯ ಬಂದರೂ ಇಂಗ್ಲಿಷ್‌ ಭಾಷೆಯ ಪ್ರಶ್ನೆಯೇ ಅಂತಿಮವೆಂದು ಪರಿಗಣಿಸಬೇಕೆಂದು ನಿರ್ದೇಶಿಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ.

ಕೆಪಿಎಸ್ಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು:
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 12ರಿಂದ 31ರವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು,
ನವದೆಹಲಿ ಹಾಗೂ ಮುಸ್ಸೂರಿಯಲ್ಲಿ ನಿಗದಿಯಾಗಿದ್ದ 2018ನೇ ಸಾಲಿನ ಇಲಾಖಾ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮೇ 19ರಿಂದ ಜೂನ್‌ 8ರವರೆಗೆ ಪರೀಕ್ಷೆಗಳು ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.